ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಗೆ ಒಳಪಡುವ ಪರಿಸರದಲ್ಲಿ ಮಾನವ ಜೀವಕ್ಕೆ ಅಪಾಯಕಾರಿಯಾಗಿ ತಿರುಗಾಡುತ್ತಿರುವ ಒಂಟಿ ಸಲಗ ಸೇರಿಯಲು ಆದೇಶ ಹೊರಡಿಸಲಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಾರ್ಕಳ ವನ್ಯಜೀವಿ ವ್ಯಾಪ್ತಿಯ ಕೆರೆಕಟ್ಟೆ ವನ್ಯಜೀವಿ ವಲಯದ ಅರಣ್ಯ ಪ್ರದೇಶಗಳಲ್ಲಿ ಒಂಟಿ ಕಾಡಾನೆಯು ಸಂಚರಿಸುತ್ತಿದೆ .
ಕಳೆದ 10ರಿಂದ 15 ವರ್ಷಗಳಿಂದ ಆಗುಂಬೆ, ಕೆರೆಕಟ್ಟೆ ಕುದುರೆಮುಖ ಪ್ರದೇಶಗಳಲ್ಲಿ ಒಂಟಿ ಸಲಗ ಓಡಾಡಿಕೊಂಡು ಹಲವಾರು ಕಡೆಗಳಲ್ಲಿ ದಾಳಿ ಮಾಡಿ ಬೆಳೆಗಳನ್ನು ಹಾಳು ಮಾಡಿದ್ದೆ ಅಲ್ಲದೆ ತುಂಗಭದ್ರಾ ಮೀಸಲು ಅರಣ್ಯದ ಮುಡುಬಾ ಸುತ್ತುಗಟ್ಟಿನ ಇಬ್ಬರು ವ್ಯಕ್ತಿಗಳ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದೆ.
ಕಾಡಾನೆಯನ್ನು ಸೆರೆ ಹಿಡಿಯದಿದ್ದಲ್ಲಿ ಇನ್ನೂ ಇಂತಹ ಘಟನೆಗಳು ಪುನರಾವರ್ತನೆಯಾಗುವ ಸಾಧ್ಯತೆಗಳಿದ್ದು ಸೆರೆ ಹಿಡಿಯುವ ಅತೀ ಅವಶ್ಯಕತೆ ಇದು ಈ ಕಾಡಾನೆ ಸೆರೆ ಹಿಡಿಯಲು ಬೇರೆ ಪಳಗಿದ ಆನೆಗಳ ಸಹಾಯ ಪಡೆಯಬೇಕಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು.
ಕಾಡಾನೆಯನ್ನು ಸೆರೆ ಹಿಡಿಯಲು ಆನೆ ಶಿಬಿರದಿಂದ ಪಳಗಿದ ಆನೆ ಮತ್ತು ಮಾವುತರನ್ನು ನಿಯೋಜಿಸಬೇಕು ಹಾಗೂ ಸೆರೆ ಹಿಡಿದ ಕಾಡಾನೆಯನ್ನು ಯಾವ ಸ್ಥಳಕ್ಕೆ ಬಿಡಬೇಕು ಎಂದು ನಿರ್ದೇಶನ ನೀಡುವಂತೆ ಅವರು ಕೋರಿದ್ದರು ಈ ಹಿನ್ನೆಲೆಯಲ್ಲಿ ಕೆರೆಕಟ್ಟೆ ವನ್ಯಜೀವಿ ವಲಯದಲ್ಲಿ ಎರಡು ಮಾನವ-ಪ್ರಾಣಹಾನಿಗೆ ಕಾರಣವಾದ ಗಂಡಾನೆಯನ್ನು ಸೆರೆಹಿಡಿಯಲು ಆದೇಶ ಹೋರಡಿಸಲಾಗಿದೆ.
ಆನೆ ಗುರುತಿಸಿ ಸೆರೆ ಹಿಡಿದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ದೊಡ್ಡ ಹರವೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ಕಾಡಾನೆಗಳ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ TEAM E ‘ಏಕಲವ್ಯ” ಪ್ರಶಾಂತ, ಧನಂಜಯ, ಹರ್ಷ, ಆನೆಗಳನ್ನು ದೊಡ್ಡ ಹರವೆಯಿಂದ TEAM – B ಯಿಂದ “ಅಜಯ”, ದುಬಾರೆ ಮತ್ತು ಹಾರಂಗಿ ಆನೆ ಶಿಬಿರದಿಂದ ಆನೆಗಳನ್ನು ಬಳಸಿಕೊಂಡು ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಕ್ಷೇತ್ರ ಸಿಬ್ಬಂದಿ ಮತ್ತು ಸ್ಥಳೀಯ ಜನರಿಗೆ ಯಾವುದೇ ಅಪಾಯವಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
ಆನೆ ಸೆರೆಹಿಡಿಯಬೇಕೆಂಬ ಒತ್ತಾಯ ತೀವ್ರವಾಗಿತ್ತಲ್ಲದೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಪಕ್ಷಭೇದ ಮರೆತು ಜನಾಕ್ರೋಶ ವ್ಯಕ್ತವಾಗಿತ್ತು.
Government orders to join at once
Leave a comment