Home Latest News ಚಿಕ್ಕಮಗಳೂರಿನ ಹೆಮ್ಮೆಯ ಗೊ.ರು.ಚ ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷ
Latest News

ಚಿಕ್ಕಮಗಳೂರಿನ ಹೆಮ್ಮೆಯ ಗೊ.ರು.ಚ ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷ

Share
Share

ಚಿಕ್ಕಮಗಳೂರು : ಮಂಡ್ಯದಲ್ಲಿ ಡಿಸೆಂಬರ್ 20 ನೇ ತಾರೀಖಿನಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ ಸರ್ವಾನುಮತದಿಂದ ಅಯ್ಕೆಯಾಗಿದ್ದಾರೆ. ಗೊ,ರು,ಚ ಎಂದೇ ನಾಡಿನಾದ್ಯಂತ ಚಿರಪರಿಚಿತರಾಗಿರುವ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಗೊಂಡೇದಹಳ್ಳಿಯ 96 ವಯಸ್ಸಿನ ಗೊ,ರು,ಚ ಶಿಕ್ಷಕರಾಗಿ ವೃತ್ತಿ ಆರಂಭಿಸಿ ವಾರ್ತಾ ಇಲಾಖೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದವರು.

ತರೀಕೆರೆ ತಾಲ್ಲೂಕಿನಿಂದ ಆರಂಭವಾದ ಸಾಹಿತ್ಯ, ವಚನ ಸಾಹಿತ್ಯ ಮತ್ತು ಜಾನಪದ ಸಾಹಿತ್ಯ ನಾಡಿನಾದ್ಯಂತ ತಲುಪಿವೆ. 1967 ರಲ್ಲಿ ತರೀಕೆರೆಯಲ್ಲಿ ನಡೆದ “ವಿಶ್ವ ಜಾನಪದ ಸಮ್ಮೇಳನದ ರೂವಾರಿಗಳಾಗಿದ್ದ ಇವರ ಜೊತೆಗೆ ಜಾನಪದ ಗಾರುಡಿಗ ಕೆ.ಆರ್. ಲಿಂಗಪ್ಪರವರ ಶ್ರಮದಿಂದ ತಂದ ಜಾನಪದ ಅಕರ ಗ್ರಂಥ ” ಹೊನ್ನ ಬಿತ್ತೇವು ಹೊಲಕ್ಕೆಲ್ಲಾ” ಒಂದು ದಾಖಲೆಯಾಗಿದೆ. ನಾಡಿನಲ್ಲಿ ದೊರೆಯಬಹುದಾದ ಎಲ್ಲಾ ಪ್ರಶಸ್ತಿಗಳನ್ನು ಮೂಡಿಗೆರಿಸಿಕೊಂಡಿರುವ ಇವರು ಚಿಕ್ಕಮಗಳೂರು ಜಿಲ್ಲೆಯ ಸಾಹಿತಿಯಾಗಿ ಸಮ್ಮೇಳನದ ಅಧ್ಯಕ್ಷರಾಗಿರುವುದು ಇದೇ ಪ್ರಥಮ ಎಂಬ ದಾಖಲೆ ಕೂಡ ಸಲ್ಲುತ್ತದೆ.

ವಚನ ಸಾಹಿತ್ಯ, ಜಾನಪದ ಸಾಹಿತ್ಯದಲ್ಲಿ ಜೀವಮಾನವನ್ನು ಬೀಸೆಕಲ್ಲಿನಂತೆ ಜೀವನವನ್ನು ಸವೆಸಿರುವ ಇವರು ಅನೇಕ ಗ್ರಂಥಗಳನ್ನು ತಂದಿದ್ದು ಸಾಕ್ಷಿಕಲ್ಲು ಮತ್ತು ಬೆಳ್ಳಕ್ಕಿ ಹಿಂಡು ಬೆದ್ಯರವೋ ಹಾಗೂ ಬೆಂಗಳೂರಿನಿಂದ ಗೊಂಡೇದಹಳ್ಳಿ ಯವರೆಗೆ ಇವರ ಜೀವನ ಕಥನ ಸಾಕ್ಷಿಗುಡ್ಡೆಗಳು.
ರಾಜ್ಯ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾಗಿ ಪರಿಷತ್ ಹಳ್ಳಿ,ಹಳ್ಳಿ,ಮನೆ,ಮನೆ ತಲುಪಿದ್ದು ಕೂಡ ದಾಖಲೆ. 96 ವಯಸ್ಸಿನ ಗೊ,ರು,ಚ ಸಭೆಯಲ್ಲಿ ಮಾತನಾಡಲು ನಿಂತರೆ ಕಂಚಿನ ಕಂಠಕ್ಕೆ ಎಲ್ಲರೂ ತಲೆಬಾಗಿ ಕೈ ಮುಗಿಯುತ್ತಾರೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಯಾರಾಗುತ್ತಾರೆ ಎಂಬ ವಿವಾದಕ್ಕೆ ತೆರೆ ಎಳೆಯಲು ಅರ್ಹ ಸಮರ್ಥ, ಹಿರಿಯ ವಿದ್ವಾಂಸರಾದ ಗೂ,ರು,ಚ ಅಯ್ಕೆ ಸಮರ್ಥವಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕಂಸಾಗರ ಗ್ರಾಮದ ಕೆಂಚಪ್ಪ...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿದೆ ಎಂಬ ಆರೋಪ...

Related Articles

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ...

ವಿಮಾನ ನಿಲ್ದಾಣಕ್ಕಾಗಿ ಜಮೀನ ಸ್ವಾಧೀನಕ್ಕೆ ರೈತರ ವಿರೋಧ

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಪ್ರದೇಶ ಕೃಷಿ ಅವಲಂಬಿತವಾಗಿದ್ದು, ಅತ್ಯಂತ...

ಎತ್ತಿನಭುಜ ಚಾರಣದಕ್ಕೆ ಟ್ರಕ್ಕಿಂಗ್‌ ಬಂದು ಸಮಸ್ಯೆ ಎದುರಿಸುತ್ತಿರುವ ಪ್ರವಾಸಿಗರು

ಮೂಡಿಗೆರೆ : ವಾರಾಂತ್ಯದ ಮಜಾ ಕಳೆಯಲು ಬೆಟ್ಟಗುಡ್ಡಗಳತ್ತ ಮುಖ ಮಾಡಿದ ಚಾರಣಪ್ರಿಯರಿಗೆ ನಿರಾಶೆಯ ಜೊತೆಗೆ ಕಾಡಿನ...

₹1.39 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಅಜ್ಜಂಪುರ: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೀರುವಿನ ಲಾಕರ್‌ನಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು...