Home namma chikmagalur ಅರಣ್ಯ ಇಲಾಖೆ ವಿರುದ್ಧ ಗೋಬ್ಯಾಕ್ ಚಳವಳಿ
namma chikmagalurchikamagalurHomeLatest News

ಅರಣ್ಯ ಇಲಾಖೆ ವಿರುದ್ಧ ಗೋಬ್ಯಾಕ್ ಚಳವಳಿ

Share
Share

ಚಿಕ್ಕಮಗಳೂರು: ಸೆಕ್ಷನ್ ೪(೧) ಮೀಸಲು ಅರಣ್ಯ ಘೋಷಣೆಯಾಗಿರುವ ಬ್ಲಾಕ್‌ಗಳಿಗೆ ಸೆಟಲ್‌ಮೆಂಟ್ ಮಾಡಲು ನಿಯೋಜಿಸಿರುವ ಅರಣ್ಯ ವ್ಯವಸ್ಥಾಪಕರು ರೈತರ ಪರವಾಗಿರದೆ ಏಕಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದು, ಅವರ ವಿರುದ್ಧ ಗೋಬ್ಯಾಕ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ಅಧ್ಯಕ್ಷ ಎಸ್. ವಿಜಯ್‌ಕುಮಾರ್ ಎಚ್ಚರಿಸಿದರು.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆಕ್ಷನ್ ೪(೧) ಮೀಸಲು ಅರಣ್ಯ ಸಮಸ್ಯೆ ಬಗ್ಗೆ ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು, ಎಫ್‌ಎಸ್‌ಒ ಸೇರಿದಂತೆ ಅರಣ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದರು.

ರೈತರು ಮನೆ ಕಟ್ಟಿಕೊಂಡು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಎ ಎಂದು ವರ್ಗೀಕರಿಸಿ, ರೈತರು ಸಾಗುವಳಿ ಮಾಡದೆ ಖಾಲಿ ಇರುವ ಭೂಮಿಯನ್ನ ಬಿ ಎಂದು ವರ್ಗೀಕರಿಸಿ ರೈತರಿಲ್ಲದ ಬಿ ವರ್ಗೀಕರಣದ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಿ, ಎ ವರ್ಗೀಕರಣದ ಭೂಮಿಯನ್ನು ಸರಕಾರ ತೀರ್ಮಾನ ತೆಗೆದು ಕೊಳ್ಳುವವರೆಗೂ ಅದನ್ನು ಹಾಗೇ ಉಳಿಸಬೇಕು ಎಂದು ಸಭೆಯಲ್ಲಿ ತೀರ್ಮಾನವಾಗಿದೆ ಎಂದು ತಿಳಿಸಿದರು.

ಆದರೆ, ಇಲಿನ ಎಫ್‌ಎಸ್‌ಒ ಅವರು ಈ ತೀರ್ಮಾನವನ್ನು ಧಿಕ್ಕರಿಸಿ ಯಥಾವತ್ತಾಗಿ ರೈತರ ಜಮೀನಿಗೆ ಭೇಟಿ ನೀಡದೆ ಸ್ಕೆಚ್ ತಯಾರಿ ಮಾಡದೆ ನ್ಯಾಯಾಲಯದ ನಿಯಮಾವಳಿಗಳನ್ನು ಪಾಲಿಸದೆ ಏಕಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇವರ ಧೋರಣೆ ಇದೇ ರೀತಿ ಮುಂದುವರಿದರೆ ಅವರ ವಿರುದ್ಧ ಗೋಬ್ಯಾಕ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಮೂನೆ ೫೦-೫೩ ರಲ್ಲಿ ಮಂಜೂರಾಗಿದ್ದ ಭೂಮಿಯನ್ನು ಅಕ್ರಮ ಎಂದು ಪರಿಗಣಿಸಿ ರದ್ದುಪಡಿಸಿದ್ದು, ಕೂಡಲೇ ಇದನ್ನು ಪುನರ್‌ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. ನಿಯಮಾವಳಿಗೆ ತಿದ್ದುಪಡಿ ಮಾಡಿ ನಮೂನೆ ೫೭ ರಲ್ಲಿ ಪ್ಲಾಂಟೇಶನ್ ಬೆಳೆಗಳಿಗೂ ಹಕ್ಕುಪತ್ರ ನೀಡುವಂತೆ ಕಂದಾಯ ಸಚಿವರಲ್ಲಿ ಒತ್ತಾಯ ಮಾಡಬೇಕು ಎಂದು ಜನಪ್ರತಿನಿಧಿಗಳನ್ನು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಕೆ.ಕೆ. ರಘು, ಮುಖಂಡರುಗಳಾದ ವಾಸುಪೂಜಾರಿ, ಪೂರ್ಣೇಶ್, ಈಶ್ವರ್, ರವಿಕುಮಾರ್, ಚಂದ್ರೇಗೌಡ, ಕುಮಾರಸ್ವಾಮಿ ಉಪಸ್ಥಿತರಿದ್ದರು.

Go back movement against the forest department

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...