Home namma chikmagalur chikamagalur ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆ
chikamagalurHomeLatest Newsnamma chikmagalur

ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆ

Share
Share

ಚಿಕ್ಕಮಗಳೂರು :ಕರ್ನಾಟಕ ರೈತ ಸಂಘದ ಚಿಕ್ಕಮಗಳೂರು ತಾಲೂಕು ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆಯಾಗಿದ್ದಾರೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಗುರುವಾರ ಮಾತನಾಡಿ, ರೈತ ಸಂಘದ ತಾಲೂಕು ಸಂಚಾಲಕರಾಗಿದ್ದ ಮತ್ತಾವರದ ಜಯರಾಂ ಅವರ ನೇತೃತ್ವದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಎಂ.ಸಿ.ಬಸವರಾಜ್ ಅವರ ಅಧ್ಯಕ್ಷೆಯಲ್ಲಿ ಸೇರಿದ್ದ ತಾಲೂಕು ರೈತ ಸಂಘದ ಕಾರ್ಯಕರ್ತರು ಮತ್ತು ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ತಾಲೂಕು ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು ಎಂದು ಹೇಳಿದರು.

ರೈತ ಸಂಘದ ತಾಲೂಕು ಕಾರ್ಯಾಧ್ಯಕ್ಷ ಮತ್ತಾವರ ಜಯರಾಂ, ಗೌರವಾಧ್ಯಕ್ಷರಾಗಿ ಆನಂದಕುಮಾರ್, ಮೂರ್ತಿ,ಲಕ್ಕೇಗೌಡ, ಪ್ರಧಾನಕಾರ್ಯದರ್ಶಿಯಾಗಿ ವೆಂಕಟೇಶ್, ಖಜಾಂಚಿಯಾಗಿ ಕೆ.ಟಿ.ಸುನಿಲ್‌ಕುಮಾರ್, ಉಪಾಧ್ಯಕ್ಷಾಗಿ ಪುಟ್ಟೇಗೌಡ, ಜಗದೀಶ್,ಪಾಂಡು, ಸುಂದ್ರೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸಿದ್ದೇಗೌಡ, ಸಹಕಾರ್ಯದರ್ಶಿಯಾಗಿ ಹೇಮಂತ್, ನಾಗೇಶ್, ಬಸವರಾಜ್, ಜಯಣ್ಣ, ಗಿರೀಶ್, ಮಹಿಳಾ ಸಂಚಾಲಕರಾಗಿ ರಾಧಮ್ಮ, ಯುವಘಟಕದ ಅಧ್ಯಕ್ಷರಾಗಿ ಜೀವನ್, ಉಪಾಧ್ಯಕ್ಷರಾಗಿ ಗೋಪಾಲ್, ಚಂದ್ರಶೇಖರ್, ಲೋಕೇಶ್, ಸೇರಿದಂತೆ ೨೦ ಮಂದಿ ಕಾರ್ಯಕರ್ತರು ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ ಎಂದರು.

ಸಂಘಟನೆ ಬೆಳೆಯುತ್ತಾ ಹೋದಂತೆ ಕೆಲವು ಸ್ವಹಿತಾಸಕ್ತಿಗಾಗಿ ಬಂದ ನಾಯಕರು ಕಾರ್ಯಕರ್ತರು ಅವರ ಸ್ವಾರ್ಥ ಸಾಧನೆ ಆಗದೆ ಹೊರನಡೆಯುತ್ತಾರೆ. ಇದರಿಂದ ಸಂಘಟನೆಗೆ ಯಾವುದೇ ನಷ್ಟ ಉಂಟಾಗುವುದಿಲ್ಲ ಹೊಸ ಕಾರ್ಯಕರ್ತರುಗಳು ಸಂಘಟನೆಗೆ ಸೇರ್ಪಡೆಗೊಳ್ಳುತ್ತಾರೆಂದು ಹೇಳಿದರು.

ರೈತ ಸಂಘದ ಜಿಲ್ಲಾಗೌರವಾಧ್ಯಕ್ಷ ಎಂ.ಸಿ.ಬಸವರಾಜ್, ತಾಲೂಕು ಅಧ್ಯಕ್ಷ ಭದ್ರೇಗೌಡ, ಖಜಾಂಚಿ ಸುನಿಲ್‌ಕುಮಾರ್, ಉಪಾಧ್ಯಕ್ಷರಾದ ಆನಂದ್, ನೆರಡಿ ಸುಂದರೇಶ್, ಲಕ್ಕೇಗೌಡ, ಮಹಿಳಾ ಸಂಚಾಲಕಿ ರಾಧಮ್ಮ ಇದ್ದರು.

Hadihalli Bhadregowda elected as the president of the Taluk Farmers’ Association

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...