Home ಅಗಲಿದ ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ ಅಂತ್ಯ ಸಂಸ್ಕಾರ
HomechikamagalurLatest Newsnamma chikmagalur

ಅಗಲಿದ ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ ಅಂತ್ಯ ಸಂಸ್ಕಾರ

Share
Share

ನರಸಿಂಹರಾಜಪುರ: ತಾಲ್ಲೂಕಿನ ಪ್ರಗತಿಪರ, ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ (70) ಅವರ ಅಂತ್ಯ ಸಂಸ್ಕಾರ ಸೋಮವಾರ ಸಂಜೆ  ತೋಟದಲ್ಲಿ ನಡೆಯಿತು.

ಪ್ರಸ್ತುತ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಜೆಡಿಎಸ್ ರಾಜ್ಯಘಟಕದ ಉಪಾಧ್ಯಕ್ಷರೂ ಆಗಿದ್ದ ಎಚ್.ಟಿ.ರಾಜೇಂದ್ರ ಅವರು ಭಾನುವಾರ ರಾತ್ರಿ ತಾಲ್ಲೂಕಿನ ಮಡಬೂರು ಗ್ರಾಮದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಇದ್ದಾರೆ. ಮಡಬೂರಿನಿಂದ ಎಚ್.ಟಿ.ರಾಜೇಂದ್ರ ಅವರ ಪಾರ್ಥಿವ ಶರೀರವನ್ನು ಪಟ್ಟಣಕ್ಕೆ ತಂದು ಮೆರವಣಿಗೆಯ ನಡೆಸಲಾಯಿತು.

ಹರಿದು ಬಂದ ಜನಸಾಗರ: ಎಚ್.ಟಿ.ರಾಜೇಂದ್ರ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮದಿಂದ ಪಟ್ಟಣದ ಶಾರದ ವಿದ್ಯಾಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ರಸ್ತೆ ಉದ್ದಕ್ಕೂ ಜನರು ಮೃತರ ನಿಧನಕ್ಕೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದರು.

ಎಚ್.ಟಿ.ರಾಜೇಂದ್ರ ಅವರ ನಿಧನದ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟು ಮುಚ್ಚಿ ಗೌರವ ಸಲ್ಲಿಸಿದರು. ಮೆರವಣಿಗೆ ವೇಳೆ ಪಟ್ಟಣದ ಶಾಲೆ, ಆಸ್ಪತ್ರೆ, ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಅಂತಿಮ ನಮನ ಸಲ್ಲಿಸಿದರು. ಶಾರದ ವಿದ್ಯಾಮಂದಿರ ಶಾಲೆಯ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಅಂತಿಮ ದರ್ಶನ ಪಡೆದರು.

ಶಾಸಕ ಟಿ.ಡಿ.ರಾಜೇಗೌಡ, ವಿಧಾನಪರಿಷತ್ ಸದಸ್ಯರಾದ ಬೋಜೇಗೌಡ, ಸಿ.ಟಿ.ರವಿ, ಭದ್ರಾ ಕಾಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್, ಮಾಜಿ ಶಾಸಕ ಡಿ.ಎನ್.ಜೀವರಾಜ್, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ಸೇರಿ ಹಲವು ಗಣ್ಯರು ಮೃತರ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

Funeral of late socialist thinker H.T. Rajendra

 

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕಳವು

ಮೂಡಿಗೆರೆ: ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ, ಕುತ್ತಿಗೆಗೆ ಕೈ ಹಾಕಿ 24 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮೂಡಿಗೆರೆ ಪಟ್ಟಣದ ಕುರ್ಕಮಕ್ಕಿ ವಾರ್ಡ್‌ನಲ್ಲಿ ಸೆ.5ರಂದು ನಡೆದಿದೆ....

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು ನೇಮಕ ಮಾಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡಿದ್ದು, ಚುನಾವಣಾ ದಿನಾಂಕ ಘೋಷಣೆಯಷ್ಟೇ ಬಾಕಿ ಉಳಿದಿದೆ....

Related Articles

ಪೊಲೀಸ್ ಅಧಿಕಾರಿ ಖಾಕಿ ಸಮವಸ್ತ್ರ ಧರಿಸಿ ಗೂಂಡಾಗಿರಿ

ಚಿಕ್ಕಮಗಳೂರು: ಟಿ. ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರಿಗೆ ಇನ್ಸ್‌ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೃಷಿ ಸಾಲಕ್ಕೆ ಶೇ.50 ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಗೆ ವಂಚನೆ

ಶೃಂಗೇರಿ: ಬ್ಯಾಂಕ್‌ನಿಂದ ಕೃಷಿ ಸಾಲ ಮಂಜೂರು ಮಾಡಿಸಿ, ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಂದ...

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸರ್ಕಾರಿ ಬಸ್ ಹರಿದು ಇಬ್ಬರು ಸಾವು

ಕಡೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ರಸ್ತೆಗೆ ಬಿದ್ದ ಸವಾರರ ಮೇಲೆ...

ಮನೆಯ ಹಿತ್ತಲಿಗೆ ನುಗ್ಗಿ ನೀರು ಕುಡಿದ ಚಿರತೆ

ಕಡೂರು: ಕಾಫಿನಾಡಿನ ಬಯಲು ಭಾಗದಲ್ಲಿ ಚಿರತೆಗಳ ಓಡಾಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆಯ ಹಿತ್ತಲಿಗೆ...