ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಅವರನ್ನು ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಆದೇಶಿಸಿದ್ದು, ಶುಕ್ರವಾರ ಬೆಳಗ್ಗೆ 10.30ಕ್ಕೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತ ನಂತರ ಕಾಂಗ್ರೆಸ್ ಮುಖಂಡ ನಯೋಜ್ ಅವರನ್ನು ಸಿಡಿಎ ಅಧ್ಯಕ್ಷನಾಗಿ ನೇಮಕ ಮಾಡಲಾಗಿತ್. ಇದೀಗ ಮುಂದಿನ ಅವಧಿಗೆ ಮಂಜೇಗೌಡ ಅವರನ್ನು ನೇಮಕ ಮಾಡಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದರು. ಹಲವು ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಜೇಗೌಡ ಅವರನ್ನು ನೇಮಕ ಮಾಡಲಾಗಿದೆ.
ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ಮಂಜೇಗೌಡ ಅವರೊಂದಿಗೆ ಪರಿಶಿಷ್ಟ ವರ್ಗದ ಹಿರೇ ಮಂಗಳೂರಿನ ರಾಮಚಂದ್ರ ಆಕಾಂಕ್ಷಿಯಾಗಿದ್ದರು. ಅಂತಿಮವಾಗಿ ಮಂಜೇಗೌಡರಿಗೆ ಅದೃಷ್ಟ ಲಭಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಪರವಾಗಿ ಈ ಇಬ್ಬರು ನಾಯಕರು ಅವಿರತವಾಗಿ ಶ್ರಮಿಸಿದ್ದರು.
ಈ ಕುರಿತು ಮಾತನಾಡಿರುವ ಎಚ್.ಪಿ. ಮಂಜೇಗೌಡ, ಕಾಂಗ್ರೆಸ್ನಲ್ಲಿ ಇಷ್ಟು ವರ್ಷದ ಸೇವೆ ಪರಿಗಣಿಸಿ ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹಿರೇಮಂಗಳೂರು ರಾಮಚಂದ್ರ ಅವರ ಸೇವೆಯನ್ನು ಪಕ್ಷ ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
H.P. Manjegowda appointed as CDA Chairman
Leave a comment