Home namma chikmagalur ಮೀಸಲು ಅರಣ್ಯದಲ್ಲಿ ಗುಡ್ಡದಲ್ಲಿ ಬೆಂಕಿ ಹಚ್ಚುತ್ತಿದ್ದ ನಾಲ್ವರ ಬಂಧನ
namma chikmagalurCrime NewsHomeLatest News

ಮೀಸಲು ಅರಣ್ಯದಲ್ಲಿ ಗುಡ್ಡದಲ್ಲಿ ಬೆಂಕಿ ಹಚ್ಚುತ್ತಿದ್ದ ನಾಲ್ವರ ಬಂಧನ

Share
ಮೀಸಲು ಅರಣ್ಯದಲ್ಲಿ ಗುಡ್ಡದಲ್ಲಿ ಬೆಂಕಿ ಹಚ್ಚುತ್ತಿದ್ದ ನಾಲ್ವರ ಬಂಧನ
ಮೀಸಲು ಅರಣ್ಯದಲ್ಲಿ ಗುಡ್ಡದಲ್ಲಿ ಬೆಂಕಿ ಹಚ್ಚುತ್ತಿದ್ದ ನಾಲ್ವರ ಬಂಧನ
Share

ಚಿಕ್ಕಮಗಳೂರು: ಕುದುರೆಮುಖ ವನ್ಯಜೀವಿ ವಲಯದ ಸಂಸೆ ಶಾಖೆಯ ಕಳಕೊಡು ಗಸ್ತಿನ ತುಂಗಭದ್ರಾ ಮೀಸಲು ಅರಣ್ಯ ವ್ಯಾಪ್ತಿಯಲ್ಲಿನ ಭತ್ತದರಾಶಿ ಗುಡ್ಡದಲ್ಲಿ ಬೆಂಕಿ ಹಚ್ಚುತ್ತಿದ್ದ ನಾಲ್ವರನ್ನು ಕುದುರೆಮುಖ ಅರಣಾ ಇಲಾಖಾ ಸಿಬ್ಬಂದಿಗಳು ಬಂದಿಸಿದ್ದಾರೆ.

ಬಂದಿತರಾದ ಆರೋಪಿಗಳು ದೇವರಾಜ, ಗಗನ್, ರಕ್ಷಣ್, ಉಮೇಶ ಎಂದು ಗುರುತಿಸಲಾಗಿದೆ. ಆರೋಪಿಗಳು ಭತ್ತದರಾಶಿ ಗುಡ್ಡದಲ್ಲಿ ಗುಡ್ಡಕ್ಕೆ ಬೆಂಕಿ ಹಚ್ಚುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖಾ ಸಿಬ್ಬಂದಿಗಳು ಹಿಡಿದಿದ್ದಾರೆ. ಕಾರ್ಯಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ

ಶಿವರಾಮ್ ಬಾಬು ಎಂ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಜೆ.ಡಿ ದಿನೇಶ್, ವಲಯ ಅರಣ್ಯಾಧಿಕಾರಿಗಳು ಚೇತನ್ ಹೆಚ್.ಪಿ ಇವರ ಮಾರ್ಗದರ್ಶನದಂತೆ ಉಪ ವಲಯ ಅರಣ್ಯಾಧಿಕಾರಿ ಹರೀಶ್ ವೀ ಸವಣೂರ, ಗಸ್ತು ವನಪಾಲಕ ಅಯ್ಯನಗೌಡ, ಶ್ರೀ ಪ್ರಸಾದ್‌ಕುಮಾರ್ ಪಿ, ಶ್ರೀ ಗೋಪಾಲ ಮಾಗುಂಡಪ್ಪ ಅಂಬಿಗೇರ, ಶ್ರೀ ನಿತೀಶ್ ಅರಣ್ಯ ವೀಕ್ಷಕರು ಹಾಗೂ ಶ್ರೀ ಗಣೇಶ್ ಕೆ.ಎಸ್, ಶ್ರೀ ಪ್ರದೀಪ, ಶ್ರೀ ಪ್ರಶಾಂತ, ಶ್ರೀ ವಿಜಯಕುಮಾ‌ರ್ ಕಳ್ಳ ಬೇಟೆ ನಿಯಂತ್ರಣ ಕಾವಲುಗಾರರು ಪಾಲ್ಗೊಂಡಿರುತ್ತಾರೆ. ಆರೋಪಿಗಳನ್ನು ವನ್ಯಜೀವಿ ಸಂಕರಣಾ ಕಾಯ್ದೆ 1972 ಕಾಯ್ದೆಯಡಿ ಬಂದಿಸಿ, ಮೂಡಿಗೆರೆ ಜೆ.ಎಮ್.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

Four arrested for setting fire to a hill in a reserved forest

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...