Home Political News ಸಚಿವ ಜಾರ್ಜ್ ಜಿಲ್ಲೆಗೆ ಮಂತ್ರಿನಾ ಅವರ ತೋಟಕ್ಕೆ ಮಂತ್ರಿನಾ : ಕಲ್ಮರಡಪ್ಪ ಪ್ರಶ್ನೆ
Political News

ಸಚಿವ ಜಾರ್ಜ್ ಜಿಲ್ಲೆಗೆ ಮಂತ್ರಿನಾ ಅವರ ತೋಟಕ್ಕೆ ಮಂತ್ರಿನಾ : ಕಲ್ಮರಡಪ್ಪ ಪ್ರಶ್ನೆ

Share
Share

ಚಿಕ್ಕಮಗಳೂರು : ಕಾಡಾನೆ ಸಮಸ್ಯೆ ಸೇರಿದಂತೆ ಸಾರ್ವಜನಿಕರಿಗೆ ಸ್ಪಂದಿಸದ ಜಿಲ್ಲಾಡಳಿತ ಬದುಕಿದೆಯೇ ಉಸ್ತುವಾರಿ ಸಚಿವರು ಕಾಟಚಾರಕ್ಕೆ ಜಿಲ್ಲೆಗೆ ಬಂದು ಹೋಗುತ್ತಿದ್ದಾರೆ, ಜಿಲ್ಲಾಧಿಕಾರಿ ಟೈಮ್ ಪಾಸ್ಗಾಗಿ ಜಿಲ್ಲೆಯಲ್ಲಿ ಇದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ ಕಲ್ಮರುಡಪ್ಪ ವಾಗ್ದಾಳಿ ನಡೆಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಮೀನಾ ನಾಗರಾಜ್ ವಿರುದ್ಧ ಕೆಂಡಮಂಡಲರಾದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಬಂಧಿ ಎಂಬ ಅಹಂಕಾರದಿಂದ ಬೇಜವಾಬ್ದಾರಿ ರೀತಿಯಲ್ಲಿ ವರ್ತಿಸುತ್ತಿದ್ದು, 3500ಕ್ಕೂ ಹೆಚ್ಚು ಸಾರ್ವಜನಿಕರ ಕಡತಗಳನ್ನು ವಿಲೇವಾರಿ ಮಾಡದೆ, ಜನರಿಗೆ ಸ್ಪಂದಿಸದೆ ಸಮಸ್ಯೆಗಳನ್ನು ಇನ್ನೂ ಜಟಿಲಗೊಳಿಸುತ್ತಿದ್ದಾರೆ. ಜಿಲ್ಲೆಯ ಶಾಸಕರುಗಳು ನಮಗೂ ಸಮಸ್ಯೆಗಳಿಗೂ ಸಂಬಂಧವೇ ಇಲ್ಲ ಎಂಬಂತೆ, ವರ್ತಿಸುತ್ತಿದ್ದಾರೆ ಕಾಟಾಚಾರಕ್ಕೆ ಭೇಟಿ ಕೊಟ್ಟ ಶಾಸಕ ತಮ್ಮಯ್ಯ ಸ್ಥಳಕ್ಕೆ ಹೋಗಿ ಬಂದರು, ಕಾಡಾನೆಗಳು ಇರುವ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಉಡಾಫೆ ಉತ್ತರ ಕೊಡುತ್ತಿದ್ದು ಡಿಎಫ್ಓ ಆಗಲಿ, ಅರಣ್ಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಿಲ್ಲ ಎಂದು ಅವರು ಆರೋಪಿಸಿದರು.

ಆನೆಗಳು ಬೀಡು ಬಿಟ್ಟಿರುವ ಗ್ರಾಮಗಳಲ್ಲಿ ನೂರಾರು ಎಕರೆ ಅಡಿಕೆ, ಬಾಳೆ, ಭತ್ತ, ಶುಂಠಿ ಫಸಲು ಸಂಪೂರ್ಣ ನಾಶವಾಗಿದ್ದು, ಆನೆಗಳು ಬೆಳೆಗಳನ್ನು ತಿನ್ನುವುದೇ ಅಲ್ಲದೆ ತುಳಿದು ಕೂಡ ನಾಶಪಡಿಸಿವೆ. ಆದರೆ ಜಿಲ್ಲಾಡಳಿತ ರೈತರ ಜೊತೆ ಯಾವುದೇ ಸಭೆಯನ್ನು ನಡೆಸಿಲ್ಲ, ಅಹವಾಲು ಸ್ವೀಕರಿಸಿಲ್ಲ, ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಜಿಲ್ಲೆಗೆ ಮಂತ್ರಿಯೋ ಇಲ್ಲ ಅವರ ತೋಟಕ್ಕೆ ಮಂತ್ರಿಯೋ ಎಂದು ಜಿಲ್ಲೆಯ ಜನರು ಪ್ರಶ್ನಿಸುತ್ತಿದ್ದಾರೆ, ಇಂತಹ ಮಂತ್ರಿ ನಮಗೆ ಬೇಕಾ..?. ಎಂದು ಕಲ್ಮಡಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಸಮಸ್ಯೆಗಳನ್ನು ಮುಂದಿಟ್ಟುಕೊಂಡು “ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ವಿರುದ್ಧ ಗೋ ಬ್ಯಾಕ್ ಡಿಸಿ ಚಳುವಳಿ” ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಆನೆಯ ಹಾಗೂ ಇತರ ಸಮಸ್ಯೆಗಳ ಬಗ್ಗೆ ಬಿಜೆಪಿ ವಿಳಂಬವಾಗಿ ಪ್ರತಿಕ್ರಿಯಿಸುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕಲ್ಮರಪ್ಪ, ನಾವು ಯಾವುದೇ ಹೋರಾಟದಲ್ಲಿ ಹಿಂದೆ ಬಿದ್ದಿಲ್ಲ ಆದರೆ ಜಿಲ್ಲಾಡಳಿತಕ್ಕೆ ಸಮಯಾವಕಾಶ ನೀಡಿದ್ದೆವು ಆದರೆ ಎಚ್ಚೆತ್ತುಕೊಳ್ಳದ ಆಡಳಿತಕ್ಕೆ ತುರುಕು ಮುಟ್ಟಿಸಲು ಮುಂದಿನ ದಿನಗಳು ಹೋರಾಟದ ದಿನಗಳಾಗಿರುತ್ತವೆ. ಅಲ್ಲದೆ ನಾವು ಯಾವುದೇ ಹೊಂದಾಣಿಕೆಯ ರಾಜಕೀಯ ಮಾಡುವುದಿಲ್ಲ, ಮಾಡಿಲ್ಲ ಅದರ ಅವಶ್ಯಕತೆಯೂ ನಮಗಿಲ್ಲ ಎಂದು ಕಲ್ಮರುಡಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...