Home namma chikmagalur ajjampura ಮಗಳನ್ನು ವೈಶ್ಯಾವಾಟಿಕೆ ಅಡ್ಡೆಗೆ ನೂಕಿರುವ ತಂದೆ
ajjampurachikamagalurCrime NewsHomeLatest Newsnamma chikmagalur

ಮಗಳನ್ನು ವೈಶ್ಯಾವಾಟಿಕೆ ಅಡ್ಡೆಗೆ ನೂಕಿರುವ ತಂದೆ

Share
Share

ಚಿಕ್ಕಮಗಳೂರು:  ಹೆತ್ತ ತಂದೆಯೇ ರಕ್ಷಕನಾಗುವ ಬದಲು ಭಕ್ಷಕನಾದ ಘೋರ ಘಟನೆಯೊಂದು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ನಡೆದಿದೆ. ಹಣದ ಹಪಾಹಪಿಗೆ ಬಿದ್ದ ತಂದೆ ಮತ್ತು ಅಜ್ಜಿ ಸೇರಿ, ತಾಯಿ ಇಲ್ಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ವೇಶ್ಯಾವಾಟಿಕೆ ಅಡ್ಡೆಗೆ ನೂಕಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನೆಲೆ: ಬಾಲಕಿಯ ತಾಯಿ ಮೃತಪಟ್ಟಿದ್ದರಿಂದ ಆಕೆ ತಂದೆ ಗಿರೀಶ್ ಹಾಗೂ ಅಜ್ಜಿ ನಾಗರತ್ನ ಅವರ ಆಶ್ರಯದಲ್ಲಿದ್ದಳು. ಆದರೆ, ಈ ಪಾಪಿಗಳು ಹಣಕ್ಕಾಗಿ ಬಾಲಕಿಯನ್ನು ಭರತ್ ಶೆಟ್ಟಿ ಎಂಬುವವನ ಜೊತೆ ಮಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಮಂಗಳೂರಿನಲ್ಲಿ ಕಳೆದ 6 ದಿನಗಳಲ್ಲಿ 10ಕ್ಕೂ ಹೆಚ್ಚು ಕಾಮುಕರು ಬಾಲಕಿಯ ಮೇಲೆ ಸತತವಾಗಿ ಅತ್ಯಾ*ಚಾರ ಎಸಗಿದ್ದಾರೆ. ಇನ್ನು ಬಾಲಕಿಗೆ ಪಿರಿಯಡ್ಸ್ ಸಮಯವಿದ್ದರೂ ಆಕೆಯನ್ನು ಬಿಡದೇ ಹುರಿದು ಮುಕ್ಕಿದ್ದಾರೆ. ಈ ಬಗ್ಗೆ ನೊಂದ ಬಾಲಕಿ ನೀಡಿರುವ ಮಾಹಿತಿ ಪ್ರಕಾರ, ಆಕೆ ಋತುಸ್ರಾವದ (Periods) ಸಮಯದಲ್ಲಿದ್ದರೂ ಸಹ ಕಿಂಚಿತ್ತೂ ಕರುಣೆ ತೋರದ ಕಾಮುಕರು ಆಕೆಯ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಿದ್ದಾರೆ. ಸತತ ಆರು ದಿನಗಳ ಕಾಲ ನರಕಯಾತನೆ ಅನುಭವಿಸಿದ ಬಾಲಕಿ, ಹೇಗೋ ಅವರಿಂದ ತಪ್ಪಿಸಿಕೊಂಡು ವಾಪಸ್ ಊರಿಗೆ ಬಂದಿದ್ದಾಳೆ.

ಬೆಳಕಿಗೆ ಬಂದಿದ್ದು ಹೇಗೆ?: ಕಾಮುಕರ ಗುಂಪಿನಿಂದ ತಪ್ಪಿಸಿಕೊಂಡು ಊರಿಗೆ ಬಂದ ನಂತರ ಬಾಲಕಿ ತನ್ನ ಚಿಕ್ಕಪ್ಪ ಮತ್ತು ಅತ್ತೆಯ ಬಳಿ ತನಗೆ ತಂದೆ ಮತ್ತು ಅಜ್ಜಿಯಿಂದ ಆದ ಅನ್ಯಾಯ ಹಾಗೂ ಮಂಗಳೂರಿನಲ್ಲಿ ನಡೆದ ಭೀಕರ ಘಟನೆಯನ್ನು ವಿವರಿಸಿದ್ದಾಳೆ. ಕೂಡಲೇ ಎಚ್ಚೆತ್ತ ಬಾಲಕಿಯ ಚಿಕ್ಕಪ್ಪ ಬೀರೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಬೀರೂರು ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ತಂದೆ ಗಿರೀಶ್, ಅಜ್ಜಿ ನಾಗರತ್ನ ಮತ್ತು ದಲ್ಲಾಳಿ ಭರತ್ ಶೆಟ್ಟಿ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 12 ಮಂದಿ ಆರೋಪಿಗಳ ವಿರುದ್ಧ ಪೋಕೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಹಣದ ಆಸೆಗಾಗಿ ಸ್ವಂತ ರಕ್ತವನ್ನೇ ಮಾರಾಟಕ್ಕಿಟ್ಟ ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

Father pushes daughter into prostitution

Share

Leave a comment

Leave a Reply

Your email address will not be published. Required fields are marked *

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....

Related Articles

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ...

ರಕ್ತದಾನದಿಂದ ಜೀವ ಉಳಿಸುವವರು ಜೀವಸಂರಕ್ಷಕರೇ

ಚಿಕ್ಕಮಗಳೂರು: – ರಕ್ತದಾನಕ್ಕೆ ಜಾತಿ ತಾರತಮ್ಯವಿಲ್ಲ. ಜೀವ ಉಳಿಸುವ ಪ್ರತಿಯೊಬ್ಬ ವ್ಯಕ್ತಿಯು ಜೀವಸಂರಕ್ಷಕರೇ. ಶ್ರೀಮಂತಿಕೆ ಎಷ್ಟೇ...

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ...