Home namma chikmagalur ಕಳಸದಲ್ಲಿ ಸಡಗರ ತಂದ ಗಿರಿಜಾಕಲ್ಯಾಣ ಉತ್ಸವ
namma chikmagalurchikamagalurHomeLatest News

ಕಳಸದಲ್ಲಿ ಸಡಗರ ತಂದ ಗಿರಿಜಾಕಲ್ಯಾಣ ಉತ್ಸವ

Share
Share

ಕಳಸ: ಪಟ್ಟಣದಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಜನಸಂದಣಿಯ ದೃಶ್ಯ. ಪಟ್ಟಣದ ಕಳಸೇಶ್ವರ ದೇವಸ್ಥಾನದಲ್ಲಿ ಕಳಸೇಶ್ವರ ಮತ್ತು ಗಿರಿಜೆಯು ಒಟ್ಟಿಗೇ ಇರುವ ದೃಶ್ಯ ಕಣ್ತುಂಬಿಕೊಳ್ಳಲು ಭಕ್ತರು ಉತ್ಸಾಹದಿಂದ ನೆರೆದಿದ್ದರು.

ಕಳೆದ ವಾರ ಆರಂಭಗೊಡಿದ್ದ ಗಿರಿಜಾ ಕಲ್ಯಾಣದ ವಿಧಿಗಳು ಸಂಪ್ರದಾಯಬದ್ಧವಾಗಿ ನೆರವೇರಿದ್ದವು. ಭಕ್ತರು ಎಲ್ಲ ವಿಧಿಗಳಲ್ಲೂ ಗಂಡು–ಹೆಣ್ಣಿನ ಕಡೆಯವರಂತೆ ಪಾಲ್ಗೊಂಡು ದೇವರ ಮದುವೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ವಾರವಿಡೀ ಗಿರಿಜಾಂಬಾ ದೇವಸ್ಥಾನ ಮತ್ತು ಕಳಸೇಶ್ವರ ದೇವಸ್ಥಾನದ ಪರಿಸರದಲ್ಲಿ ಹಬ್ಬದ ಸಡಗರ, ಭಕ್ತರ ಲವಲವಿಕೆ ಇತ್ತು. ಶನಿವಾರ ಮಧ್ಯರಾತ್ರಿಯ ನಂತರ ಗಿರಿಜೆಯನ್ನು ಕಳಸೇಶ್ವರನ ಸನ್ನಿಧಿಗೆ ಕರೆತಂದ ನಂತರ ಭಾನುವಾರ ಬೆಳಗಿನ ಜಾವ 3 ಗಂಟೆಗೆ ಕಲಶೇಶ್ವರ ಮತ್ತು ಗಿರಿಜೆಯ ಕಲ್ಯಾಣ ನಡೆಯಿತು.

ದೇವರ ವಿವಾಹವಾದ ನಂತರ ಒಂದು ದಿನ ಮಾತ್ರ ಕಳಸೇಶ್ವರ ಗಿರಿಜೆಯನ್ನು ಒಟ್ಟಿಗೆ ಕೂರಿಸುವ ಸಂಪ್ರದಾಯ ಇದೆ. ಕಾಶಿಯಲ್ಲಿ 12 ವರ್ಷಕ್ಕೊಮ್ಮೆ ಕಲ್ಯಾಣ ನಡೆದರೆ ಕಳಸದಲ್ಲಿ ಮಾತ್ರ ಪ್ರತಿ ವರ್ಷವೂ ಈಶ್ವರ ಮತ್ತು ಪಾರ್ವತಿ ನಡುವೆ ಕಲ್ಯಾಣ ನೆರವೇರುತ್ತದೆ. ಕಳಸವು ಇದೇ ಕಾರಣಕ್ಕೆ ದಕ್ಷಿಣ ಕಾಶಿ ಎಂದೇ ಹೆಸರಾಗಿದೆ.

ಕಲ್ಯಾಣವನ್ನು ಕಣ್ತುಂಬಿಕೊಳ್ಳಲು ಭಕ್ತರು ಪ್ರತಿ ವರ್ಷವೂ ಕಳಸಕ್ಕೆ ಧಾವಿಸುತ್ತಾರೆ. ಭಾನುವಾರ ಕಳಸೇಶ್ವರ ದೇವಸ್ಥಾನದಲ್ಲಿ ಭಕ್ತರು ದೇವರ ಜೋಡಿಗೆ ನಮಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಕೋರಿಕೆ ಸಲ್ಲಿಸಿದರು. ಆನಂತರ ವಿವಾಹದ ಸಿಹಿಯೂಟವನ್ನು 3 ಸಾವಿರಕ್ಕೂ ಹೆಚ್ಚು ಜನರು ಸವಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಕಲ್ಯಾಣದ ವಿಧಿಗಳನ್ನು ಮತ್ತು ವಿವಾಹ ಮಹೋತ್ಸವದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿತ್ತು.

Girijakalyana Utsava

Share

Leave a comment

Leave a Reply

Your email address will not be published. Required fields are marked *

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....

Related Articles

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ...

ರಕ್ತದಾನದಿಂದ ಜೀವ ಉಳಿಸುವವರು ಜೀವಸಂರಕ್ಷಕರೇ

ಚಿಕ್ಕಮಗಳೂರು: – ರಕ್ತದಾನಕ್ಕೆ ಜಾತಿ ತಾರತಮ್ಯವಿಲ್ಲ. ಜೀವ ಉಳಿಸುವ ಪ್ರತಿಯೊಬ್ಬ ವ್ಯಕ್ತಿಯು ಜೀವಸಂರಕ್ಷಕರೇ. ಶ್ರೀಮಂತಿಕೆ ಎಷ್ಟೇ...

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ...