Home namma chikmagalur chikamagalur ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ
chikamagalurHomeLatest Newsnamma chikmagalur

ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ

Share
Oplus_16908288
Share

ಚಿಕ್ಕಮಗಳೂರು : ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಮೂಲಕ ಖಾಸಗಿಕರಣಗೊಳಿಸುವ ನಿರ್ಧಾರವನ್ನು ಖಂಡಿಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಮಾಜಿ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ಒಟ್ಟು ೧೯ ಕಂದಾಯ ಜಿಲ್ಲೆಗಳ ವಿದ್ಯುತ್ ವಿತರಣೆಯನ್ನು ಟಾಟಾ ಪವರ್ ಕಂಪನಿಗೆ ವಹಿಸಿಕೊಡಲು ಸರ್ಕಾರ ಉದ್ದೇಶಿಸಿದೆ. ಇದು ಖಂಡನೀಯ. ಕರ್ನಾಟಕದ ವಿದ್ಯುಚಕ್ತಿ ವಿತರಣೆಗೆ ವಿದ್ಯುಚಕ್ತಿ ನಿಗಮ, ಜಲವಿದ್ಯುತ್, ಸೌರಶಕ್ತಿ ಮತ್ತು ಥರ್ಮಲ್ ಪವರ್‌ಗಳ ಮೂಲಕ ವಿತರಣೆ ಮಾಡಲು ಸಶಕ್ತವಾಗಿದೆ ಹಾಗೂ ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿದೆ.

ಸಣ್ಣಪುಟ್ಟ ಅಡೆತಡೆಗಳ ಮಧ್ಯೆ ರಾಜ್ಯದ ಜನರಿಗೆ ವಿದ್ಯುತ್ ಪೂರೈಕೆ ಆಗುತ್ತಿದೆ. ಇದನ್ನು ಖಾಸಗಿಕರಣಗೊಳಿಸುವುದರಿಂದ ಜನಸಾಮಾನ್ಯರು ಸರ್ಕಾರದಿಂದ ದೊರೆಯುತ್ತಿರುವ ಹಲವು ಸೌಕರ್ಯಗಳಿಂದ ವಂಚಿತರಾಗುತ್ತಾರೆಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಒಂದರಲ್ಲೆ ೪೦ಲಕ್ಷಕ್ಕೂ ಹೆಚ್ಚು ಕೃಷಿ ಪಂಪ್ ಸೆಟ್‌ಗಳಿದ್ದು, ಸರ್ಕಾರ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿದೆ. ವಿದ್ಯುತ್ ದರದ ಮೇಲೆ ಸರ್ಕಾರದ ನಿಯಂತ್ರಣವಿದೆ. ಖಾಸಗಿ ಕರಣ ಮಾಡುವುದರಿಂದ ಈ ಎಲ್ಲಾ ವ್ಯವಸ್ಥೆಗಳು ಸೇರಿದಂತೆ ಗೃಹಜ್ಯೋತಿ, ಭಾಗ್ಯಜ್ಯೋತಿ ಫಲಾನುಭವಿಗಳ ಮೇಲೆಯೂ ವಿದ್ಯುತ್ ದರದ ಬರೆ ಎಳೆದಂತಾಗುತ್ತದೆ ಎಂದರು.

ವಿದ್ಯುತ್ ಕ್ಷೇತ್ರದ ಖಾಸಗೀಕರಣದಿಂದ ೫೦ ರಿಂದ ೬೦ ಸಾವಿರ ಉದ್ಯೋಗಗಳು ನಷ್ಟವಾಗಬಹುದೆಂಬ ಅಂದಾಜಿದೆ. ಸರ್ಕಾರಿ ಸ್ವಾಮ್ಯದಲ್ಲಿ ಇರುವ ನೌಕರರಿಗೆ ಸಿಗುವ ನಿವೃತ್ತಿ ವೇತನ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲದೆ, ನಿವೃತ್ತಿ ಜೀನವದ ಮೇಲೆ ಪರಿಣಾಮ ಬೀರುತ್ತದೆ. ಖಾಸಗಿ ಕಂಪನಿಯಲ್ಲಿ ನೌಕರರು ಕಡಿಮೆ ಸಂಬಳಕ್ಕೆ ಜೀತದಾಳುಗಳಂತೆ ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದರು.

ಸಾರ್ವಜನಿಕ ಕಂಪನಿಗಳ ದಕ್ಷತೆ ಮತ್ತು ಸೇವಾ ಗುಣಮಟ್ಟಕ್ಕಿಂತ ಕಳಪೆ ಸೇವೆಯನ್ನು ಟಾಟಾ ಪವರ್ ಕಂಪನಿ ದೇಶದಲ್ಲಿ ನೀಡುತ್ತಿದೆ ಎಂಬ ಆರೋಪಗಳು ಸಹ ಇದೆ. ಸಾರ್ವಜನಿಕ ವಿತರಣಾ ಕಂಪನಿಯ ದರಕ್ಕಿಂತ ಈ ಕಂಪನಿ ಹೆಚ್ಚು ದರ ವಸೂಲಿ ಮಾಡುತ್ತಿರುವುದಾಗಿ ದೂರುಗಳು ಇದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಈ ಖಾಸಗಿ ಕಂಪನಿಗೆ ಯಾವುದೇ ಕಾರಣಕ್ಕೂ ವಿದ್ಯುತ್ ವಿತರಣೆಗೆ ಅವಕಾಶ ಕೊಡಬಾರದು ಎಂದ ಅವರು ಈ ಸಂಬಂಧ ಜೂ. ೧೮ ರಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಮೂಲಕ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಿದರು.

ಸುದ್ದಿಗೋಷ್ಟಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಡಿ., ಜಿಲ್ಲಾ ಗೌರವಾಧ್ಯಕ್ಷ ಎಂ.ಸಿ. ಬಸವರಾಜು, ಸಂಘಟನಾ ಕಾರ್ಯದರ್ಶಿ ದೇವರಾಜು, ಉಪಾಧ್ಯಕ್ಷ ಕುಮಾರಸ್ವಾಮಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ತಾಲ್ಲೂಕು ವಕ್ತಾರ ಸುನಿಲ್ ಕುಮಾರ್ ಇದ್ದರು.

Farmers’ union opposes privatization of power sector

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ...

ನರೇಂದ್ರ ಮೋದಿ ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ

ಚಿಕ್ಕಮಗಳೂರು : ಸಾರ್ವತ್ರಿಕ ಚುನಾವಣೆಗಳ ಮೂಲಕ ಭಾರತದ ಅತಿ ಹೆಚ್ಚುಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ...

ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

  ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ...

ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕ ಕೆರೆಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...