Home namma chikmagalur chikamagalur ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆ
chikamagalurHomeLatest Newsnamma chikmagalur

ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆ

Share
Share

ಚಿಕ್ಕಮಗಳೂರು :ಕರ್ನಾಟಕ ರೈತ ಸಂಘದ ಚಿಕ್ಕಮಗಳೂರು ತಾಲೂಕು ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆಯಾಗಿದ್ದಾರೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಗುರುವಾರ ಮಾತನಾಡಿ, ರೈತ ಸಂಘದ ತಾಲೂಕು ಸಂಚಾಲಕರಾಗಿದ್ದ ಮತ್ತಾವರದ ಜಯರಾಂ ಅವರ ನೇತೃತ್ವದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಎಂ.ಸಿ.ಬಸವರಾಜ್ ಅವರ ಅಧ್ಯಕ್ಷೆಯಲ್ಲಿ ಸೇರಿದ್ದ ತಾಲೂಕು ರೈತ ಸಂಘದ ಕಾರ್ಯಕರ್ತರು ಮತ್ತು ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ತಾಲೂಕು ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು ಎಂದು ಹೇಳಿದರು.

ರೈತ ಸಂಘದ ತಾಲೂಕು ಕಾರ್ಯಾಧ್ಯಕ್ಷ ಮತ್ತಾವರ ಜಯರಾಂ, ಗೌರವಾಧ್ಯಕ್ಷರಾಗಿ ಆನಂದಕುಮಾರ್, ಮೂರ್ತಿ,ಲಕ್ಕೇಗೌಡ, ಪ್ರಧಾನಕಾರ್ಯದರ್ಶಿಯಾಗಿ ವೆಂಕಟೇಶ್, ಖಜಾಂಚಿಯಾಗಿ ಕೆ.ಟಿ.ಸುನಿಲ್‌ಕುಮಾರ್, ಉಪಾಧ್ಯಕ್ಷಾಗಿ ಪುಟ್ಟೇಗೌಡ, ಜಗದೀಶ್,ಪಾಂಡು, ಸುಂದ್ರೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸಿದ್ದೇಗೌಡ, ಸಹಕಾರ್ಯದರ್ಶಿಯಾಗಿ ಹೇಮಂತ್, ನಾಗೇಶ್, ಬಸವರಾಜ್, ಜಯಣ್ಣ, ಗಿರೀಶ್, ಮಹಿಳಾ ಸಂಚಾಲಕರಾಗಿ ರಾಧಮ್ಮ, ಯುವಘಟಕದ ಅಧ್ಯಕ್ಷರಾಗಿ ಜೀವನ್, ಉಪಾಧ್ಯಕ್ಷರಾಗಿ ಗೋಪಾಲ್, ಚಂದ್ರಶೇಖರ್, ಲೋಕೇಶ್, ಸೇರಿದಂತೆ ೨೦ ಮಂದಿ ಕಾರ್ಯಕರ್ತರು ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ ಎಂದರು.

ಸಂಘಟನೆ ಬೆಳೆಯುತ್ತಾ ಹೋದಂತೆ ಕೆಲವು ಸ್ವಹಿತಾಸಕ್ತಿಗಾಗಿ ಬಂದ ನಾಯಕರು ಕಾರ್ಯಕರ್ತರು ಅವರ ಸ್ವಾರ್ಥ ಸಾಧನೆ ಆಗದೆ ಹೊರನಡೆಯುತ್ತಾರೆ. ಇದರಿಂದ ಸಂಘಟನೆಗೆ ಯಾವುದೇ ನಷ್ಟ ಉಂಟಾಗುವುದಿಲ್ಲ ಹೊಸ ಕಾರ್ಯಕರ್ತರುಗಳು ಸಂಘಟನೆಗೆ ಸೇರ್ಪಡೆಗೊಳ್ಳುತ್ತಾರೆಂದು ಹೇಳಿದರು.

ರೈತ ಸಂಘದ ಜಿಲ್ಲಾಗೌರವಾಧ್ಯಕ್ಷ ಎಂ.ಸಿ.ಬಸವರಾಜ್, ತಾಲೂಕು ಅಧ್ಯಕ್ಷ ಭದ್ರೇಗೌಡ, ಖಜಾಂಚಿ ಸುನಿಲ್‌ಕುಮಾರ್, ಉಪಾಧ್ಯಕ್ಷರಾದ ಆನಂದ್, ನೆರಡಿ ಸುಂದರೇಶ್, ಲಕ್ಕೇಗೌಡ, ಮಹಿಳಾ ಸಂಚಾಲಕಿ ರಾಧಮ್ಮ ಇದ್ದರು.

Hadihalli Bhadregowda elected as the president of the Taluk Farmers’ Association

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಗೆ ಮಂತ್ರಿಯಂತೆ, ಮಂತ್ರಿ ಇಲ್ಲವೇ, ಇಲ್ಲ ಸಾಧ್ಯವಿಲ್ಲ !

ಚಿಕ್ಕಮಗಳೂರು: ಕಳೆದ ಇಪ್ಪತೈದು ವರ್ಷಗಳಿಂದ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿಲ್ಲಾ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಂದಿನ ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ್ ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿಯಾದರೂ ಜಿಲ್ಲೆಯವರಿಗೆ ಮಂತ್ರಿ...

ಸಿದ್ದರಾಮಯ್ಯ ಪರವಾಗಿ ಅಹಿಂದ ಸಂಘಟನೆ ರಾಜ್ಯದಾದ್ಯಂತ ಹೋರಾಟ

ಚಿಕ್ಕಮಗಳೂರು: ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿರುವುದನ್ನು ನಾವು ವಿರೋಧಿಸುತ್ತೇವೆ’ ಎಂದು ಜಿಲ್ಲಾ ಅಹಿಂದ ಘಟಕದ ಅಧ್ಯಕ್ಷ ತ್ರಿಭುವನ್ ಎತ್ತಿನಮನೆ ತಿಳಿಸಿದರು. ಸಿದ್ದರಾಮಯ್ಯ ಅವರನ್ನು ಕೈಬಿಟ್ಟರೆ ರಾಜ್ಯದಲ್ಲಿ ಅಹಿಂದ ವರ್ಗದ ಜನರ...

Related Articles

ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ

ಚಿಕ್ಕಮಗಳೂರು: ಸಂಚಾರಿ ಹೈಕೋರ್ಟ್ ಪೀಠವನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಥಾಪನೆ ಮಾಡುವುದು ಸೂಕ್ತವೆಂದು ವಕೀಲರ ಸಂಘದ ಅಧ್ಯಕ್ಷ...

ಬೀಗ ಹಾಕಿದ್ದ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳ್ಳತನ

ಮೂಡಿಗೆರೆ : ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ನಗದು ಹಣ ಹಾಗೂ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಂಬರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ವಂಚನೆ, ಜಗಳ ಹಾಗೂ...