Home namma chikmagalur chikamagalur ಜನವರಿ ಮೊದಲ ವಾರದಲ್ಲಿ ರೈತ ಸಂಘದ ಜಿಲ್ಲಾ ಸಮಾವೇಶ
chikamagalurHomeLatest Newsnamma chikmagalur

ಜನವರಿ ಮೊದಲ ವಾರದಲ್ಲಿ ರೈತ ಸಂಘದ ಜಿಲ್ಲಾ ಸಮಾವೇಶ

Share
Share

ಚಿಕ್ಕಮಗಳೂರು: ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಜನವರಿ ಮೊದಲ ವಾರದಲ್ಲಿ ರೈತ ಸಂಘದ ಜಿಲ್ಲಾ ಸಮಾವೇಶ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಹೇಶ್ ತಿಳಿಸಿದರು.

ಕಂದಾಯ ಮತ್ತು ಅರಣ್ಯ ಭೂಮಿ ಸಮಸ್ಯೆ ಬಗೆಹರಿಸಬೇಕು. ಅರಣ್ಯ ಕಾಯ್ದೆಗಳಿಗೆ ತಿದ್ದುಪಡಿ ತರಬೇಕು. ಅರಣ್ಯ ಮತ್ತು ಕಂದಾಯ ಭೂಮಿಗೆ ಜಂಟಿ ಸರ್ವೆ ನಡೆಸಿ ಕಂದಾಯ ಭೂಮಿಯನ್ನು ಗುರುತಿಸಬೇಕು. ಈ ಎಲ್ಲಾ ವಿಷಯಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸುದ್ದಿಗೋಷ್ಠಿ ಯಲ್ಲಿ ಬುಧವಾರ ಹೇಳಿದರು.

ಸಮಾವೇಶದಲ್ಲಿ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕಾರ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಸಂಘದ ಪ್ರಧಾನ ಕಾರ್ಯದರ್ಶಿ ವಸಂತ್‌ಕುಮಾರ್, ಶಿವಾನಂದ ಕೊಗ್ವೆ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲೆಯ ರೈತರು ಹಲವು ಸಮಸ್ಯೆಗಳ ನಡುವೆ ಬದುಕುತ್ತಿದ್ದಾರೆ. ಕುಡಿಯುವ ನೀರು ಮತ್ತು ವಾಸಕ್ಕೆ ಬೇಕಿರುವ ಮನೆ, ನಿವೇಶನಕ್ಕಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ. ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕು ಪತ್ರಕ್ಕಾಗಿ ನಮೂನೆ 50, 53, 57ರಲ್ಲಿ ಅರ್ಜಿ ಸಲ್ಲಿಸಿ ರೈತರು ಕಾಯುತ್ತಿದ್ದಾರೆ. ಆ ಅರ್ಜಿಗಳ ವಿಲೇವಾರಿ ಶೀಘ್ರವೇ ಆಗಬೇಕು. 5 ಎಕರೆ ಒಳಗಿನ ಬಡವರ ಒತ್ತುವರಿ ಭೂಮಿಯನ್ನು ಸಕ್ರಮ ಮಾಡಿ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ವಸತಿ, ಶಾಲೆ, ಕಾಲೇಜು, ಆಸ್ಪತ್ರೆ, ಸ್ಮಶಾನಕ್ಕೆ ಪ್ರತಿ ಗ್ರಾಮದಲ್ಲೂ ಭೂಮಿ ಕಾಯ್ದಿರಿಸಬೇಕು. ಅರಣ್ಯದ ಅಂಚಿನ ರೈತರಿಗೆ ಕಾಡುಪ್ರಾಣಿಗಳಿಂದ ಆಗುತ್ತಿರುವ ಪ್ರಾಣಹಾನಿ, ಬೆಳೆಹಾನಿ ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಪ್ರಾಣ ಹಾನಿಯಾದ ಕುಟುಂಬಗಳಿಗೆ ಏಕ ಕಂತಿನಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಬಗ್ಗೆಯೂ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ಚಂದ್ರಶೇಖರ್, ಉಪಾಧ್ಯಕ್ಷ ಶಿವಕುಮಾರ್, ಮುಖಂಡರಾದ ಆನಂದಕುಮಾರ್, ದೇವರಾಜೇಗೌಡ, ಛಾಯಾಪತಿ ಇದ್ದರು.

Farmers’ Association district convention in the first week of January

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...