Home namma chikmagalur ಅರಣ್ಯ ಇಲಾಖೆ ವಿರುದ್ಧ ಗೋಬ್ಯಾಕ್ ಚಳವಳಿ
namma chikmagalurchikamagalurHomeLatest News

ಅರಣ್ಯ ಇಲಾಖೆ ವಿರುದ್ಧ ಗೋಬ್ಯಾಕ್ ಚಳವಳಿ

Share
Share

ಚಿಕ್ಕಮಗಳೂರು: ಸೆಕ್ಷನ್ ೪(೧) ಮೀಸಲು ಅರಣ್ಯ ಘೋಷಣೆಯಾಗಿರುವ ಬ್ಲಾಕ್‌ಗಳಿಗೆ ಸೆಟಲ್‌ಮೆಂಟ್ ಮಾಡಲು ನಿಯೋಜಿಸಿರುವ ಅರಣ್ಯ ವ್ಯವಸ್ಥಾಪಕರು ರೈತರ ಪರವಾಗಿರದೆ ಏಕಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದು, ಅವರ ವಿರುದ್ಧ ಗೋಬ್ಯಾಕ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ಅಧ್ಯಕ್ಷ ಎಸ್. ವಿಜಯ್‌ಕುಮಾರ್ ಎಚ್ಚರಿಸಿದರು.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆಕ್ಷನ್ ೪(೧) ಮೀಸಲು ಅರಣ್ಯ ಸಮಸ್ಯೆ ಬಗ್ಗೆ ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು, ಎಫ್‌ಎಸ್‌ಒ ಸೇರಿದಂತೆ ಅರಣ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದರು.

ರೈತರು ಮನೆ ಕಟ್ಟಿಕೊಂಡು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಎ ಎಂದು ವರ್ಗೀಕರಿಸಿ, ರೈತರು ಸಾಗುವಳಿ ಮಾಡದೆ ಖಾಲಿ ಇರುವ ಭೂಮಿಯನ್ನ ಬಿ ಎಂದು ವರ್ಗೀಕರಿಸಿ ರೈತರಿಲ್ಲದ ಬಿ ವರ್ಗೀಕರಣದ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಿ, ಎ ವರ್ಗೀಕರಣದ ಭೂಮಿಯನ್ನು ಸರಕಾರ ತೀರ್ಮಾನ ತೆಗೆದು ಕೊಳ್ಳುವವರೆಗೂ ಅದನ್ನು ಹಾಗೇ ಉಳಿಸಬೇಕು ಎಂದು ಸಭೆಯಲ್ಲಿ ತೀರ್ಮಾನವಾಗಿದೆ ಎಂದು ತಿಳಿಸಿದರು.

ಆದರೆ, ಇಲಿನ ಎಫ್‌ಎಸ್‌ಒ ಅವರು ಈ ತೀರ್ಮಾನವನ್ನು ಧಿಕ್ಕರಿಸಿ ಯಥಾವತ್ತಾಗಿ ರೈತರ ಜಮೀನಿಗೆ ಭೇಟಿ ನೀಡದೆ ಸ್ಕೆಚ್ ತಯಾರಿ ಮಾಡದೆ ನ್ಯಾಯಾಲಯದ ನಿಯಮಾವಳಿಗಳನ್ನು ಪಾಲಿಸದೆ ಏಕಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇವರ ಧೋರಣೆ ಇದೇ ರೀತಿ ಮುಂದುವರಿದರೆ ಅವರ ವಿರುದ್ಧ ಗೋಬ್ಯಾಕ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಮೂನೆ ೫೦-೫೩ ರಲ್ಲಿ ಮಂಜೂರಾಗಿದ್ದ ಭೂಮಿಯನ್ನು ಅಕ್ರಮ ಎಂದು ಪರಿಗಣಿಸಿ ರದ್ದುಪಡಿಸಿದ್ದು, ಕೂಡಲೇ ಇದನ್ನು ಪುನರ್‌ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. ನಿಯಮಾವಳಿಗೆ ತಿದ್ದುಪಡಿ ಮಾಡಿ ನಮೂನೆ ೫೭ ರಲ್ಲಿ ಪ್ಲಾಂಟೇಶನ್ ಬೆಳೆಗಳಿಗೂ ಹಕ್ಕುಪತ್ರ ನೀಡುವಂತೆ ಕಂದಾಯ ಸಚಿವರಲ್ಲಿ ಒತ್ತಾಯ ಮಾಡಬೇಕು ಎಂದು ಜನಪ್ರತಿನಿಧಿಗಳನ್ನು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಕೆ.ಕೆ. ರಘು, ಮುಖಂಡರುಗಳಾದ ವಾಸುಪೂಜಾರಿ, ಪೂರ್ಣೇಶ್, ಈಶ್ವರ್, ರವಿಕುಮಾರ್, ಚಂದ್ರೇಗೌಡ, ಕುಮಾರಸ್ವಾಮಿ ಉಪಸ್ಥಿತರಿದ್ದರು.

Go back movement against the forest department

Share

Leave a comment

Leave a Reply

Your email address will not be published. Required fields are marked *

Don't Miss

ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮ?

ಮೂಡಿಗೆರೆ: ಮೂಡಿಗೆರೆ ಶಾಸಕಿ ನಯನಮೋಟಮ್ಮ ಕೇಸರಿ ಶಾಲು ಧರಿಸಿ ಹಿಂದು ಮಹಸಭಾ ಗಣಪತಿ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಬಿಜೆಪಿ ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಜೊತೆಗೆ ವೇದಿಕೆಯಲ್ಲಿ ಇರುವುದರ ಬಗ್ಗೆ...

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ ವ್ಯಾಪ್ತಿಯ ಅರೆನೂರು ಗ್ರಾಮದಲ್ಲಿ ನಡೆದಿದ್ದು ವಿಷಯ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ತೆರಳಿದ್ದಾರೆ. Son...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ

ಚಿಕ್ಕಮಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ...

ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ

ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦...

ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ...

ಆ.7-8 ಕ್ಕೆ ಸಿಪಿಐ ಸಮಾವೇಶ-ಬಹಿರಂಗ ಅಧಿವೇಶನ

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ ಪಾರ್ಟಿ ಸ್ಥಾಪನೆಯಾಗಿ ೧೦೦ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆ.೭ ಮತ್ತು ೮...