Home Latest News Farmers protest:ಅರಣ್ಯ ಇಲಾಖೆಯವರ ವಿರುದ್ದ ರೈತರ ತೀವ್ರ ಆಕ್ರೋಶ ಪ್ರತಿಭಟನೆ
Latest NewsHomeTarikere

Farmers protest:ಅರಣ್ಯ ಇಲಾಖೆಯವರ ವಿರುದ್ದ ರೈತರ ತೀವ್ರ ಆಕ್ರೋಶ ಪ್ರತಿಭಟನೆ

Share
Share

ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ರಂಗೇನಹಳ್ಳಿ ಸರ್ವೇ ನಂಬರ್ 4 ರಲ್ಲಿ ಶಿವಕುಮಾರ್ ಎಂಬ ರೈತ ಈಗಾಗಲೇ 1ಎಕರೆ 20 ಗುಂಟೆ ಜಮೀನಿನಲ್ಲಿ ತೋಟ ಬೆಳೆದಿದ್ದು ಇಂದು ಅರಣ್ಯ ಇಲಾಖೆಯವರು ತೆರವು ಗೊಳಿಸಲು ಹೋದಾಗ ರೈತರು ತೀವ್ರವಾಗಿ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರದ ದ್ವಂದ್ವ ನೀತಿಯಿಂದ ಅಧಿಕಾರಿಗಳ ಉಪಟಳ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು ಬಾವಿಕೆರೆಯಲ್ಲಿ ರಸ್ತೆಗೆ ಕಾರು ಬೈಕ್ ಅಡ್ಡಲಾಗಿ ನಿಲ್ಲಿಸಿ ರಸ್ತೆ ತಡೆ ನಡೆಸಿದರು.3 ಎಕರೆ ಜಮೀನ ಒಳಗಡೆ ಇದ್ದರೆ ತೆರವು ಮಾಡುವಂತಿಲ್ಲ ಎಂಬ ನಿಯಮವನ್ನು ಗಾಳಿಗೆ ತೂರಿ ಇಂದು ತೋಟ ತೆರವುಗೊಳಿಸಲು ಬಂದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ವೇ ನಂಬರ್ 4 ರಲ್ಲಿ 383 ಎಕರೆ ಜಮೀನಿನಲ್ಲಿ ಸಣ್ಣಪುಟ್ಟ ರೈತರು ಅರ್ಧ ಎಕರೆ ಒಂದು ಎಕರೆ ,ಎರಡು ಎಕರೆ ತೋಟ ಬೆಳೆದಿದ್ದು ಅಡಿಕೆ ಚೇಣಿ ಮಾಡಲು ಕೂಡ ಯಾರು ಮುಂದೆ ಬರುತ್ತಿಲ್ಲ ಎಂದು ಬಾವಿಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಬು86 ತಿಳಿಸಿದ್ದಲ್ಲದೆ ಇದು ರೈತರ ಸಾವು ಬದುಕಿನ ಪ್ರಶ್ನೆ ಎನ್ನುತ್ತಾರೆ. ರೈತರು ಡಿ.ಎಫ್.ಒ ಅಶಿಸ್.ಅರ್.ಎಫ್.ಒ ರಾಘವೇಂದ್ರ ಮತ್ತು ತರೀಕೆರೆ ಎ.ಸಿ ಕಾಂತರಾಜ್,  ಮೇಲೆ ಕೆಂಡ ಕಾರುತ್ತಿದ್ದಾರೆ.

ಅರಣ್ಯ ಇಲಾಖೆಯವರ ಲೆಕ್ಕಾಚಾರದಂತೆ ಹೋದರೆ ತರೀಕೆರೆ ತಾಲ್ಲೂಕು ತೆರವುಗೊಳಿಸ ಬೇಕಾಗುತ್ತದೆ. ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಬು86 ಜಯಸ್ವಾಮಿ,ಸೀತರಾಮ್,ಕುಮಾರ್ ಮತ್ತು ಶಿವು ಸೇರಿದಂತೆ ಮಹಿಳೆಯರು ಸೇರಿದಂತೆ ನೂರಾರು ಜನ ಪ್ರತಿಭಟನೆ ನಡೆಸಿದ್ದಾರೆ.

Farmers protest against the forest department

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...