Home namma chikmagalur ಜೂನ್‌ 23ರಂದು ನಗರದಲ್ಲಿ ಸೌಹಾರ್ದ ನಡಿಗೆ
namma chikmagalurchikamagalurHomeLatest News

ಜೂನ್‌ 23ರಂದು ನಗರದಲ್ಲಿ ಸೌಹಾರ್ದ ನಡಿಗೆ

Share
Share

ಚಿಕ್ಕಮಗಳೂರು: ಎಲ್ಲಾ ಧರ್ಮಿಯರ ನಡುವೆ ಪ್ರೀತಿ ವಿಶ್ವಾಸ ಬೆಳೆಸಲು ಮನಸ್ಸುಗಳನ್ನು ಒಗ್ಗೂಡಿಸಲು ನಗರದಲ್ಲಿ ಜೂನ್‌ 23ರಂದು ಸೌಹಾರ್ದ ನಡಿಗೆ ಏರ್ಪಡಿಸಲಾಗಿದೆ ಎಂದು ಸುನ್ನಿ ಸ್ಟೂಡೆಂಟ್ ಫೆಡರೇಷನ್(ಎಸ್‌ಎಸ್‌ಎಫ್) ಅಧ್ಯಕ್ಷ ಎಚ್.ಐ. ಅಲ್ತಾಫ್ ಸಖಾಫಿ ಅಲ್ ಮುಈನಿ ಹಂಡುಗುಳಿ ತಿಳಿಸಿದರು.

ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಹನುಮಂತಪ್ಪ ವೃತ್ತದಿಂದ ಸೌಹಾರ್ದ ನಡಿಗೆ ಮೆರವಣಿಗೆ ಹೊರಟು ಎಂ.ಜಿ. ರಸ್ತೆ ಮೂಲಕ ಸಾಗಿ ಅಜಾದ್ ವೃತ್ತದಲ್ಲಿ ಸಮಾರೋಪ ನಡೆಯಲಿದೆ ಎಂದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೌಹಾರ್ದ ನಡಿಗೆ ಸಮಾರೋಪಕ್ಕೆ ಎಸ್‌ಎಸ್‌ಎಫ್ ರಾಜ್ಯ ಘಟಕದ ಅಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕೊಪ್ಪಳ, ಜಯಬಸವಾನಂದ ಸ್ವಾಮೀಜಿ, ಫಾದರ್ ಶಾಂತರಾಜು, ಶಾಸಕ ಎಚ್.ಡಿ. ತಮ್ಮಯ್ಯ ಪಾಲ್ಗೊಳ್ಳುವರು ಎಂದರು.

ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶಗಳಲ್ಲಿ ಒಂದಾದ ಭಾರತದ ಇಂದಿನ ಪರಿಸ್ಥಿತಿ ಶೋಚನೀಯವಾಗಿದೆ. ದೇಶದುದ್ದಕ್ಕೂ ದ್ವೇಷ ಭಾಷಣ ವ್ಯಾಪಕವಾಗಿದೆ. ಇತ್ತೀಚೆಗೆ ಕರಾವಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳು ದೇಶವನ್ನೇ ಬೆಚ್ಚಿ ಬೀಳಿಸಿವೆ. ಇಂತಹ ಪ್ರಕರಣಗಳು ಕೊನೆಗೊಂಡು ಸೌಹಾರ್ದ ಪರಂಪರೆ ಮರುಸ್ಥಾಪಿಸಬೇಕು.

ಈ ಆಶಯದೊಂದಿಗೆ ಕನ್ನಡ ನಾಡಿನ ಸೌಹಾರ್ದವನ್ನು ಇನ್ನಷ್ಟು ಗಟ್ಟಿಗೊಳಿಸಲು ಎಲ್ಲಾ ಧರ್ಮಿಯರ ನಡುವೆ ಪ್ರೀತಿ ವಿಶ್ವಾಸ ಬೆಳೆಸಲು ಉದ್ದೇಶಿಸಲಾಗಿದೆ. ಎಸ್‌ಎಸ್‌ಎಫ್ ರಾಜ್ಯದ 20 ಪಟ್ಟಣಗಳಲ್ಲಿ ಜೂ. 22ರಿಂದ ಜು. 4ರವರೆಗೆ ಸೌಹಾರ್ದ ನಡಿಗೆ ಕಾರ್ಯಕ್ರಮ ಆಯೋಜಿಸಿದೆ ಎಂದು ಹೇಳಿದರು.

ಸೌಹಾರ್ದ ನಡಿಗೆಯ ಸ್ವಾಗತ ಸಮಿತಿ ಅಧ್ಯಕ್ಷ ಯೂಸೂಫ್ ಹಾಜಿ ಉಪ್ಪಳ್ಳಿ, ಪ್ರಧಾನ ಕಾರ್ಯದರ್ಶಿ ಜಾಸಿರ್ ಹಿಮಮಿ ಸಖಾಫಿ ಬಾಳೆಹೊನ್ನೂರು, ಕನ್ವೀನರ್ ನಾಸಿರ್ ಇಂಪಾಲ್, ಜಿಲ್ಲಾ ಖಜಾಂಚಿ ನೌಶಾದ್, ತಾಲ್ಲೂಕು ಖಜಾಂಚಿ ಉಸ್ಮಾನ್ ಇದ್ದರು.

Friendly walk in the city on June 23rd

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...