Home Latest News Farmers protest:ಅರಣ್ಯ ಇಲಾಖೆಯವರ ವಿರುದ್ದ ರೈತರ ತೀವ್ರ ಆಕ್ರೋಶ ಪ್ರತಿಭಟನೆ
Latest NewsHomeTarikere

Farmers protest:ಅರಣ್ಯ ಇಲಾಖೆಯವರ ವಿರುದ್ದ ರೈತರ ತೀವ್ರ ಆಕ್ರೋಶ ಪ್ರತಿಭಟನೆ

Share
Share

ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ರಂಗೇನಹಳ್ಳಿ ಸರ್ವೇ ನಂಬರ್ 4 ರಲ್ಲಿ ಶಿವಕುಮಾರ್ ಎಂಬ ರೈತ ಈಗಾಗಲೇ 1ಎಕರೆ 20 ಗುಂಟೆ ಜಮೀನಿನಲ್ಲಿ ತೋಟ ಬೆಳೆದಿದ್ದು ಇಂದು ಅರಣ್ಯ ಇಲಾಖೆಯವರು ತೆರವು ಗೊಳಿಸಲು ಹೋದಾಗ ರೈತರು ತೀವ್ರವಾಗಿ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರದ ದ್ವಂದ್ವ ನೀತಿಯಿಂದ ಅಧಿಕಾರಿಗಳ ಉಪಟಳ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು ಬಾವಿಕೆರೆಯಲ್ಲಿ ರಸ್ತೆಗೆ ಕಾರು ಬೈಕ್ ಅಡ್ಡಲಾಗಿ ನಿಲ್ಲಿಸಿ ರಸ್ತೆ ತಡೆ ನಡೆಸಿದರು.3 ಎಕರೆ ಜಮೀನ ಒಳಗಡೆ ಇದ್ದರೆ ತೆರವು ಮಾಡುವಂತಿಲ್ಲ ಎಂಬ ನಿಯಮವನ್ನು ಗಾಳಿಗೆ ತೂರಿ ಇಂದು ತೋಟ ತೆರವುಗೊಳಿಸಲು ಬಂದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ವೇ ನಂಬರ್ 4 ರಲ್ಲಿ 383 ಎಕರೆ ಜಮೀನಿನಲ್ಲಿ ಸಣ್ಣಪುಟ್ಟ ರೈತರು ಅರ್ಧ ಎಕರೆ ಒಂದು ಎಕರೆ ,ಎರಡು ಎಕರೆ ತೋಟ ಬೆಳೆದಿದ್ದು ಅಡಿಕೆ ಚೇಣಿ ಮಾಡಲು ಕೂಡ ಯಾರು ಮುಂದೆ ಬರುತ್ತಿಲ್ಲ ಎಂದು ಬಾವಿಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಬು86 ತಿಳಿಸಿದ್ದಲ್ಲದೆ ಇದು ರೈತರ ಸಾವು ಬದುಕಿನ ಪ್ರಶ್ನೆ ಎನ್ನುತ್ತಾರೆ. ರೈತರು ಡಿ.ಎಫ್.ಒ ಅಶಿಸ್.ಅರ್.ಎಫ್.ಒ ರಾಘವೇಂದ್ರ ಮತ್ತು ತರೀಕೆರೆ ಎ.ಸಿ ಕಾಂತರಾಜ್,  ಮೇಲೆ ಕೆಂಡ ಕಾರುತ್ತಿದ್ದಾರೆ.

ಅರಣ್ಯ ಇಲಾಖೆಯವರ ಲೆಕ್ಕಾಚಾರದಂತೆ ಹೋದರೆ ತರೀಕೆರೆ ತಾಲ್ಲೂಕು ತೆರವುಗೊಳಿಸ ಬೇಕಾಗುತ್ತದೆ. ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಬು86 ಜಯಸ್ವಾಮಿ,ಸೀತರಾಮ್,ಕುಮಾರ್ ಮತ್ತು ಶಿವು ಸೇರಿದಂತೆ ಮಹಿಳೆಯರು ಸೇರಿದಂತೆ ನೂರಾರು ಜನ ಪ್ರತಿಭಟನೆ ನಡೆಸಿದ್ದಾರೆ.

Farmers protest against the forest department

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...