Home Crime News ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು
Crime NewsState News

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು

Share
Share

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

  • ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
  • 376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
  • ಐಪಿಸಿ ಸೆಕ್ಷನ್‌ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
  • ಐಪಿಸಿ ಸೆಕ್ಷನ್‌ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
  • ಐಪಿಸಿ ಸೆಕ್ಷನ್‌ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
  • ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
  • ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
  • ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ.
  • ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭ, ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ.
  • ಏಕೆಂದರೆ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್‌ ಮೇಲೆ ಪ್ರಜ್ವಲ್‌ನನ್ನು ವಶಕ್ಕೆ ಪಡೆಯಲಾಗಿತ್ತು.

ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ.

ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು.

ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

Former MP Prajwal Revanna jailed for life

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...