Home namma chikmagalur ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ
namma chikmagalurchikamagalurHomeLatest News

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ

Share
Share

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಕುದುರೆಮುಖ, ಮುಳ್ಳಯ್ಯನ ಗಿರಿ, ಕಳಸ, ಹೊರನಾಡು, ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಮೂಡಿಗೆರೆ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಆಲ್ದೂರು ಸುತ್ತಮುತ್ತ ಮಳೆಯಾಗುತ್ತಿದೆ. ಶನಿವಾರವೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಳ್ಳಯ್ಯನಗಿರಿ ಭಾಗದಲ್ಲಿ ಜೋರು ಗಾಳಿ ಮತ್ತು ಮಳೆ ಸುರಿಯುತ್ತಿದೆ. ಇದರ ನಡುವೆಯೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ನರಸಿಂಹರಾಜಪುರ ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿಯಿಂದ ನಿರಂತರ ಮಳೆ ಸುರಿದಿದ್ದು, ಶುಕ್ರವಾರವೂ ಮಳೆ ಮುಂದುವರಿದಿದೆ.

ಭಾರಿ ಗಾಳಿ– ಮಳೆಗೆ ತಾಲ್ಲೂಕಿನ ಕಾನೂರು ಗ್ರಾಮದ ಎಂ.ಸಿ. ಸತೀಶ ಎಂಬುವರ ಮನೆ ಮೇಲೆ ಮರ ಬಿದ್ದು, ಚಾವಣಿ ಹಾಗೂ ಗೋಡೆಗೆ ಹಾನಿ ಉಂಟಾಗಿದೆ. ಗುರುವಾರದಿಂದ ಶುಕ್ರವಾರ ಬೆಳಿಗ್ಗೆವರೆಗೆ ನರಸಿಂಹರಾಜಪುರದಲ್ಲಿ 3.72 ಸೆಂ.ಮೀ, ಬಾಳೆಹೊನ್ನೂರಿನಲ್ಲಿ 3.74 ಸೆಂ.ಮೀ ಹಾಗೂ ಮೇಗರಮಕ್ಕಿಯಲ್ಲಿ 3.40 ಸೆಂ.ಮೀ ಮಳೆಯಾಗಿತ್ತು.

ತುಂಗಾ ನದಿ ನೀರಿನ ಮಟ್ಟ ಏರಿಕೆ: ಶೃಂಗೇರಿ ತಾಲ್ಲೂಕಿನಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದ್ದು, ತುಂಗಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ತಾಲ್ಲೂಕಿನಲ್ಲಿ ಕಿಗ್ಗಾ 10.8 ಸೆಂ.ಮೀ., ಕೆರೆಕಟ್ಟೆ 10.14 ಸೆಂ.ಮೀ, ಶೃಂಗೇರಿ 7.02 ಸೆಂ.ಮೀ ಮಳೆಯಾಗಿದೆ.

ಮಳೆಯಿಂದ ಅಡ್ಡಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳುವೆಬೈಲಿನ ಮತಗಟ್ಟೆಯಾದ ಮುಚ್ಚಿದ ಶಾಲೆಯ ಗೋಡೆ ಕುಸಿದು ಬಿದ್ದಿದೆ. ಭತ್ತದ ಗದ್ದೆಗಳಲ್ಲಿ ನೀರು ನಿಂತಿರುವುದರಿಂದ ಸಸಿಮುಡಿ ಮಾಡಲು ತೊಂದರೆಯಾಗಿದೆ. ಮೂಡಿಗೆರೆ ತಾಲ್ಲೂಕಿನಾದ್ಯಂತ ಶುಕ್ರವಾರ ಧಾರಾಕಾರ ಮಳೆಯಾಗಿದೆ.

ನಸುಕಿನಿಂದಲೂ ಆರ್ಭಟಿಸಿದ್ದ ಮಳೆ, ಇಡೀ ದಿನ ಬಿಡುವಿಲ್ಲದೆ ಸುರಿಯಿತು. ಕೆಲವೆಡೆ ಹಾನಿ ಉಂಟಾಗಿದೆ. ಮೂಲರಹಳ್ಳಿ, ಗುತ್ತಿ, ಹೊಸ್ಕೆರೆ, ಕೊಟ್ಟಿಗೆಹಾರ, ಮೇಕನಗದ್ದೆ, ದೇವರುಂದ ಸೇರಿದಂತೆ ಬಹುತೇಕ ಕಡೆ ಗಾಳಿ ಸಹಿತ ಮಳೆಯಾಗಿದ್ದು, ಮರಗಳು ಧರೆಗುರುಳಿ ಸಂಚಾರಕ್ಕೆ ಅಡ್ಡಿಯಾಗಿದೆ. ವಿದ್ಯುತ್‌ ಕಂಬಗಳು ಧರೆಗುರುಳಿದ್ದರಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಪೂರೈಕೆಗೆ ಅಡ್ಡಿಯಾಗಿದೆ.

ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಹೇಮಾವತಿ ಸೇರಿದಂತೆ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಜಿ.ಹೊಸಳ್ಳಿ, ಮುಗ್ರಹಳ್ಳಿ, ಸಬ್ಬೇನಹಳ್ಳಿ, ಫಲ್ಗುಣಿ ಭಾಗಗಳಲ್ಲಿ ನಾಟಿಗಾಗಿ ಸಿದ್ಧಪಡಿಸಿದ್ದ ಸಸಿ ಮಡಿಗಳು ನೀರಿನಲ್ಲಿ ಕೊಚ್ಚಿಹೋಗಿ ನಷ್ಟವಾಗಿದೆ. ಮಳೆಯಿಂದ ವಾರದ ಸಂತೆಗೂ ಗ್ರಾಹಕರು ಬರದೇ ವರ್ತಕರು ನಷ್ಟ ಅನುಭವಿಸುವಂತಾಯಿತು.

ಮಳೆಯೊಂದಿಗೆ ಚಳಿಯೂ ಹೆಚ್ಚಾಗಿದ್ದರಿಂದ ಜನರು ಮನೆಯಿಂದ ಹೊರಗೆ ಬರದೆ ಪಟ್ಟಣದಲ್ಲಿ ಇಡೀ ದಿನ ಜನರಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಮಳೆ ಹೆಚ್ಚಾಗಿದ್ದರಿಂದ ಬಹುತೇಕ ಕಾಫಿ ತೋಟಗಳಲ್ಲಿ ಕೃಷಿ ಚಟುವಟಿಕೆಗಳು ನಡೆಯದೆ ಕಾರ್ಮಿಕರಿಗೆ ರಜೆ ಘೋಷಿಸಲಾಗಿತ್ತು.

ಶಾಲೆ, ಅಂಗನವಾಡಿಗಳಿಗೆ ರಜೆ:  ಜಿಲ್ಲೆಯ ಮಲೆನಾಡು ಭಾಗದ ಐದು ತಾಲ್ಲೂಕುಗಳು ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಐದು ಹೋಬಳಿಗಳ ಅಂಗನವಾಡಿ, ಶಿಶುಪಾಲನಾ ಕೇಂದ್ರ ಮತ್ತು ಶಾಲೆಗಳಿಗೆ ಶನಿವಾರ(ಜು.26) ರಜೆ ಘೋಷಿಸಲಾಗಿದೆ.

ಎನ್.ಆರ್.ಪುರ, ಕೊಪ್ಪ, ಮೂಡಿಗೆರೆ, ಶೃಂಗೇರಿ, ಕಳಸ ತಾಲ್ಲೂಕಿನ ವ್ಯಾಪ್ತಿ ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಆವತಿ, ಜಾಗರ, ವಸ್ತಾರೆ, ಆಲ್ದೂರು ಮತ್ತು ಖಾಂಡ್ಯ ಹೋಬಳಿಗೆ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.

Heavy rain in the Malnad region of the district
Share

Leave a comment

Leave a Reply

Your email address will not be published. Required fields are marked *

Don't Miss

ಧಾರಾಕಾರ ಮಳೆ ನಡುವೆ ಗಿರಿಪ್ರದೇಶಕ್ಕೆ ಪ್ರವಾಸಿಗರ ಧಾಂಗುಡಿ

ಚಿಕ್ಕಮಗಳೂರು: ನಗರ ಸಮೀಪದ ಗಿರಿಪ್ರದೇಶದಲ್ಲಿ ಧಾರಾಕಾರ ಮಳೆಸುರಿಯುತ್ತಿದ್ದು, ಇದರ ನಡುವೆಯೇ ಗಿರಿಭಾಗಕ್ಕೆ ಭಾರೀ ಪ್ರವಾಸಿಗರ ದಂಡು ಭೇಟಿಕೊಟ್ಟಿದೆ. ಕಾರು, ಬೈಕ್, ಟಿಟಿ ಸೇರಿದಂತೆ ೧೮೫೦ ವಾಹನಗಳು ಗಿರಿಭಾಗಕ್ಕೆ ಪ್ರವಾಸಿಗರನ್ನು ಕರೆದೊಯ್ದಿದೆ. ಭಾರೀ...

ಮೈಮೆಲೆ ಬಿಸಿನೀರು ಬಿದ್ದು ಹೆಣ್ಣುಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲಾಮಕ್ಕಳ ಘಟಕದ ದತ್ತು ಸಂಸ್ಥೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗುವಿಗೆ ಸುಟ್ಟಗಾಯವಾಗಿದ್ದು ಇದರಿಂದ ಹೆಣ್ಣುಮಗು ನರಳುವಂತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಗಾಂಧಿನಗರದಲ್ಲಿರುವ ದತ್ತು...

Related Articles

ವಸೂಲಿವೀರ ಅದಕ್ಷ ಡಿ.ಡಿ.ಪಿ.ಐ ಪುಟ್ಟರಾಜುಗೆ ಕಡ್ಡಾಯ ರಜೆ

ಚಿಕ್ಕಮಗಳೂರು; ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಅಧಿಕಾರಿ ಪುಟ್ಟರಾಜು ಕಡ್ಡಾಯ ರಜೆ ಮೇಲೆ...

ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ

ಮೂಡಿಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡಬಿಡದೆ ಮಳೆ ಬರುತ್ತಿದ್ದು ಅನಾಹುತದ ಸಂಭವಿಸಿ ಹಲವರು ಪ್ರಾಣ...

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು)...

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್...