Home ನಗರದಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಓಡಾಟ
HomechikamagalurCrime NewsLatest Newsnamma chikmagalur

ನಗರದಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಓಡಾಟ

Share
Share

ಚಿಕ್ಕಮಗಳೂರು: : ಕಾಫಿನಾಡಿನಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್‌ವೊಂದು ಭೀತಿ ಹುಟ್ಟಿಸಿದ್ದು, ನಗರದಲ್ಲಿ ಆಯುಧಗಳ ಸಮೇತ ೬ ಮಂದಿ ಕಳ್ಳರ ತಂಡ ಓಡಾಟ ನಡೆಸಿರುವುದು ಬೆಳಕಿಗೆ ಬಂದಿದೆ.

ಮಧ್ಯರಾತ್ರಿ ೨ ಗಂಟೆಯಿಂದ ೩.೩೦ರ ನಡುವೆ ಬೈಪಾಸ್ ರಸ್ತೆ ದಂಟರಮಕ್ಕಿ ಹಾಗೂ ಸುತ್ತಮುತ್ತಲಿನ ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದ ಕಳ್ಳರ ಗ್ಯಾಂಗ್ ರಾಮಕೃಷ್ಣ ಕಾಲೇಜು ಸಮೀಪದ ಮನೆಯೊಂದರಲ್ಲಿ ದರೋಡೆಗೆ ಯತ್ನಿಸಿದೆ.

ಕಳ್ಳರು ಮನೆಗಳಿಗೆ ಟಾರ್ಚ್ ಹಾಕಿ ನೋಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಮುಸುಕುಧಾರಿ ಕಳ್ಳರ ಓಡಾಟದ ದೃಶ್ಯಗಳು ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದ್ದು, ನಗರ ನಿವಾಸಿಗಳು ಆತಂಕದಲ್ಲಿದ್ದಾರೆ.

ಸದ್ಯ ಜನರಲ್ಲಿ ಆತಂಕ ಸೃಷ್ಟಿಸಿರುವ ಮುಸುಕುಧಾರಿ ಕಳ್ಳರ ಗ್ಯಾಂಗ್‌ನ್ನು ಹೆಡೆಮುರಿ ಕಟ್ಟುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Gang of masked thieves roams the city

Share

Leave a comment

Leave a Reply

Your email address will not be published. Required fields are marked *

Don't Miss

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು....

Related Articles

ESA ಕರಡು ಅಧಿಸೂಚನೆ: ಭೌತಿಕ ಸರ್ವೆ ಬಳಿಕವೇ ಅಂತಿಮ ಅಧಿಸೂಚನೆಗೆ ಒತ್ತಾಯ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತ 7ನೇ ಕರಡು ಅಧಿಸೂಚನೆಯಲ್ಲಿ ಚಿಕ್ಕಮಗಳೂರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿ.ಪಿ.ಐ. ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನ ರಹಿತ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಒದಗಿಸುವುದು, ಎಸ್‌ಐಆರ್‌ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವುದು...

ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ

ಕಡೂರು : ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ...

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು...