Home namma chikmagalur chikamagalur ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ
chikamagalurHomeLatest Newsnamma chikmagalur

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

Share
Share

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ವರುಣ, ಈಗ ತಡವಾಗಿ ಅಬ್ಬರಿಸಲು ಶುರು ಮಾಡಿದ್ದಾನೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್ ಹಾಗೂ ಚಾರ್ಮಾಡಿ ಘಾಟ್ ತಪ್ಪಲು ಪ್ರದೇಶಗಳಲ್ಲಿ ನಿನ್ನೆ ಮಧ್ಯಾಹ್ನದಿಂದ ಬೆಳಗ್ಗಿನವರೆಗೂ ಎಡೆಬಿಡದೆ ಸುರಿಯುತ್ತಿರುವ ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ವಿಶೇಷವಾಗಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ದಟ್ಟ ಮಂಜು ಕವಿದಿದ್ದು, ವಾಹನ ಸವಾರರಿಗೆ ರಸ್ತೆ ಗೋಚರತೆ ಕಡಿಮೆಯಾಗಿದೆ. ಇನ್ನು ಜೋರಾದ ಗಾಳಿಯೊಂದಿಗೆ ಸುರಿಯುತ್ತಿರುವ ಮಳೆಯಿಂದಾಗಿ ಮಲೆನಾಡಿನ ಹಲವಾರು ಕುಗ್ರಾಮಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಕತ್ತಲಲ್ಲಿ ಮುಳುಗಿವೆ. ತಡವಾಗಿ ಆರಂಭವಾಗಿರುವ ಈ ಮಳೆಯ ಅಬ್ಬರ ಇನ್ಯಾವ ರೀತಿಯ ಅನಾಹುತಗಳನ್ನು ಸೃಷ್ಟಿಸುತ್ತದೋ ಎಂಬ ಆತಂಕ ಈಗ ಮಲೆನಾಡಿಗರನ್ನು ಕಾಡಲಾರಂಭಿಸಿದೆ.

ಈ ನಡುವೆಯೂ, ಮಲೆನಾಡಿನ ಪ್ರಕೃತಿ ಸೌಂದರ್ಯಕ್ಕೆ ಈ ಮಳೆ ಹೊಸ ಕಳೆ ತಂದಿದೆ. ಭಾರೀ ಮಳೆಗೆ ಮಲೆನಾಡಿನ ಹಳ್ಳ-ಕೊಳ್ಳಗಳು ಮೈದುಂಬಿ ಉಕ್ಕಿ ಹರಿಯುತ್ತಿದ್ದು, ಮೂಡಿಗೆರೆ ತಾಲೂಕಿನ ಕೋಗಿಲೆ ಗ್ರಾಮದ ‘ಹಬ್ಬಿ ಹಳ್ಳ’ ಭೋರ್ಗರೆಯುತ್ತಾ ಹರಿಯುತ್ತಿರುವ ದೃಶ್ಯ ನಯನ ಮನೋಹರವಾಗಿದೆ.

Heavy rain in the Malnad region of the coffee country

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...