Home namma chikmagalur chikamagalur ಬಿದ್ರಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಕಸದ ರಾಶಿ
chikamagalurHomeLatest Newsnamma chikmagalur

ಬಿದ್ರಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಕಸದ ರಾಶಿ

Share
Share
ಕೊಟ್ಟಿಗೆಹಾರ : ಧರ್ಮಸ್ಥಳ–ಹೋರನಾಡು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಸದ ರಾಶಿಗಳು ಗುಡ್ಡಗಟ್ಟಿರುವ ದುಸ್ಥಿತಿ ಬೆಳಕಿಗೆ ಬಂದಿದೆ. ಬಿದ್ರಹಳ್ಳಿ ಕೆಎಸ್‌ಆರ್‌ಟಿಸಿ ಡಿಪೋ ಎದುರು ಹಾಗೂ ಮೂಡಿಗೆರೆಯ ಹ್ಯಾಂಡ್‌ಪೋಸ್ಟ್ ಸಮೀಪ ಕೃಷಿ ಸಂಶೋಧನಾ ಕೇಂದ್ರ ಮತ್ತು ಆರ್ಟಿಕಲ್ಚರ್ ಕಾಲೇಜು ಪ್ರದೇಶದಲ್ಲಿ ಅಕ್ರಮವಾಗಿ ಕಸ ಹಾಕಲಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಮಾರ್ಗವು ಪ್ರವಾಸೋದ್ಯಮದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿದ್ದು, ಪ್ರತಿದಿನ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ಸಂಚರಿಸುತ್ತಾರೆ. ಆದರೆ ರಸ್ತೆ ಪಕ್ಕದಲ್ಲೇ ಕಸದ ದುರ್ವಾಸನೆ ಹರಡುವುದರಿಂದ ಪ್ರಯಾಣಿಕರು ಮೂಗಿಗೆ ರುಮಾಲು ಹಿಡಿದು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳೀಯರ ಹೇಳಿಕೆಯ ಪ್ರಕಾರ, ಕಸದ ಸಂಗ್ರಹಣೆ ವ್ಯವಸ್ಥೆ ಇದ್ದರೂ, ಕೆಲವರು ತಮ್ಮ ಮನೆಯ ಕಸವನ್ನು ಸರಿಯಾಗಿ ನೀಡದೇ ರಾತ್ರಿ ವೇಳೆ ರಸ್ತೆ ಪಕ್ಕಕ್ಕೆ ತಂದು ಬಿಸಾಡುತ್ತಿರುವುದು ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಮನೆ ಸ್ವಚ್ಛತೆಯನ್ನು ಹೇಗೆ ಕಾಪಾಡುತ್ತೇವೋ ಅದೇ ರೀತಿಯಲ್ಲಿ ನಮ್ಮ ಊರಿನ ಸ್ವಚ್ಛತೆಯನ್ನೂ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂಬುದನ್ನು ಸ್ಥಳೀಯರು ಅರಿತುಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಗ್ರಾಮದ ಸ್ವಚ್ಛತೆ ಕಾಪಾಡುವುದು ಕೇವಲ ಆಡಳಿತದ ಹೊಣೆಗಾರಿಕೆ ಮಾತ್ರವಲ್ಲ, ಅದು ಸ್ಥಳೀಯರ ಸಹಭಾಗಿತ್ವದಿಂದಲೇ ಸಾಧ್ಯ. ಆದರೆ ಕೆಲವರ ನಿರ್ಲಕ್ಷ್ಯದಿಂದ ಗ್ರಾಮದೆಲ್ಲೆಡೆ ಕಸದ ರಾಶಿಗಳು ಕಾಣಿಸಿಕೊಳ್ಳುತ್ತಿದ್ದು, ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಮಳೆಗಾಲದಲ್ಲಿ ಈ ಕಸ ಇನ್ನಷ್ಟು ಹರಡಿ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುವ ಭೀತಿ ಇದೆ.
ಕೃಷಿ ಸಂಶೋಧನಾ ಕೇಂದ್ರ ಹಾಗೂ ಆರ್ಟಿಕಲ್ಚರ್ ಕಾಲೇಜು ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಇಂತಹ ಅಸ್ವಚ್ಛತೆ ಕಂಡುಬರುವುದು ವಿಷಾದನೀಯ ಸಂಗತಿಯಾಗಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೂ ಇದರಿಂದ ತೊಂದರೆ ಉಂಟಾಗಿದೆ.
Heap of garbage beside Bidrahalli National Highway
Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...