Home namma chikmagalur chikamagalur ಆಲಿಕಲ್ಲು ಮಳೆಯಿಂದ ರೈತರು ಕಂಗಾಲು
chikamagalurHomeLatest Newsnamma chikmagalur

ಆಲಿಕಲ್ಲು ಮಳೆಯಿಂದ ರೈತರು ಕಂಗಾಲು

Share
Share

ಚಿಕ್ಕಮಗಳೂರು:  ಉಗಾದಿ ಹಬ್ಬದ ಹಿಂದೆ_ಮುಂದೆ ಮಳೆ ಬರುತ್ತದೆ. ಆದರೆ ಈ ವರ್ಷ ಆರಂಭವಾದ ಮಳೆಯಲ್ಲಿ ರಾಶಿ,ರಾಶಿ ಆಲಿಕಲ್ಲು ಮಳೆ ಬರುತ್ತಿರುವುದು ನೋಡಿ ರೈತರು ,ಬೆಳೆಗಾರರು ಕಂಗಲಾಗಿದ್ದಾರೆ ಮುಂದೆ ಏನು ಎಂಬ ಚಿಂತೆ ಉಂಟಾಗಿದೆ.

ಹವಮಾನ ವೈಪರೀತ್ಯಗಳಿಂದ ದಪ್ಪ, ದಪ್ಪ ಆಲಿಕಲ್ಲು ಬೀಳುತ್ತಿವೆ ಎನ್ನಲಾಗುತ್ತಿದೆ. ಜಿಲ್ಲೆಯಲ್ಲಿ ಎರಡು ಬಾರಿ ಆಲಿಕಲ್ಲು ಮಳೆ ಬಂದಿದೆ ಆದರೆ ನಿನ್ನೆ ಸುರಿದ ಮಳೆಯಲ್ಲಿ ರಾಶಿ,ರಾಶಿ ಮತ್ತು ನಿರೀಕ್ಷೆ ಮೀರಿದ ಚಪ್ಪಡಿ ಸೈಜಿನ ಆಲಿಕಲ್ಲು ಬಿದ್ದಿವೆ.

ಖಾಂಡ್ಯ ಹೋಬಳಿ,ಕೊಪ್ಪ , ಬಾಳೆಹೊನ್ನುರು ,ಶೃಂಗೇರಿ ಕೆಲ ಭಾಗಗಳಲ್ಲಿ ಮೂಡಿಗೆರೆ ತಾಲೂಕಿನ ಕೆಲವು ಭಾಗಗಳಲ್ಲಿ ಮತ್ತು ತರೀಕೆರೆಯ ಸುತ್ತ ಮುತ್ತ ಆಲಿಕಲ್ಲು ಮಳೆ ಅರ್ಧ ಗಂಟೆ ಸುರಿದಿರುವುದು ಜಿಲ್ಲೆಯ ಜನರಿಗೆ ಆತಂಕ ಸೃಷ್ಟಿಯಾಗಿದೆ.

ಆಲಿಕಲ್ಲು ಮಳೆಯಿಂದ ಮಲೆನಾಡಿನ ಕಾಫಿ ಮತ್ತು ಅಡಕೆ ಬೆಳೆಗಾರರು ಬಯಲು ಸೀಮೆಯ ಅಡಿಕೆ ಬೆಳೆಗಾರರ ಜೊತೆಗೆ ತರಕಾರಿ ಬೆಳೆದ ರೈತರಿಗೆ ಆತಂಕ ಉಂಟಾಗಿದೆ ಎನ್ನಲಾಗುತ್ತಿದೆ.

ಮಲೆನಾಡಿನ ಕಾಫಿ,ಕಾಳು ಮೆಣಸು,ಅಡಿಕೆ ಮತ್ತು ಕೆಲವು ತರಕಾರಿ ಬೆಳೆಗಳಾಳು ಮತ್ತು ಬಯಲುಸೀಮೆಯ ಅಡಿಕೆ ಹಾಗು ಮಾವು, ಮೆಣಸು ಮತ್ತು ತರಕಾರಿ ಬೆಳೆಗಳಾದ ಟಮೋಟ, ಮುಳುಗಾಯಿ,ಕ್ಯಾರೆಟ್, ಬೀಟ್ ರೊಟ್ ,ಸೊಪ್ಪುಗಳು ಮತ್ತಿತರ ತರಕಾರಿಗಳು ನಾಶವಾಗುತ್ತವೆ.

ಬಯಲು ಪ್ರದೇಶಗಳಲ್ಲಿ ಹೆಚ್ಚಾಗಿ ಮಾವು ಬೆಳೆಯುತ್ತಾರೆ ಮುಖ್ಯವಾಗಿ ತರೀಕೆರೆ ತಾಲ್ಲೂಕು ಅಜ್ಜಂಪುರ ತಾಲ್ಲೂಕು ಕಡೂರು ತಾಲ್ಲೂಕು ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ,ಕಸಬಾ ಹೋಬಳಿಗಳಲ್ಲಿ ಮಾವು ಹೆಚ್ಚಾಗಿ ಬೆಳೆಯುತ್ತಾರೆ ಆಲಿಕಲ್ಲು ಮಳೆಯಿಂದ ಫಸಲಿಗೆ ಭಾರಿ ಹೊಡೆತ ಬೀಳುತ್ತದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಆಲಿಕಲ್ಲು ಮಳೆ ಬಂದರೆ ನಮ್ಮ ಕತೆ ಮುಗಿಯುತ್ತದೆ ಸಂಕಷ್ಟ ಕಟ್ಟಿಟ್ಟಾ ಬುಟ್ಟಿ ಎಂದು ನಿಟ್ಟುಸಿರು ಬಿಡುತ್ತಿದ್ದಾರೆ.

Farmers in distress due to hailstorm

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....