Home namma chikmagalur chikamagalur ವೃದ್ಧರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚನೆ
chikamagalurCrime NewsHomeLatest Newsnamma chikmagalur

ವೃದ್ಧರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚನೆ

Share
Share

ಚಿಕ್ಕಮಗಳೂರು: ಎಪಿಕೆ (APK) ಫೈಲ್ ಬಳಸಿ ವೃದ್ಧರೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

ನಗರದ ಹೊಸಮನೆ ರಸ್ತೆಯ ನಿವಾಸಿ, ಲೋಕೋಪಯೋಗಿ ಇಲಾಖೆಯ (PWD) ನಿವೃತ್ತ ಇಂಜಿನಿಯರ್ ಆಗಿರುವ 84 ವರ್ಷದ ವೃದ್ಧರೊಬ್ಬರು ಈ ವಂಚನೆಗೆ ಒಳಗಾದವರು.

ಇವರು ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದು, ಅದರಲ್ಲಿ ತಮ್ಮ ನಿವೃತ್ತಿ ವೇತನದ ಹಣವನ್ನು ಇರಿಸಿದ್ದರು. ವಂಚಕರು ಆನಂದ್ ಅವರ ಮೊಬೈಲ್‌ಗೆ ತಿಳಿಯದಂತೆ ಯಾವುದೋ ಸಮಯದಲ್ಲಿ ಎಪಿಕೆ ಫೈಲ್ ಒಂದನ್ನು ಡೌನ್‌ಲೋಡ್ ಮಾಡಿಸಿದ್ದರು.

ಈ ಫೈಲ್ ಮೂಲಕ ಮೊಬೈಲ್ ಮೇಲೆ ನಿಯಂತ್ರಣ ಸಾಧಿಸಿದ ಕಿಡಿಗೇಡಿಗಳು, ಮಾರ್ಚ್ 23 ರಿಂದ ಏಪ್ರಿಲ್ 3ರ ನಡುವೆ ಹಂತ ಹಂತವಾಗಿ ಹಣವನ್ನು ವರ್ಗಾಯಿಸಿದ್ದಾರೆ. ಕಾರ್ತಿಕ್ ಎಂಬ ಹೆಸರಿನ ವ್ಯಕ್ತಿಯ ಖಾತೆಗೆ ಐಪಿಓಎಸ್ (IPOS) ಮೂಲಕ ಒಟ್ಟು 2,98,500 ರೂಪಾಯಿಗಳನ್ನು ಆನಂದ್‌ ಅವರಿಗೆ ತಿಳಿಯದಂತೆ ವರ್ಗಾವಣೆ ಮಾಡಿಕೊಳ್ಳಲಾಗಿದೆ.

ಬಳಿಕ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಆನಂದ್ ಅವರಿಗೆ ಈ ಮಹಾ ವಂಚನೆಯ ವಿಷಯ ತಿಳಿದುಬಂದಿದೆ. ಈ ಕುರಿತು ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನಿವೃತ್ತಿ ಜೀವನದ ಉಳಿತಾಯದ ಹಣವನ್ನು ಕಳೆದುಕೊಂಡಿರುವ ಆನಂದ್ ಅವರು, ವಂಚಕರನ್ನು ಪತ್ತೆ ಹಚ್ಚಿ ತಮಗೆ ಹಣ ವಾಪಸ್ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಸಾರ್ವಜನಿಕರು ಅಪರಿಚಿತ ಲಿಂಕ್‌ಗಳು ಅಥವಾ ಅಪ್‌ಗಳನ್ನು ಡೌನ್‌ಲೋಡ್ ಮಾಡುವಾಗ ಎಚ್ಚರದಿಂದಿರಬೇಕೆಂದು ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.

Fraud of lakhs of rupees from elderly’s bank account

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...