Home Latest News ಪೊಲೀಸ್ ಸ್ಟೇಷನ್ ನ ಆವರಣದಲ್ಲಿದ್ದ ಕಾರಿನಲ್ಲೇ ಅರ್ಧಕೆಜಿ ಚಿನ್ನಪತ್ತೆ
Latest NewschikamagalurCrime NewsHomenamma chikmagalur

ಪೊಲೀಸ್ ಸ್ಟೇಷನ್ ನ ಆವರಣದಲ್ಲಿದ್ದ ಕಾರಿನಲ್ಲೇ ಅರ್ಧಕೆಜಿ ಚಿನ್ನಪತ್ತೆ

Share
Share

ಚಿಕ್ಕಮಗಳೂರು:  ಕೊಪ್ಪ ತಾಲೂಕು ಹರಂದೂರು ಗ್ರಾಮದಲ್ಲಿರುವ ಮಲೆನಾಡ ಗಾಂಧಿ ಮಾಜಿ ಸಚಿವ ದಿ. ಗೋವಿಂದೇಗೌಡರವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಅಚ್ಚರಿ ಘಟನೆ ನಡೆದಿದೆ. 2 ತಿಂಗಳು ಪೊಲೀಸ್ ಸ್ಟೇಷನ್ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಕಾರಿನಲ್ಲೇ ಅರ್ಧ ಕೆಜಿ ಚಿನ್ನ ಪತ್ತೆಯಾಗಿದೆ.

ಕಳ್ಳತನ ನಡೆಯುವ ಹದಿನೈದು ದಿನದ ಹಿಂದೆಯಷ್ಟೇ ನೇಪಾಳ ಮೂಲದ ಮೂವರು ಗೋವಿಂದೇಗೌಡರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿ ಕೇವಲ ಹದಿನೈದು ದಿನದಲ್ಲಿ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದ ಗ್ಯಾಂಗ್. ಈ ಬಗ್ಗೆ ಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಚುರುಕು ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಾರಾಷ್ಟ್ರದ ಬಳಿ ಎರಡು ಕಾರಿನ ಸಮೇತ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಪೊಲೀಸ್ ಸೀಜ್ ಮಾಡಿದ್ದ ಕಾರುಗಳನ್ನ ಪೊಲೀಸ್ ಠಾಣೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಲಾಗಿತ್ತು. ಇತ್ತು ಆರೋಪಿಗಳ ವಿಚಾರಣೆ ನಡೆಸಿದ್ದ ಪೊಲೀಸರು. ವಿಚಾರಣೆ ವೇಳೆ ಚಿನ್ನ ನಗದು ಹಣ ಇರುವ ಬಗ್ಗೆ ಮೊದಲು ಬಾಯಿಬಿಟ್ಟಿರಲಿಲ್ಲ ಖದೀಮರು. ಪೊಲೀಸರು ತೀವ್ರ ವಿಚಾರಣೆ ಬಳಿಕ ಕಾರಿನಲ್ಲಿರುವ ಬಗ್ಗೆ ಆರೋಪಿಗಳು ಬಾಯಿಬಿಟ್ಟಿದ್ದಾರೆ.

ಎರಡು ತಿಂಗಳ ಕಾಂಪೌಂಡ್ ಒಳಗೆ ನಿಂತಿದ್ದ ಕಾರಿನಲ್ಲೇ ಚಿನ್ನಾಭರಣ, ಹಣ ಇಟ್ಟಿರುವುದಾಗಿ ಒಪ್ಪಿಕೊಂಡ ಖದೀಮರು, ಪೊಲೀಸರು ಕಾರು ಪರಿಶೀಲನೆ ನಡೆಸಿದಾಗ ಕಾರಿನ ಸ್ಟೆಪ್ಪಿ ಜಾಗದಲ್ಲಿ 600 ಗ್ರಾಂ ಚಿನ್ನ, 600 ಗ್ರಾಂ ಬೆಳ್ಳಿ, 3 ಲಕ್ಷ 41 ಸಾವಿರ ರೂಪಾಯಿಯ ದುಡ್ಡಿನ ಚೀಲ ಪತ್ತೆಯಾಗಿದೆ.

ಈ ಪ್ರಕರಣದಿಂದಾಗಿ ಮಲೆನಾಡ ಪ್ರದೇಶದಲ್ಲಿ ಆಘಾತ ಮೂಡಿಸಿದೆ. ಮನೆ ಕೆಲಸದವರ ಹಿನ್ನೆಲೆ ಪರಿಶೀಲಿಸದೆ ಕೆಲಸಕ್ಕೆ ಸೇರಿಸಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಈ ಪ್ರಕರಣ ತಾಜಾ ನಿದರ್ಶನವಾಗಿದೆ.

Half a kg of gold found in a car in the police station premises

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...