Home namma chikmagalur chikamagalur ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ
chikamagalurHomeLatest Newsnamma chikmagalur

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

Share
Share

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು.

ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ ವತಿಯಿಂದ ಓಂಕಾರೇಶ್ವರ ದೇವಸ್ಥಾನದ ಆವರಣದಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು. ಇದಲ್ಲದೇ ಎಲ್ಲಾ ಬಡಾವಣೆಗಳಲ್ಲಿ, ಗಲ್ಲಿಗಳಲ್ಲೂ ಮೂರ್ತಿಗಳು ಪ್ರತಿಷ್ಠಾಪನೆಗೊಂಡಿವೆ.

ವಿಜಯಪುರ, ಹಿರೇಮಗಳೂರು, ಕೋಟೆ, ರಾಮನಹಳ್ಳಿ, ದಂಟರಮಕ್ಕಿ, ಜಯನಗರ, ಹೊಸಮನೆ, ಉಂಡೇದಾಸರಹಳ್ಳಿ, ನೆಲ್ಲೂರು, ರಾಂಪುರ, ತೇಗೂರು ಸೇರಿ ಎಲ್ಲೆಡೆ ಗಣೇಶನ ದೊಡ್ಡ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.
ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸುವ ಮೊದಲು ನಗರದಲ್ಲಿ ಮೆರವಣಿಗೆ ನಡೆಸಲಾಯಿತು. ಶಾಸಕ ಎಚ್.ಡಿ. ತಮ್ಮಯ್ಯ ಮೆರವಣಿಗೆಗೆ ಚಾಲನೆ ನೀಡಿದರು.

ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಸಿ.ಎಸ್. ಕುಬೇರ, ಪ್ರಧಾನ ಕಾರ್ಯದರ್ಶಿ ಸಿ.ಆರ್. ಕೇಶವಮೂರ್ತಿ, ಈಶ್ವರಪ್ಪ ಕೋಟೆ, ವರಸಿದ್ದಿ ವೇಣುಗೋಪಾಲ್, ಎಂ.ಎಸ್. ಉಮೇಶಕುಮಾರ್‌, ಸಚಿನ್ ಇದ್ದರು.

ಹಿಂದೂ ಮಹಾಗಣಪತಿ ಸೇವಾ ಸಂಘದಿಂದ 13ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಸೋಮವಾರ ಸಂಜೆ ನೂರಾರು ಭಕ್ತರು ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು.

Gauri-Ganesh festival celebrations across the district

Share

Leave a comment

Leave a Reply

Your email address will not be published. Required fields are marked *

Don't Miss

ಕೆಎಸ್‌ಆರ್‌ಟಿಸಿ ಬಸ್‌ಗಾಗಿ ರಸ್ತೆಗಿಳಿದ ವಿದ್ಯಾರ್ಥಿಗಳು-ಗ್ರಾಮಸ್ಥರು

ಕಡೂರು: ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಘಟನೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್ ಬಳಿ...

ವಿಶೇಷ ಅಧಿವೇಶನದಲ್ಲಿ ಪಕ್ಷಭೇದ ಮರೆತು ಮಲೆನಾಡಿನ ಸಮಸ್ಯೆ ಚರ್ಚಿಸಲು ಒತ್ತಾಯ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆ.21, 22 ಮತ್ತು 23ರಂದು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿರುವುದನ್ನು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಸ್ವಾಗತಿಸಿದೆ....

Related Articles

ಪೌರ ಕಾರ್ಮಿಕರಿಗೆ ಸವಲತ್ತು ಕಲ್ಪಿಸಿ

ಚಿಕ್ಕಮಗಳೂರು:  ಪೌರಕಾರ್ಮಿಕರಿಗೆ ವಸತಿ ಸೌಲಭ್ಯ, ರಜೆ, ಮಕ್ಕಳ ಶಿಕ್ಷಣ ಸೇರಿದಂತೆ ಅವರ ಕಲ್ಯಾಣಕ್ಕೆ ಅಗತ್ಯ ಸೌಕರ್ಯಗಳನ್ನು...

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ...

ನಕಲಿ ಬೀಗದ ಕೈ ಬಳಸಿ ಮನೆಯಲ್ಲಿದ್ದ ನಗ-ನಗದು ಕಳವು

ಚಿಕ್ಕಮಗಳೂರು: ಮನೆಯ ಯಜಮಾನರು ಹಬ್ಬದ ಸಂಭ್ರಮಕ್ಕೆಂದು ಊರಿಗೆ ತೆರಳಿದ್ದ ಸಮಯವನ್ನೇ ಹೊಂಚು ಹಾಕಿ ಕಾದು, ನಕಲಿ...