Home namma chikmagalur chikamagalur ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ ಸಿಲುಕಿ ಬಾಲಕಿ ಸಾವು
chikamagalurHomeLatest Newsnamma chikmagalur

ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ ಸಿಲುಕಿ ಬಾಲಕಿ ಸಾವು

Share
Share

ಶೃಂಗೇರಿ: ಬೇಸಿಗೆ ರಜಾ ಕಳೆಯಲು ಅಜ್ಜಿ ಮನೆಗೆ ಬಂದ ಸಂದರ್ಭದಲ್ಲಿ ಬಾಲಕಿಯೊಬ್ಬಳು ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ ಸಿಲುಕಿ ಮೃತಪಟ್ಟ ಘಟನೆ ತಾಲ್ಲೂಕಿನ ಬೆಟ್ಟಗೆರೆ ವ್ಯಾಪ್ತಿಯ ಕಲ್ಲೊಳ್ಳಿ ಗ್ರಾಮದಲ್ಲಿ ನಡೆದಿದೆ ಮೃತ ಬಾಲಕಿಯನ್ನು ಸಪ್ತಮಿ[೧೪] ಎಂದು ಗುರುತಿಸಲಾಗಿದೆ.

ಆಕೆ ಮರ್ಕಲ್ ಗ್ರಾ.ಪಂ ವ್ಯಾಪ್ತಿಯ ಕೋಗಿನಬೈಲಿನ ಶ್ರೀ ಗಜೇಂದ್ರ ಅವರ ಪುತ್ರಿ.ಸಪ್ತಮಿ ತನ್ನ ತಾಯಿ ಶುಭಾ ಅವರ ಜೊತೆ ಬೇಸಿಗೆ ರಜೆಗೆಂದು ಅಜ್ಜೆ ಮನೆಗೆ ಬಂದಿದ್ದಳು ಊಟದ ಬಳಿಕ ಮನೆಯವರು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಬಾಲಕಿ ಮರದ ಏಣಿಯಿಂದ ಇಳಿಯಲು ಕಟ್ಟಿದ ನೈಲಾನ್ ಬಟ್ಟೆಯಿಂದ ಮಾಡಿದ ಹಗ್ಗವನ್ನು ಹಿಡಿದು ಆಟವಾಡುತ್ತಿದ್ದು ಕೆಳಗೆ ಇಳಿಯುವ ಸಂದರ್ಭದಲ್ಲಿ ಕಾಲು ತಪ್ಪಿ ಬಿದ್ದ ಪರಿಣಾಮ ಹಗ್ಗವು ಕುತ್ತಿಗೆಗೆ ಸಿಕ್ಕಿಕೊಂಡಿದ್ದು ಉಸಿರುಗಟ್ಟಿ ಬಾಲಕಿ ಮೃತ ಪಟ್ಟಿದ್ದಾಳೆ.

ಪೋಲಿಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ತಂದೆ,ತಾಯಿ,ಓರ್ವ ಸಹೋದರನನ್ನು ಸಪ್ತಮಿ ಅಗಲಿದ್ದಾಳೆ.ಕೋಗಿನಬೈಲಿನ ಸರಕಾರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಸಪ್ತಮಿ ಉತ್ತೀರ್ಣಗೊಂಡಿದ್ದಳು. ಅಕೆಯ ಅಂತಿಮಸಂಸ್ಕಾರ ಕೋಗಿನಬೈಲಿನ ಅವರ ಜಮೀನು ಸಮೀಪ ನೆರವೇರಿತು.

Girl dies after getting caught in rope while playing

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...