ಶೃಂಗೇರಿ: ಬ್ಯಾಂಕ್ನಿಂದ ಕೃಷಿ ಸಾಲ ಮಂಜೂರು ಮಾಡಿಸಿ, ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಆರೋಪ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ನೆಮ್ಮಾರು ಗ್ರಾಮದ ನಿವಾಸಿ ಗಿರೀಶ್ ಹಾಗೂ ಅವರ ಸ್ನೇಹಿತ ಜ್ಞಾನೇಂದ್ರ ಅವರಿಗೆ ರವಿಕುಮಾರ್ ಎಂಬಾತ ಪರಿಚಯವಾಗಿದ್ದು, ಬ್ಯಾಂಕ್ನಲ್ಲಿ ತನಗೆ ಪ್ರಭಾವಿ ಸಂಪರ್ಕವಿದೆ ಎಂದು ಹೇಳಿಕೊಂಡಿದ್ದ ಎನ್ನಲಾಗಿದೆ.
ಕೃಷಿ ಅಭಿವೃದ್ಧಿಗಾಗಿ ಇಬ್ಬರಿಗೂ ತಲಾ ₹25 ಲಕ್ಷ ಸಾಲ ಕೊಡಿಸುವುದಾಗಿ ಹಾಗೂ ಸಾಲದ ಮೊತ್ತದಲ್ಲಿ ಶೇ.50ರಷ್ಟು ಸಬ್ಸಿಡಿ ಮತ್ತು ಕಡಿಮೆ ಬಡ್ಡಿದರದ ಸೌಲಭ್ಯ ದೊರೆಯಲಿದೆ ಎಂದು ರವಿಕುಮಾರ್ ಆಮಿಷವೊಡ್ಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸಾಲದ ಪ್ರಕ್ರಿಯೆ ಶುಲ್ಕ ಹಾಗೂ ದಾಖಲೆಗಳ ಪರಿಶೀಲನೆಗಾಗಿ ಹಣ ಬೇಕೆಂದು ಹೇಳಿ, ಹಂತ ಹಂತವಾಗಿ ಬ್ಯಾಂಕ್ ಖಾತೆಗೆ ಒಟ್ಟು ₹3.60 ಲಕ್ಷ ವರ್ಗಾವಣೆ ಮಾಡಿಸಿಕೊಂಡಿದ್ದಾನೆ ಎನ್ನಲಾಗಿದೆ. ಹಣ ಪಡೆದ ಬಳಿಕ ಸಾಲವನ್ನು ಮಂಜೂರು ಮಾಡಿಸದೆ, ಸಂತ್ರಸ್ತರು ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಸಂಪರ್ಕಕ್ಕೆ ಸಿಗದೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆಗೊಳಗಾಗಿರುವುದು ಅರಿವಿಗೆ ಬಂದ ಬಳಿಕ ಗಿರೀಶ್ ಹಾಗೂ ಜ್ಞಾನೇಂದ್ರ ಶೃಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆ ಹಾಗೂ ಹಣದ ವಹಿವಾಟಿನ ಕುರಿತು ತನಿಖೆ ಮುಂದುವರಿಸಿದ್ದಾರೆ.
Farmers defrauded after being led to believe they would receive a 50% subsidy on agricultural loans.
Leave a comment