Home namma chikmagalur chikamagalur ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕೋಟ್ಯಂತರ ರೂಪಾಯಿ ವಂಚನೆ
chikamagalurCrime NewsHomeLatest Newsnamma chikmagalur

ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕೋಟ್ಯಂತರ ರೂಪಾಯಿ ವಂಚನೆ

Share
Share

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ರೂಪಾಯಿ ವಂಚನೆ ನಡೆದಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರದೀಪ್ ಹೆಚ್.ಇ ಎಂಬುವವರು ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ತಮ್ಮದೇ ಕಂಪನಿಯ ಸಹ-ನಿರ್ದೇಶಕರಾದ ಸಿ.ಹೆಚ್. ಪ್ರದೀಪ್ ಮತ್ತು ಇತರರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ದೂರಿನ ಸಾರಾಂಶದ ಪ್ರಕಾರ, ‘i2e ರಿಟೇಲಿಂಗ್ ಪ್ರೈವೇಟ್ ಲಿಮಿಟೆಡ್’ ಕಂಪನಿಯ ಮೂಲಕ ಚಿಕ್ಕಮಗಳೂರಿನ ನೆಲ್ಲೂರು ಗ್ರಾಮದಲ್ಲಿ ‘ವೆಂಕಟಾದ್ರಿ ಎನ್‌ಪ್ಲೇವ್’ ಎಂಬ ಬಡಾವಣೆಯನ್ನು ನಿರ್ಮಿಸಲಾಗಿತ್ತು. ಕಂಪನಿಯಲ್ಲಿ ಶೇಕಡಾ 50ರಷ್ಟು ಪಾಲು ಹೊಂದಿದ್ದ ಸಿ.ಹೆಚ್. ಪ್ರದೀಪ್ ಅವರಿಗೆ ಬ್ಯಾಂಕ್ ವ್ಯವಹಾರಗಳ ಸಹಿ ಹಾಕುವ ಅಧಿಕಾರ ನೀಡಲಾಗಿತ್ತು.

ಈ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ಆರೋಪಿತರು, ಕಂಪನಿಯ ಖಾತೆಯಲ್ಲಿದ್ದ ಸುಮಾರು 2 ಕೋಟಿ 35 ಲಕ್ಷ ರೂಪಾಯಿಗಳನ್ನು ಕಾನೂನುಬಾಹಿರವಾಗಿ ತಮ್ಮ ಹಾಗೂ ತಮ್ಮ ಕುಟುಂಬದವರ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೆ, ಕಂಪನಿಯ ಲೆಕ್ಕಪರಿಶೋಧಕರಾದ ಯಕ್ಕಾರ್ ಅಶ್ವತ್ ಶೇಣೈ ಮತ್ತು ಅಕೌಂಟೆಂಟ್ ಸುನಿಲ್ ಕುಮಾರ್ ಅವರು ಕೂಡ ಈ ವಂಚನೆಯಲ್ಲಿ ಕೈಜೋಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇವರು ಕಂಪನಿಯ ಲೆಕ್ಕಪತ್ರಗಳನ್ನು ತಿದ್ದಿ ಮೋಸ ಎಸಗಿದ್ದಾರೆ ಎಂಬ ವಿಚಾರ ಇತ್ತೀಚೆಗೆ ಬ್ಯಾಂಕ್ ಸ್ಟೇಟ್‌ಮೆಂಟ್ ಪರಿಶೀಲಿಸಿದಾಗ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ನಂಬಿಕೆ ದ್ರೋಹ, ದಾಖಲೆಗಳ ತಿದ್ದುಪಡಿ ಹಾಗೂ ಹಣಕಾಸಿನ ವಂಚನೆ ಅಡಿಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Fraud of crores of rupees in real estate business

Share

Leave a comment

Leave a Reply

Your email address will not be published. Required fields are marked *

Don't Miss

ನಾಗರಿಕ ವೇದಿಕೆಯಿಂದ ಪ್ರತಿಭಟನೆ ಖಂಡನೆ

ತರೀಕೆರೆ: ಸಂವಿಧಾನ ಸಾರ್ವಜನಿಕರು ಆರೋಗ್ಯಕರವಾಗಿ ಪ್ರತಿಭಟಿಸಲು ಅವಕಾಶ ಕಲ್ಪಿಸಿದೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡು ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಯವರು ನಾಗರೀಕ ವೇದಿಕೆ ಅಡಿಯಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್...

ಅಂಬೇಡ್ಕರ್ ಜಯಂತಿಗೆ ಅಡ್ಡಿ : ಆರೋಪಿಗಳ ಬಂಧನಕ್ಕೆ ಪ್ರತಿಭಟನೆ

ಚಿಕ್ಕಮಗಳೂರು:  ಅಂಬೇಡ್ಕರ್ ಜಯಂತಿಗೆ ಅಡ್ಡಿಪಡಿಸಿರುವ ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರುಗಳು ನಗರದ ಆಜಾ ದ್‌ಪಾರ್ಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ...

Related Articles

ಮಕ್ಕಳಿಗೆ ಶಿಕ್ಷಣ ನೀಡಿ ಬದುಕನ್ನು ಹಸನಾಗಿಸಬೇಕು

ಚಿಕ್ಕಮಗಳೂರು : ಕೃಷಿಕರು, ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಬೇಕು ಎಂದು ಶಾಸಕ ಹೆಚ್.ಡಿ....

ಮಂತ್ರ ಮಾಂಗಲ್ಯದಲ್ಲಿ 10 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮೂಡಿಗೆರೆ: ಈ ಜಗತ್ತಿನ ಸೃಷ್ಟಿ ಸರಿಯಾಗಿಯೇ ಇದೆ. ಆದರೆ ನಾವು ನೋಡುವ ದೃಷ್ಟಿ ಸರಿಯಾಗಿಲ್ಲ. ಇದರಿಂದ...

ಸೇವಾ ನ್ಯೂನತೆ ದುರಸ್ತಿಪಡಿಸುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ತೀರ್ಪು

ಚಿಕ್ಕಮಗಳೂರು: ಆಸ್ಪತ್ರೆಗೆ ರೋಗಿಗಳ ಅನುಕೂಲಕ್ಕಾಗಿ ಸಂಸ್ಥೆಯೊಂದರಿಂದ ಖರೀದಿಸಿದ ನೀರು ಪೂರೈಕೆಯ ಯಂತ್ರ ಕೈಕೊಟ್ಟಾಗ ದುರಸ್ತಿಗೆ ಮುಂದಾಗದೆ...

ನಕಲಿ ಐಎಎಸ್ ಅಧಿಕಾರಿ ಮಿಥುನ್ ನಿಂದ ವಕೀಲರಿಗೆ ವಂಚನೆ

ಚಿಕ್ಕಮಗಳೂರು: ಕಾಫಿನಾಡಿನ ಮೆಡಿಕಲ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ನಕಲಿ ಐಎಎಸ್ ಅಧಿಕಾರಿ ಮಿಥುನ್ ವಂಚನೆಯ...