Home namma chikmagalur best teacher award:ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
namma chikmagalur

best teacher award:ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ

Share
ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
Share

ಚಿಕ್ಕಮಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ರಾಜ್ಯ ಘಟಕ ಮತ್ತು ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ, ಅಕ್ಷರದ ಹರಿಕಾರರಾದ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಪುಲೆ ಹೆಸರಿನಲ್ಲಿ ಕೊಡ ಮಾಡುವ 2024 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ/ಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ *ರಾಜೇಶ್ವರಿ* ಮತ್ತು ಎನ್ ಆರ್ ಪುರ ಮೋಹಲ್ಲಾ ಕ್ಯಾಂಪಿನ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ *ಮಹಾ ಜಬೀನಾ* ಅವರು ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಭಾಜನರಾದರು.

ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ *ಸಿ.ಆರ್. ಜಯಣ್ಣ* ಮತ್ತು ಕರೆ ಕಲ್ಲಹಳ್ಳಿ ಕಿರಿಯ ಪ್ರಾರ್ಥಮಿಕ ಶಾಲೆಯ *ಯೋಗೇಶ್ ಹೆಚ್.ಪಿ* ಅವರು ಜ್ಯೋತಿ ಬಾಪುಲೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದರು. ಇತ್ತೀಚಿಗೆ ಉತ್ತರ ಕರ್ನಾಟಕದ ವಿಜಯಪುರದಲ್ಲಿ ಎಕ್ಸಲೆಂಟ್ ಪಿಯು ಕಾಲೇಜ್ ಸಭಾಂಗಣದಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು, ರಾಜ್ಯದಾದ್ಯಂತ ಒಟ್ಟು ಐವತ್ತು ಶಿಕ್ಷಕ/ ಶಿಕ್ಷಕಿಯರು ಈ ಪ್ರಶಸ್ತಿಗೆ ಭಾಜನರಾಗಿದ್ದು, ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಈ ಗೌರವವನ್ನು ಸ್ವೀಕರಿಸಿದ್ದಾರೆ.

ವಿಜಯಪುರ ಜಿಲ್ಲಾ ಕೆಜೆವಿಎಸ್ ಘಟಕದ ಅಧ್ಯಕ್ಷರಾದ ಜಿ.ಎಸ್.ಕಾಂಬ್ಳೆ ಮತ್ತು ಕಾರ್ಯದರ್ಶಿ ರಮೇಶ್ ನಾಯಕ್ ಹಾಗೂ ಉಪನ್ಯಾಸಕ ಪ್ರೊ. ಶಿವಾನಂದ್ ಕಲ್ಯಾಣಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಎಲ್ಲ ಪ್ರಶಸ್ತಿ ಪುರಸ್ಕೃತರಿಗೆ ಮತ್ತು ಆಯೋಜಕರಿಗೆ ಚಿಕ್ಕಮಗಳೂರು ಜಿಲ್ಲಾ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಎಂ ಮಂಜುನಾಥಸ್ವಾಮಿ ಈ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ .

Four teachers from Chikkamagaluru district win state-level best teacher award

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...