Home namma chikmagalur chikamagalur ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ
chikamagalurHomeLatest Newsnamma chikmagalur

ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ

Share
Share

ಕೊಟ್ಟಿಗೆಹಾರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ವಿ ಅವರ ೮೮ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕರ್ವಾಲೊ ಕೃತಿ ಆಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ಮೈಸೂರಿನ ಹರ್ಷ ಕಾವೇರಿಪುರ ಪ್ರಥಮ ಸ್ಥಾನ ಪಡೆದಿದ್ದಾರೆ.

ನರಸಿಂಹರಾಜಪುರದ ನಿತೇಶ್ ವಿ ದ್ವಿತೀಯ, ಚಿತ್ರದುರ್ಗದ ಮನೋಹರ ಟಿ.ಎನ್ ತೃತೀಯ ಸ್ಥಾನ ಪಡೆದಿದ್ದು ಬೆಂಗಳೂರಿನ ನಾಗನಾಥ್ ಜಿ.ಎಸ್, ರಘುಪತಿ ಶೃಂಗೇರಿ, ಚಿಕ್ಕಮಗಳೂರಿನ ಪೆಟ್ರೇಷಿಯಾ, ಮೂಡಿಗೆರೆಯ ಪರಥ್ವಿಕ್ ಹುಲ್ಲೆಮನೆ, ತೀರ್ಥಹಳ್ಳಿಯ ಭರತ್ ಶೇಡ್ಗಾರ್, ದಕ್ಷಿಣ ಕನ್ನಡದ ಪ್ರಶಾಂತ್ ಕೆ, ಬೆಂಗಳೂರಿನ ಅನುಷಾ ಹೆಗಡೆ ಪೋತ್ಸಾಹಕ ಬಹುಮಾನ ಪಡೆದಿದ್ದಾರೆ.

ಸ್ಪರ್ಧೆಯ ತೀರ್ಪುಗಾರರಾದ ಕಲಾವಿದ, ವಿಶ್ವಕರ್ಮ ಆಚಾರ್ಯ ಮಾತನಾಡಿ, ನವಮಾಧ್ಯಮ ಮತ್ತು ಹಾಗೂ ಸಾಂಪ್ರದಾಯಿಕ ಕಲೆ ಎರಡಕ್ಕೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಸ್ಪರ್ಧೆಗೆ ಒಟ್ಟು ೧೯೮ ಕಲಾಕೃತಿಗಳು ಸ್ಪರ್ಧೆಗೆ ಬಂದಿದ್ದವು ಎಂದರು.

ಸ್ಪರ್ಧೆಯ ತೀರ್ಪುಗಾರರಾದ ಕಲಾವಿದ, ಸುರೇಶ್ ಚಂದ್ರ ದತ್ತ ಮಾತನಾಡಿ, ತೇಜಸ್ವಿ ಅವರ ಜನಪ್ರಿಯ ಕಾದಂಬರಿ ಕರ್ವಾಲೊ ಕೃತಿಯನ್ನು ಓದಿ ಕೃತಿಯಲ್ಲಿನ ದೃಶ್ಯ, ಪಾತ್ರ, ಸನ್ನಿವೇಶವನ್ನು ಚಿತ್ರವಾಗಿಸಿ ಸ್ಪರ್ಧೆಗೆ ಕಳಿಸಿದ್ದರು. ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಸ್ಪರ್ಧೆಯ ತೀರ್ಪುಗಾರರಾದ ಕಲಾವಿದ, ಬಾಪುದಿನೇಶ್ ಮಾತನಾಡಿ, ಹವ್ಯಾಸಿ ಮತ್ತು ವೃತ್ತಿಪರ ಕಲಾವಿದರು ಈ ಸ್ಪರ್ಧೆಯ ಭಾಗವಾಗಿರುವುದು ವಿಶೇಷ. ಸ್ಪರ್ಧೆಗೆ ಚಿತ್ರ ರಚಿಸುವ ಕಾರಣಕ್ಕಾಗಿ ಕರ್ವಾಲೊ ಕಾದಂಬರಿಯನ್ನು ಓದಿ ಹಲವರು ಚಿತ್ರವನ್ನು ಕಳಿಸಿದ್ದಾರೆ. ಕಲೆ ಮತ್ತು ಸಾಹಿತ್ಯದ ಅನುಸಂಧಾನ ಈ ಚಿತ್ರಕಲಾ ಸ್ಪರ್ಧೆಯಿಂದ ಸಾಧ್ಯವಾಗಿದೆ ಎಂದರು.

Harsha Kaveripur wins first place in Carvalho painting competition

 

Share

Leave a comment

Leave a Reply

Your email address will not be published. Required fields are marked *

Don't Miss

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ನಗರದಲ್ಲಿ ಸೋಮವಾರ ಟಿಪ್ಪು...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಯನ್ನು ಎನ್.ಆ‌ರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ...

Related Articles

ಜನರ ಗಮನ ಸೆಳೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ

ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ...

ತುಂಗಾನದಿಯಲ್ಲಿ ಕಾಲು ಜಾರಿ ಬಿದ್ದು ಪ್ರಾಣ ಯವಕನ ಸಾವು

ಶೃಂಗೇರಿ : ನದಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರಹಿಡಿಯಲು ಹೋದ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು...

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ...