ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ರವರುಗಳಿಗೆ ಹಿಂದುಳಿದ ಸಮಾಜದ ನಿಮ್ಮೆಲ್ಲರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಜರಾಯಿ ಮತ್ತು ಬಂದರು ಸಚಿವ ಬಸವಂತಪ್ಪ ಹೇಳಿದರು.
ಮಾಯಕೊಂಡದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬೀರೂರಿನ ಮಾರ್ಗಮಧ್ಯೆ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಪತ್ರಿಕೆಯೊಂದಿಗೆ ಅವರು ಮಾತನಾಡಿ ರಾಜ್ಯ ಸರ್ಕಾರ ನನಗೆ ಮುಜರಾಯಿ ಮತ್ತು ಬಂದರು ಖಾತೆ ನೀಡಿದ್ದು, ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಮುಜರಾಯಿ ಇಲಾಖೆಗೆ ಒಳಪಟ್ಟ ದೇ ಗುಲಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ.
ಎಲ್ಲಿ ನಮ್ಮ ಹಿಂದುಳಿದ ದೇಗುಲಗಳು ಜಿರ್ಣೋದ್ದಾರದಲ್ಲಿ ಹಿಂದಿವೆ ಎಂದು ತಿಳಿದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಹ ದೇಗುಲಗ ಳ ಅಭಿವೃದ್ದಿಗಾಗಿ ಒತ್ತು ನೀಡುತ್ತೇನೆ. ನಿಮ್ಮ ಕಡೂರು ಕ್ಷೇತ್ರದ ದೇಗುಲ ಗಳಿಗೆ ಮುಂದಿನ ದಿನಗಳಲ್ಲಿ ಭೇಟಿ ನೀಡಿ ಅಂತಹ ದೇಗುಲ ಗಳ ಜಿರ್ಣೋದ್ದಾರಕ್ಕಾಗಿ ಸರ್ಕಾರದಿಂದ ಅನುದಾನ ಒದಗಿಲಾಗುವುದು ಎಂದು ಭರವಸೆ ನೀಡಿದರು.
ಪುರಸಭಾ ಆಶ್ರಯ ಸಮಿತಿ ಸದಸ್ಯರಾದ ಎನ್.ಮುಬಾರಕ್, ಬಿ.ಟಿ.ಚಂದ್ರಶೇಖರ್, ಬಿ.ಜಿ.ಮೈಲಾರಪ್ಪ, ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡ ಆರೀಫ್, ಮಾಜಿ ಪುರಸಭಾ ಸದಸ್ಯರಾದ ಮಾನಿಕ್ ಭಾಷ, ಕಡೂರು ತಾಲ್ಲೂಕು ಮಾದಾರ ಮಹಾಸಭಾದ ಅಧ್ಯಕ್ಷ ಮಲ್ಲಿಕಾರ್ಜುನ್, ಗಂಟೆ ಕುಮಾರ್ ಸೇರಿದಂತೆ ಮತ್ತಿತರರಿದ್ದರು.
Funds for temple renovation in the near future
Leave a comment