Home namma chikmagalur ಕಳಸದಲ್ಲಿ ಸಡಗರ ತಂದ ಗಿರಿಜಾಕಲ್ಯಾಣ ಉತ್ಸವ
namma chikmagalurchikamagalurHomeLatest News

ಕಳಸದಲ್ಲಿ ಸಡಗರ ತಂದ ಗಿರಿಜಾಕಲ್ಯಾಣ ಉತ್ಸವ

Share
Share

ಕಳಸ: ಪಟ್ಟಣದಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಜನಸಂದಣಿಯ ದೃಶ್ಯ. ಪಟ್ಟಣದ ಕಳಸೇಶ್ವರ ದೇವಸ್ಥಾನದಲ್ಲಿ ಕಳಸೇಶ್ವರ ಮತ್ತು ಗಿರಿಜೆಯು ಒಟ್ಟಿಗೇ ಇರುವ ದೃಶ್ಯ ಕಣ್ತುಂಬಿಕೊಳ್ಳಲು ಭಕ್ತರು ಉತ್ಸಾಹದಿಂದ ನೆರೆದಿದ್ದರು.

ಕಳೆದ ವಾರ ಆರಂಭಗೊಡಿದ್ದ ಗಿರಿಜಾ ಕಲ್ಯಾಣದ ವಿಧಿಗಳು ಸಂಪ್ರದಾಯಬದ್ಧವಾಗಿ ನೆರವೇರಿದ್ದವು. ಭಕ್ತರು ಎಲ್ಲ ವಿಧಿಗಳಲ್ಲೂ ಗಂಡು–ಹೆಣ್ಣಿನ ಕಡೆಯವರಂತೆ ಪಾಲ್ಗೊಂಡು ದೇವರ ಮದುವೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ವಾರವಿಡೀ ಗಿರಿಜಾಂಬಾ ದೇವಸ್ಥಾನ ಮತ್ತು ಕಳಸೇಶ್ವರ ದೇವಸ್ಥಾನದ ಪರಿಸರದಲ್ಲಿ ಹಬ್ಬದ ಸಡಗರ, ಭಕ್ತರ ಲವಲವಿಕೆ ಇತ್ತು. ಶನಿವಾರ ಮಧ್ಯರಾತ್ರಿಯ ನಂತರ ಗಿರಿಜೆಯನ್ನು ಕಳಸೇಶ್ವರನ ಸನ್ನಿಧಿಗೆ ಕರೆತಂದ ನಂತರ ಭಾನುವಾರ ಬೆಳಗಿನ ಜಾವ 3 ಗಂಟೆಗೆ ಕಲಶೇಶ್ವರ ಮತ್ತು ಗಿರಿಜೆಯ ಕಲ್ಯಾಣ ನಡೆಯಿತು.

ದೇವರ ವಿವಾಹವಾದ ನಂತರ ಒಂದು ದಿನ ಮಾತ್ರ ಕಳಸೇಶ್ವರ ಗಿರಿಜೆಯನ್ನು ಒಟ್ಟಿಗೆ ಕೂರಿಸುವ ಸಂಪ್ರದಾಯ ಇದೆ. ಕಾಶಿಯಲ್ಲಿ 12 ವರ್ಷಕ್ಕೊಮ್ಮೆ ಕಲ್ಯಾಣ ನಡೆದರೆ ಕಳಸದಲ್ಲಿ ಮಾತ್ರ ಪ್ರತಿ ವರ್ಷವೂ ಈಶ್ವರ ಮತ್ತು ಪಾರ್ವತಿ ನಡುವೆ ಕಲ್ಯಾಣ ನೆರವೇರುತ್ತದೆ. ಕಳಸವು ಇದೇ ಕಾರಣಕ್ಕೆ ದಕ್ಷಿಣ ಕಾಶಿ ಎಂದೇ ಹೆಸರಾಗಿದೆ.

ಕಲ್ಯಾಣವನ್ನು ಕಣ್ತುಂಬಿಕೊಳ್ಳಲು ಭಕ್ತರು ಪ್ರತಿ ವರ್ಷವೂ ಕಳಸಕ್ಕೆ ಧಾವಿಸುತ್ತಾರೆ. ಭಾನುವಾರ ಕಳಸೇಶ್ವರ ದೇವಸ್ಥಾನದಲ್ಲಿ ಭಕ್ತರು ದೇವರ ಜೋಡಿಗೆ ನಮಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಕೋರಿಕೆ ಸಲ್ಲಿಸಿದರು. ಆನಂತರ ವಿವಾಹದ ಸಿಹಿಯೂಟವನ್ನು 3 ಸಾವಿರಕ್ಕೂ ಹೆಚ್ಚು ಜನರು ಸವಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಕಲ್ಯಾಣದ ವಿಧಿಗಳನ್ನು ಮತ್ತು ವಿವಾಹ ಮಹೋತ್ಸವದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿತ್ತು.

Girijakalyana Utsava

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...