Home Latest News ಬಿರುಗಾಳಿ ಮಳೆಗೆ ದತ್ತಪೀಠ ಹೋಮದ ಶೆಟ್ ಚಾವಣೆ ಹಾರಿ ಹೋಗಿ ಅವಘಡ
Latest News

ಬಿರುಗಾಳಿ ಮಳೆಗೆ ದತ್ತಪೀಠ ಹೋಮದ ಶೆಟ್ ಚಾವಣೆ ಹಾರಿ ಹೋಗಿ ಅವಘಡ

Share
Share

ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಯಲ್ಲಿ ಗುರುವಾರದಿಂದ ಶನಿವಾರದವರೆಗೆ ನಡೆಯಲಿರುವ ದತ್ತ ಜಯಂತಿಗೆ ಹವಾಮಾನ ವೈಫರೀತ್ಯಾ ಭಾರೀ ಅಡ್ಡಿಮಾಡಿದೆ.

ಗುರುವಾರದಿಂದ ಗಿರೀಭಾಗದಲ್ಲಿ ದಟ್ಟ ಮಂಜು ಹಾಗೂ ಸಾಧಾರಣ ಮಳೆ ಆಗುತ್ತಿದ್ದು ಇದು ದತ್ತ ಜಯಂತಿ ಧಾರ್ಮಿಕ ಆಚರಣೆಗಳಿಗೆ ಅಡಚಣೆ ಮಾಡಿದೆ. ಶುಕ್ರವಾರ ಬಾಬಾಬುಡನ್ ದರ್ಗಾ ಹಾಗೂ ಸುತ್ತಮುತ್ತ ಭಾರಿ ಗಾಳಿ ಹಾಗೂ ಸಾಧಾರಣ ಮಳೆ ಆಗಿದ್ದು, ಗಾಳಿಗೆ ದತ್ತ ಪೀಠದಲ್ಲಿ ಪೂಜೆ ಹೋಮ ಹವನ ನಡೆಸಲು ಹಾಕಿದ್ದ ಶಾಮಿಯಾನ ಮತ್ತು ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಜೊತೆಗೆ ಮೋಡ ಕವಿದ ವಾತಾವರಣ ಹಾಗೂ ಕೊರೆಯುವ ಚಳಿ ಮಳೆ ಪರಿಣಾಮ ಗಿರಿಯಲ್ಲಿ ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಪೊಲೀಸರು ಹೋಮ್ ಗಾರ್ಡ್ ಗಳು ಮತ್ತಿತರರ ಬೇರೆ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಸಿಬ್ಬಂದಿ ಕೆಲಸ ಮಾಡಲು ಪರದಾಡುತಿದ್ದಾರೆ.
ಗಿರಿಯಲ್ಲಿ ಭಾರೀ ಚಳಿ ಇದ್ದು ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ನಡುಗುತ್ತಾ ಕೆಲಸ ಮಾಡುವಂತಾಗಿದ್ದು ಭಾರೀ ಚಳಿ ಕಾರಣ ಪೊಲೀಸ್ ಭದ್ರತಾ ಸಿಬ್ಬಂದಿ ಆರೋಗ್ಯದ ಮೇಲೂ ಗಂಭೀರ ಪರಿಣಾಮ ವುಂಟುಮಾಡುವ ಸಮಸ್ಯೆ ಎದುರಾಗಿದೆ.
ಅಲ್ಲದೆ, ಗಿರಿ ತಲುಪುವ ರಸ್ತೆಯಲ್ಲಿ ದಟ್ಟ ಮಂಜು ಆವರಿಸಿದ್ದು ವಾಹನಗಳ ಸಂಚಾರಕ್ಕೆ ತೊಂದರೆ ಆಗಿದ್ದು ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಜೊತೆಗೆ ನಾಳೆ ಕೂಡ ದತ್ತ ಜಯಂತಿ ಕೊನೆ ದಿನವಾಗಿದೆ, ಮತ್ತಷ್ಟು ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...