Home Latest News ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ
Latest News

ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಲ್ಲಂಗಡಿಯ ನಕಲಿ ಬೀಜ ವಿತರಿಸಿ ರೈತರಿಗೆ ದೋಖ ಮಾಡಿದ ಘಟನೆ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಗುರುಶಾಂತಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಿಗಿಸುವುದರ ಜೊತೆಗೆ ರೈತರಿಗೆ ಆಗಿರುವ ನಷ್ಟದ ಬೆಲೆ ತುಂಬಿ ಕೊಡಲು ಒತ್ತಯಿಸಿದ್ದಾರೆ.

ವೋಡಿಪಸ್ ಕಂಪನಿಯು ಕಲ್ಲಂಗಡಿ ಬೀಜ ಮಾರಾಟ ಮಾಡಿದ್ದು ಇದರಿಂದಾಗಿ ರೈತ ನಾಗರಾಳು ಗುರುಶಾಂತಪ್ಪರವರಿಗೆ 4,30,000 ನಷ್ಟ ಉಂಟಾಗಿದ್ದು ಕಂಪನಿ ನಷ್ಟ ತುಂಬಿ ಕೊಡಲು ಒತ್ತಯಿಸಿದರು. ಬೀಜ ಬಿತ್ತಿದ 60 ದಿನಗಳವರೆಗೆ ಸಮೃದ್ಧವಾಗಿ ಬೆಳೆದ ಬೆಳೆಯಲ್ಲಿ ಹೂವು ಮಾತ್ರ ಬಿಟ್ಟಿದೆ ಆದರೆ ಕಾಯಿ ಬಿಟ್ಟಿಲ್ಲ ಎಂದ ಅವರು ಈ ಬಗ್ಗೆ ಅನುಮಾನಗೊಂಡ ರೈತ ಕೆಳದಿ ಶಿವಪ್ಪನಾಯಕ ತೋಟಗಾರಿಕೆ ಮತ್ತು ಕೃಷಿ ವಿಶ್ವ ವಿದ್ಯಾಲಯ ದ ವಿಜ್ಞಾನಿಗಳಿಗೆ ದೂರು ಸಲ್ಲಿಸಿದ್ದರಿಂದ ವಿಜ್ಞಾನಿಗಳಾದ ಡಾ//ಪಲ್ಲವಿ,ಡಾ//ಯಮುನ ,ಡಾ//ಸುಭಾಸಿಣಿ ಮತ್ತು ಡಾ//ಸುರೇಶ್ ಕುಮಾರ್ ತಂಡ ರೈತರ ಹೊಲಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಾಯಿ ಕಚ್ಚದಿರುವ ಬಗ್ಗೆ ವರದಿ ಸಲ್ಲಿಸಿ ಕಂಪನಿಯ ಬೀಜ ಇಲಾಖೆಯಲ್ಲಿ ನಮೂದು ಆಗಿಲ್ಲ ಎಂದು ತಿಳಿಸಿದ್ದು ,ಅನಧಿಕೃತವಾಗಿ ಮಾರಾಟ ಮಾಡಿರುವ ಕಂಪನಿಯ ವಿರುದ್ಧ ಕಾನೂನು ಕ್ರಮ ಜರಿಗಿಸಲು ರೈತ ಸಂಘ ಒತ್ತಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹೇಶ್, ಕೆ.ಕೆ.ಕೃಷ್ಣೇಗೌಡ ದಯಾನಂದ ಮುಂತಾದವರು ಇದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...