Home Crime News ಸಿ.ಟಿ ರವಿ ಸ್ವಾಗತ ವೇಳೆ ಆಂಬುಲೆನ್ಸ್ ದುರ್ಬಳಕೆ : ಎಫ್ಐಆರ್‌ ದಾಖಲು
Crime News

ಸಿ.ಟಿ ರವಿ ಸ್ವಾಗತ ವೇಳೆ ಆಂಬುಲೆನ್ಸ್ ದುರ್ಬಳಕೆ : ಎಫ್ಐಆರ್‌ ದಾಖಲು

Share
Share

ಚಿಕ್ಕಮಗಳೂರು : ಕಳೆದ ರಾತ್ರಿ ಸಿ.ಟಿ ರವಿ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ ವೇಳೆ ಅದ್ದೂರಿ ಸ್ವಾಗತ ಮಾಡಿದ ಕಾರ್ಯಕರ್ತರು ಯಡವಟ್ಟು ಮಾಡಿಕೊಂಡಿದ್ದಾರೆ ಮೆರವಣಿಗೆ ವೇಳೆ ಆಂಬುಲೆನ್ಸ್ ಗಳ ದುರ್ಬಳಕೆ ಮಾಡಿದ ಪರಿಣಾಮಕೃಷ್ಣ ಗ್ರೂಪ್ ನ 7 ಆಂಬುಲೆನ್ಸ್ ಗಳ ಚಾಲಕರು ಮಾಲೀಕರು ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಕಳೆದ ರಾತ್ರಿ ಚಿಕ್ಕಮಗಳೂರು ನಗರದಲ್ಲಿ ನಡೆದಿದ್ದ ಭರ್ಜರಿ ಮೆರವಣಿಗೆ ವೇಳೆ ಈ ಅಚಾತುರ್ಯ ನಡೆದಿದೆ. ಮೆರವಣಿಗೆ ಸಾಗಿ ಬರುತ್ತಿದ್ದ ಮಾರ್ಗದಲ್ಲಿ ಆಂಬುಲೆನ್ಸ್ ಗಳ ಟಾಪ್ ಲೈಟ್ ಆನ್ ಮಾಡಿ ಸಂಚಾರ ನಿಯಮ ಉಲ್ಲಂಘನೆ ಮಾಡಲಾಗಿದೆ. ಆಂಬುಲೆನ್ಸ್ ನಲ್ಲಿ
ರೋಗಿಗಳಿಲ್ಲದಿದ್ದರೂ ಕರ್ಕಶ ಹಾರ್ನ್ ಹಾಕಿ ಜನರಿಗೆ ಭೀತಿ ಹುಟ್ಟಿಸಿದ ಆರೋಪ ಇದೀಗ ಕೇಳಿ ಬಂದಿದೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದು ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಸಾರ್ವಜನಿಕರಿಗೆ ಭಯ ಹುಟ್ಟಿಸಿದ ಆರೋಪ ಇದೀಗ ಆಂಬುಲೆನ್ಸ್ ಗಳ ಮೇಲೆ ದಾಖಲಾಗಿದೆ. ಸಿ.ಟಿ ರವಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರಿಗೆ ಸೇರಿದ ಕೃಷ್ಣ ಆಂಬುಲೆನ್ಸ್ ಮಾಲೀಕ ಬಿಜೆಪಿ ಮುಖಂಡ ಎಂದು ತಿಳಿದು ಬಂದಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...

ಎರಡು ಪ್ರತ್ಯೇಕ ಪೋಕೋ ಪ್ರಕರಣದಲ್ಲಿ ಇಬ್ಬರ ಬಂಧನ

ಬಾಳೆಹೊನ್ನೂರು: ಅಪ್ರಾಪ್ತರ ಮೇಲಿನ ದೌರ್ಜನ್ಯ ಕುರಿತಂತೆ 2 ಪ್ರತ್ಯೇಕ ಪೋಕೋ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಾಳೆಹೊನ್ನೂರು...