Home namma chikmagalur best teacher award:ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
namma chikmagalur

best teacher award:ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ

Share
ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
Share

ಚಿಕ್ಕಮಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ರಾಜ್ಯ ಘಟಕ ಮತ್ತು ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ, ಅಕ್ಷರದ ಹರಿಕಾರರಾದ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಪುಲೆ ಹೆಸರಿನಲ್ಲಿ ಕೊಡ ಮಾಡುವ 2024 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ/ಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ *ರಾಜೇಶ್ವರಿ* ಮತ್ತು ಎನ್ ಆರ್ ಪುರ ಮೋಹಲ್ಲಾ ಕ್ಯಾಂಪಿನ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ *ಮಹಾ ಜಬೀನಾ* ಅವರು ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಭಾಜನರಾದರು.

ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ *ಸಿ.ಆರ್. ಜಯಣ್ಣ* ಮತ್ತು ಕರೆ ಕಲ್ಲಹಳ್ಳಿ ಕಿರಿಯ ಪ್ರಾರ್ಥಮಿಕ ಶಾಲೆಯ *ಯೋಗೇಶ್ ಹೆಚ್.ಪಿ* ಅವರು ಜ್ಯೋತಿ ಬಾಪುಲೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದರು. ಇತ್ತೀಚಿಗೆ ಉತ್ತರ ಕರ್ನಾಟಕದ ವಿಜಯಪುರದಲ್ಲಿ ಎಕ್ಸಲೆಂಟ್ ಪಿಯು ಕಾಲೇಜ್ ಸಭಾಂಗಣದಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು, ರಾಜ್ಯದಾದ್ಯಂತ ಒಟ್ಟು ಐವತ್ತು ಶಿಕ್ಷಕ/ ಶಿಕ್ಷಕಿಯರು ಈ ಪ್ರಶಸ್ತಿಗೆ ಭಾಜನರಾಗಿದ್ದು, ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಈ ಗೌರವವನ್ನು ಸ್ವೀಕರಿಸಿದ್ದಾರೆ.

ವಿಜಯಪುರ ಜಿಲ್ಲಾ ಕೆಜೆವಿಎಸ್ ಘಟಕದ ಅಧ್ಯಕ್ಷರಾದ ಜಿ.ಎಸ್.ಕಾಂಬ್ಳೆ ಮತ್ತು ಕಾರ್ಯದರ್ಶಿ ರಮೇಶ್ ನಾಯಕ್ ಹಾಗೂ ಉಪನ್ಯಾಸಕ ಪ್ರೊ. ಶಿವಾನಂದ್ ಕಲ್ಯಾಣಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಎಲ್ಲ ಪ್ರಶಸ್ತಿ ಪುರಸ್ಕೃತರಿಗೆ ಮತ್ತು ಆಯೋಜಕರಿಗೆ ಚಿಕ್ಕಮಗಳೂರು ಜಿಲ್ಲಾ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಎಂ ಮಂಜುನಾಥಸ್ವಾಮಿ ಈ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ .

Four teachers from Chikkamagaluru district win state-level best teacher award

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...