Home Crime News ಪೋ‌ಕ್ಸೋ ನ್ಯಾಯಾಲಯದಿಂದ ನಾಲ್ವರಿಗೆ ಕಠಿಣ ಶಿಕ್ಷೆ
Crime NewschikamagalurHomeLatest Newsnamma chikmagalur

ಪೋ‌ಕ್ಸೋ ನ್ಯಾಯಾಲಯದಿಂದ ನಾಲ್ವರಿಗೆ ಕಠಿಣ ಶಿಕ್ಷೆ

Share
Share

ಚಿಕ್ಕಮಗಳೂರು: ನಗರದ ಬಾಲಮಂದಿರದಲ್ಲಿ ವಾಸವಿದ್ದ ಈರ್ವರು ಅಪ್ರಾಪ್ತ ಬಾಲಕಿಯರನ್ನು ಪುಸಲಾಯಿಸಿ ಹಾಸನಕ್ಕೆ ಕರೆದೊಯ್ದು ಬಾಡಿಗೆ ಮನೆಯೊಂದ ರಲ್ಲಿ ಇರಿಸಿ ಹದಿನೈದು ಮಂದಿಯನ್ನು ಲೈಂಗಿಕ ದೌರ್ಜನ್ಯ ಎಸಗಲು ಅನುವು ಮಾಡಿಕೊಟ್ಟಿದ್ದ ನಾಲ್ವರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ಪೋ‌ಕ್ಸೋ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಕಳೆದ 2023ರ ಸೆಪ್ಟೆಂಬರ್ ಹದಿನೇಳರಂದು ನಗರದ ಸರ್ಕಾರಿ ಬಾಲ ಕಿಯರ ಬಾಲಮಂದಿರದಿಂದ ಈರ್ವರು ಬಾಲಕಿಯರು ಕಾಣೆಯಾ ಗಿದ್ದಾರೆ ಎಂಬ ದೂರಿನ ಹಿನ್ನೆಲೆ ಯಲ್ಲಿ ತನಿಖೆ ಆರಂಭಿಸಿದ ಡಿವೈ ಎಸ್‌ಪಿ ಶೈಲೇಂದ್ರ ಅವರು ಮಹಿಳಾ ಠಾಣೆಯಎಎಸ್‌ಐ ಸೋಮಶೇಖರ್ ಮತ್ತಿತರೆ ತಂಡದ ಮೂಲಕ ಕಾಣೆ ಯಾದ ಬಾಲಕಿಯರನ್ನು ಹಾಸನದ ಮನೆಯೊಂದರಲ್ಲಿ ಪತ್ತೆಹಚ್ಚಿದ್ದರು.

ಬಾಲಕಿಯರ ವಿಚಾರಣೆಯ ವೇಳೆ ನಗರದ ಫರ್ಜಾನ, ಪ್ರಶಾಂತ್, ಲಕ್ಷ್ಮೀ ಮತ್ತು ದಿನೇಶ್ ಎಂಬುವವರುಗಳು ತಮ್ಮನ್ನು ಪುಸಲಾಯಿಸಿ ಹಾಸನಕ್ಕೆ ಕರೆದೊಯ್ದು ಬಾಡಿಗೆ ಮನೆಯಲ್ಲಿರಿಸಿ ಹದಿನೈದು ಮಂದಿಯಿಂದ ಲೈಂಗಿಕ ದೌರ್ಜನ್ಯ ನಡೆಸಿದರೆಂಬುದನ್ನು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರಲ್ಲದೆ.

ದೌರ್ಜನ್ಯ ನಡೆಸಿದ ಹದಿನೈದು ಮಂದಿಯನ್ನು ಕೂಡ ವಶಕ್ಕೆ ಪಡೆ ದಿದ್ದು, ನಂತರ ಮಹಿಳಾ ಠಾಣೆ ಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನಗರದ ಪೋಕೋ ನ್ಯಾಯಾಲಯದ ನ್ಯಾಯಾಧೀಶ ರಾಘವೇಂದ್ರ ಗುರು ಪ್ರಸಾದ್ ಕುಲಕರ್ಣಿ ಅವರು, ಫರ್ಜಾನ, ಪ್ರಶಾಂತ್, ಲಕ್ಷ್ಮೀ ಮತ್ತು ದಿನೇಶ್ ಎಂಬುವವರ ಮೇಲಿನ ಆರೋಪ ಸಾಬೀತಾಗಿದೆ ಎಂದು ಪರಿಗಣಿಸಿ ನಾಲ್ವರಿಗೂ ತಲಾ ಹತ್ತು ವರ್ಷಗಳ ಕಠಿಣಶಿಕ್ಷೆ ಹಾಗು ಮೊದಲ ಈರ್ವರಿಗೆ ತಲಾ ಮೂವತ್ತೆರಡು ಸಿದ್ದಾರೆ.

ಸಾವಿರ ರೂ.ದಂಡ ಉಳಿದ ಈರ್ವರಿಗೆ ತಲಾ ಮೂವತ್ತೈಯ್ದು ಸಾವಿರ. ದಂಡ ವಿಧಿಸಿ ನಿನ್ನೆ ತೀರ್ಪು ಪ್ರಕಟಿ ಉಳಿದ ಹದಿನೈದು ಮಂದಿಯ ಮೇಲಿನ ಆರೋಪ ಸಾಬೀತಾಗಿಲ್ಲ ಎಂದು ಅವರುಗಳನ್ನು ಪ್ರಕರಣ ದಿಂದ ಖುಲಾಸೆ ಮಾಡಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದಲೋಹಿತಾಚಾರ್ ಮತ್ತು ಬಿ.ಭರತ್ ಕುಮಾರ್ ಅವರು ಗಳು ವಾದ ಮಂಡಿಸಿದ್ದರು.

Four sentenced to rigorous imprisonment by POCSO court

Share

Leave a comment

Leave a Reply

Your email address will not be published. Required fields are marked *

Don't Miss

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಗಣಪತಿಕಟ್ಟೆಯ ರಮೇಶ ಮತ್ತು ರವಿಕಲಾ ದಂಪತಿಯ ಮಗ ಶಮಂತ (22)...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು ಅಂತ ಹೋದ್ರೆ ನಾಲ್ಕೈದು ಗಂಟೆ ಕಾಯಿಸುತ್ತಾರೆ. ರಾಜ್ಯದ ಕೃಷಿ ಸಚಿವರು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ...

Related Articles

ಅಜ್ಜಂಪುರ ಗರಿಗೆದರಿದ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ:ಗ್ರಾಮ ಪಂಚಾಯಿತಿಯಾಗಿದ್ದನ್ನು ಮೇಲ್ದರ್ಜೆಗೆ ಏರಿಸಿ ಪಟ್ಟಣ ಪಂಚಾಯತಿಯಾಗಿ ಹಲವು ತಕರಾರುಗಳಿಂದಾಗಿ ಐದಾರು ವರ್ಷಗಳು ಚುನಾವಣೆ ನಡೆದಿಲ್ಲ....

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು  ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಇಬ್ಬರ ಮೇಲೆ ಅಟ್ಯಾಕ್ ಮಾಡಿದ ಚಿರತೆ ಕಡೂರು...

ಹಕ್ಕುಪತ್ರಕ್ಕಾಗಿ ಸಿ.ಟಿ.ರವಿ ಪ್ರತಿಭಟನೆ ಹಾಸ್ಯಾಸ್ಪದ

ಚಿಕ್ಕಮಗಳೂರು: : ಕಳೆದ ೧೯ ವರ್ಷದಲ್ಲಿ ಆಡಳಿತದಲ್ಲಿದ್ದಾಗ ಬಡವರಿಗೆ ನಿವೇಶನ, ಮನೆಯ ಹಕ್ಕುಪತ್ರ ನೀಡದ ಮಾಜಿ...

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಸಚಿವರಲ್ಲಿ ಸಂಸದರ ಮನವಿ

ಚಿಕ್ಕಮಗಳೂರು: ಜೀವ ಹಾನಿ, ಬೆಳೆ ಹಾನಿ ಜೊತೆಗೆ ಭಯಭೀತಿ ನಿಯಂತ್ರಣ ಮಾಡಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈಜ್ಞಾನಿಕ...