Home Latest News ಬಿರುಗಾಳಿ ಮಳೆಗೆ ದತ್ತಪೀಠ ಹೋಮದ ಶೆಟ್ ಚಾವಣೆ ಹಾರಿ ಹೋಗಿ ಅವಘಡ
Latest News

ಬಿರುಗಾಳಿ ಮಳೆಗೆ ದತ್ತಪೀಠ ಹೋಮದ ಶೆಟ್ ಚಾವಣೆ ಹಾರಿ ಹೋಗಿ ಅವಘಡ

Share
Share

ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಯಲ್ಲಿ ಗುರುವಾರದಿಂದ ಶನಿವಾರದವರೆಗೆ ನಡೆಯಲಿರುವ ದತ್ತ ಜಯಂತಿಗೆ ಹವಾಮಾನ ವೈಫರೀತ್ಯಾ ಭಾರೀ ಅಡ್ಡಿಮಾಡಿದೆ.

ಗುರುವಾರದಿಂದ ಗಿರೀಭಾಗದಲ್ಲಿ ದಟ್ಟ ಮಂಜು ಹಾಗೂ ಸಾಧಾರಣ ಮಳೆ ಆಗುತ್ತಿದ್ದು ಇದು ದತ್ತ ಜಯಂತಿ ಧಾರ್ಮಿಕ ಆಚರಣೆಗಳಿಗೆ ಅಡಚಣೆ ಮಾಡಿದೆ. ಶುಕ್ರವಾರ ಬಾಬಾಬುಡನ್ ದರ್ಗಾ ಹಾಗೂ ಸುತ್ತಮುತ್ತ ಭಾರಿ ಗಾಳಿ ಹಾಗೂ ಸಾಧಾರಣ ಮಳೆ ಆಗಿದ್ದು, ಗಾಳಿಗೆ ದತ್ತ ಪೀಠದಲ್ಲಿ ಪೂಜೆ ಹೋಮ ಹವನ ನಡೆಸಲು ಹಾಕಿದ್ದ ಶಾಮಿಯಾನ ಮತ್ತು ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಜೊತೆಗೆ ಮೋಡ ಕವಿದ ವಾತಾವರಣ ಹಾಗೂ ಕೊರೆಯುವ ಚಳಿ ಮಳೆ ಪರಿಣಾಮ ಗಿರಿಯಲ್ಲಿ ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಪೊಲೀಸರು ಹೋಮ್ ಗಾರ್ಡ್ ಗಳು ಮತ್ತಿತರರ ಬೇರೆ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಸಿಬ್ಬಂದಿ ಕೆಲಸ ಮಾಡಲು ಪರದಾಡುತಿದ್ದಾರೆ.
ಗಿರಿಯಲ್ಲಿ ಭಾರೀ ಚಳಿ ಇದ್ದು ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ನಡುಗುತ್ತಾ ಕೆಲಸ ಮಾಡುವಂತಾಗಿದ್ದು ಭಾರೀ ಚಳಿ ಕಾರಣ ಪೊಲೀಸ್ ಭದ್ರತಾ ಸಿಬ್ಬಂದಿ ಆರೋಗ್ಯದ ಮೇಲೂ ಗಂಭೀರ ಪರಿಣಾಮ ವುಂಟುಮಾಡುವ ಸಮಸ್ಯೆ ಎದುರಾಗಿದೆ.
ಅಲ್ಲದೆ, ಗಿರಿ ತಲುಪುವ ರಸ್ತೆಯಲ್ಲಿ ದಟ್ಟ ಮಂಜು ಆವರಿಸಿದ್ದು ವಾಹನಗಳ ಸಂಚಾರಕ್ಕೆ ತೊಂದರೆ ಆಗಿದ್ದು ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಜೊತೆಗೆ ನಾಳೆ ಕೂಡ ದತ್ತ ಜಯಂತಿ ಕೊನೆ ದಿನವಾಗಿದೆ, ಮತ್ತಷ್ಟು ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...