Home namma chikmagalur chikamagalur ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಪತ್ತೆ
chikamagalurHomeLatest Newsnamma chikmagalur

ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಪತ್ತೆ

Share
Share

ಚಿಕ್ಕಮಗಳೂರು: ಕಡೂರು ಶಾಸಕರ ಪಿಎ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದ ಸರ್ಕಾರಿ ನೌಕರ ಇಂದು  ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಹವಾಲು ಹೇಳಿಕೊಂಡರು.

ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ಆಪ್ತ ಸಹಾಯಕ (ಪಿಎ) ಸೇರಿದಂತೆ ನಾಲ್ವರಿಂದ ಹಣಕ್ಕಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸಾಂಖ್ಯಿಕ ನಿರೀಕ್ಷಕ ಅಧಿಕಾರಿ ಇಕ್ಸಾಲ್ ಇಂದು ದಿಢೀರ್ ಜಿಲ್ಲಾಧಿಕಾರಿಗಳ ಭೇಟಿ ಮಾಡಿದರು.

ಇಕ್ಸಾಲ್ ಅವರು ಬುಧವಾರವೇ ಚಿಕ್ಕಮಗಳೂರು ನಗರದ ವಿಜಯಪುರದ ಮನೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು.

ಕಡೂರು ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಇಕ್ಸಾಲ್, ಶಾಸಕರ ಪಿಎ ಮಂಜುನಾಥ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ಮತ್ತು ಕಡೂರು ತಹಶೀಲ್ದಾರ್ ಪೂರ್ಣಿಮಾ ಅವರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಈ ನಾಲ್ವರು ಪ್ರತಿ ತಿಂಗಳು ೨೫,೦೦೦ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟು ಸತಾಯಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಇಕ್ಸಾಲ್, ಇದರಿಂದ ಬೇಸತ್ತು ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಡೂರು ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದುಸಂಜೆ ತಮ್ಮ ಕುಟುಂಬದ ಸದಸ್ಯರೊಂದಿಗೆ ಇಕ್ಬಾಲ್ ಜಿಲ್ಲಾಧಿಕಾರಿ ಎಂ.ಎಲ್‌ನಾಗರಾಜ್‌ರವರ ಹತ್ತಿರ ಡೆತ್ ನೋಟ್ ಬರೆದ ಕಾರಣತಿಳಿಸಿದರು. ಅಹವಾಲು ಆಲಿಸಿದ ಜಿಲ್ಲಾಧಿಕಾರಿಗಳು  ಇವತ್ತು ಬಂದಿದ್ದೀಯಾ ಇಷ್ಟು ದಿನ ಯಾಕೆ ಬಂದಿರಲಿಲ್ಲ ವಾರ ರಜೆ ತಗೋ, ಮೈಂಡ್ ಫ್ರೀ ಮಾಡ್ಕೊಂಡ್ ಕೆಲಸಕ್ಕೆ ಹೋಗು ಯಾರು ಏನೇ ಹೇಳಿದ್ರೂ ನಕಲಿ ಕೆಲಸ ಮಾಡಬೇಡ. ತಹಶೀಲ್ದಾರ್ ಜೊತೆ ನಾನು ಮಾತಾಡ್ತೀನಿ, ಡೋಂಟ್ ವರಿ ನಾಳೆಯಿಂದ ಕೆಲಸಕ್ಕೆ ಹೋಗು ಎಂ ಅಭಯ ನೀಡಿದರು. ಕಾಲಿಗೆ ಬೀಳಲು ಹೋದ ಇಕ್ಬಾಲ್‌ರಿಗೆ ಬುದ್ದಿ ಹೇಳಿ ಕಳುಹಿಸಿದರು.

Government employee who went missing after writing a death note found

 

 

Share

Leave a comment

Leave a Reply

Your email address will not be published. Required fields are marked *

Don't Miss

ಬಿಜೆಪಿ ಹೊಸದಾಗಿ ಗಾಂಧೀಜಿ ಬಗ್ಗೆ ಮಾತನಾಡಲು ಹೊರಟಿರುವುದು ಹಾಸ್ಯಾಸ್ಪದ

ಚಿಕ್ಕಮಗಳೂರು: ‘ಗಾಂಧಿ ಹೆಸರಿನಲ್ಲಿ ಕಾಂಗ್ರೆಸ್ಸಿಗರು ನುಂಗಣ್ಣರು’ ಎಂದು ಬಿಜೆಪಿ ನೀಡಿರುವ ಜಾಹೀರಾತು ಮತ್ತು ಟೀಕೆಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಿಕ್ಕಮಗಳೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಹಾತ್ಮ ಗಾಂಧೀಜಿಯವರ...

ಸಂತೆ ಸಮಸ್ಯೆ ಬಗೆಹರಿದಿದ್ದಲ್ಲಿ ವ್ಯಾಪಾರ ನಗರಸಭೆ ಆವರಣಕ್ಕೆ

ಚಿಕ್ಕಮಗಳೂರು:  ಸಂತೆ ಮೈದಾನಕ್ಕೆ ಅವಶ್ಯವಿರುವ ಮೂಲ ಸೌಕರ್ಯವನ್ನು ನಗರಸ ಭೆ ಆಡಳಿತ ಪೂರೈಸಬೇಕು. ನಿರ್ಲಕ್ಷಿಸಿದರೆ ಸಂಪೂರ್ಣ ಸಂತೆ ವ್ಯಾಪಾರವನ್ನು ನಗರಸಭಾ ಆವರಣಕ್ಕೆ ಸ್ಥಳಾಂತರಿಸುತ್ತೇವೆ ಎಂದು ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ರಾಜ್ಯಾಧ್ಯಕ್ಷ...

Related Articles

ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ಮಕ್ಕಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಸಿಬ್ಬಂದಿಗಳು...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರ ಸಾವು

ಚಿಕ್ಕಮಗಳೂರು: ಜಿಲ್ಲೆಯ ಎರಡು ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಯರೇಹಳ್ಳಿ ಗ್ರಾಮದಿಂದ ಧರ್ಮಸ್ದಳಕ್ಕೆ...

ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ.ಎ.ಎಸ್.ಶಂಕರ್ ನಾರಾಯಣ್

ತರೀಕೆರೆ: ತರೀಕೆರೆ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೆಂಗಳೂರು ಆಕಾಶ ವಾಣಿ ಕಾರ್ಯಕ್ರಮ ನಿರ್ದೇಶಕರಾದ ಡಾ.ಎ.ಎಸ್.ಶಂಕರ್...

ಕಾರ್ಮಿಕ ವಿರೋಧಿ ನಡೆ ಖಂಡಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಕಾರ್ಮಿಕ ವಿರೋಧಿ ನಡೆ ಅನುಸರಿಸುತ್ತಿರುವ ಸರ್ಕಾರಗಳ ವಿರುದ್ಧ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಎಐಟಿಯುಸಿ,...