Home Latest News ಜಾತಿ ಸಮೀಕ್ಷೆಯಲ್ಲಿ ಉಪಜಾತಿ ನಮೂದಿಸಲು ಸಹಕರಿಸಿ
Latest NewschikamagalurHomenamma chikmagalur

ಜಾತಿ ಸಮೀಕ್ಷೆಯಲ್ಲಿ ಉಪಜಾತಿ ನಮೂದಿಸಲು ಸಹಕರಿಸಿ

Share
Share

ಚಿಕ್ಕಮಗಳೂರು: ಜಾತಿ ಸಮೀಕ್ಷೆಗೆ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಪ.ಜಾ ಸಮುದಾಯದವರು ತಮ್ಮ ಜಾತಿ-ಉಪಜಾತಿಯನ್ನು ಸಮೀಕ್ಷೆ ಕಾಲಂನಲ್ಲಿ ಕಡ್ಡಾಯವಾಗಿ ನಮೂದಿಸಲು ಸಹಕರಿಸಿದಾಗ ಜಾತಿ ಸಮೀಕ್ಷೆ ಕಾರ್ಯ ಪರಿಪೂರ್ಣವಾಗುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್ ಮನವಿ ಮಾಡಿದರು.

ಅವರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗೌರವಾನ್ವಿತ ನ್ಯಾಯಮೂರ್ತಿ ಡಾ. ಹೆಚ್.ಎನ್ ನಾಗಮೋಹನ್‌ದಾಸ್ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ೨೦೨೫ ರ ತಾಲ್ಲೂಕು ಮಟ್ಟದ ಜಾತಿ ಸಮೀಕ್ಷೆಯ ಕುರಿತು ಮಾಹಿತಿ ಸಂಗ್ರಹಣೆಯ ತಾಲ್ಲೂಕು ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಮೀಕ್ಷೆಯಲ್ಲಿ ಪರಿಶಿಷ್ಟ ಜನಾಂಗದವರು ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ ಹೊಂದಿರುವ ಸೌಲಭ್ಯಗಳು ಇನ್ನೂ ಮುಂತಾದ ಅಗತ್ಯ ಸಾಮಾನ್ಯ ಮಾಹಿತಿಗಳನ್ನು ಜಾತಿ ಗಣತಿದಾರರಿಗೆ ನೀಡಬೇಕೆಂದು ವಿನಂತಿಸಿದರು. ಈ ರೀತಿಯ ಮಾಹಿತಿ ಕೊಡುವುದರಿಂದ ಈಗ ಲಭ್ಯವಿರುವ ಬಿಪಿಎಲ್ ಪಡಿತರ ಚೀಟಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಕಡಿತ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಆಯೋಗದ ನಿರ್ದೇಶನದಂತೆ ಮಾತ್ರ ಜಾತಿ ಸಮೀಕ್ಷೆ ನಡೆಸಲು ಸೂಚನೆ ನೀಡಿದೆ ಎಂದು ಹೇಳಿದರು.

ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಮೇ.೨೧ ರವರೆಗೆ ಒಟ್ಟು ೮೫೩೭೧ ಕುಟುಂಬಗಳ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು, ಇದರಲ್ಲಿ ಪ.ಜಾ ಕ್ಕೆ ಸೇರಿದ ಸುಮಾರು ೧೬೨೭೫ ಕುಟುಂಬಗಳು ಮತ್ತು ೬೯೦೯೬ ಕುಟುಂಬಗಳು ಪ.ಜಾ ವ್ಯಾಪ್ತಿಯ ಹೊರಗಿನವು ಎಂದು ಮಾಹಿತಿ ನೀಡಿದರು.

ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪ.ಜಾ ಒಳ ಮೀಸಲಾತಿ ವರ್ಗೀಕರಣಗೊಳಿಸಲು ಜಾತಿ ಸಮೀಕ್ಷೆಯನ್ನು ಜಿಲ್ಲಾ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಮಾದರಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಮೂರು ಹಂತಗಳಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದರು.

ಗಣತಿದಾರರು ಮನೆ ಮನೆಗೆ ಭೇಟಿನೀಡಿ ಸಮೀಕ್ಷೆ ಮಾಡುವಂತದ್ದಾಗಿದ್ದು, ಮತಗಟ್ಟೆವಾರು ಶಿಬಿರಗಳಲ್ಲಿ ಮತ್ತು ಸ್ವಯಂ ಘೋಷಣೆಯ ಮೂಲಕ ಈ ಮೂರು ಹಂತಗಳಲ್ಲಿ ಜಾತಿ ಸಮೀಕ್ಷೆ ನಡೆಸಲಾಗುವುದು ಎಂದು ವಿವರಿಸಿದರು.

ಈಗಾಗಲೇ ಮೇ.೫ ರಿಂದ ಆರಂಭವಾಗಿದ್ದ ಜಾತಿ ಸಮೀಕ್ಷೆ ಕಾರ್ಯ ಮೇ.೧೭ ಕ್ಕೆ ಮುಕ್ತಾಯಗೊಂಡಿದ್ದು, ಗಡುವನ್ನು ಮೇ.೨೫ ರವರೆಗೆ ವಿಸ್ತರಿಸಿ ಸರ್ಕಾರ ಅದೇಶಿಸಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಸುವವರು ಮೇ.೨೫ ರಿಂದ ೨೮ ರವರೆಗೆ ಸ್ವಯಂ ಘೋಷಣೆಯಡಿ ಮೇ.೧೯ ರಿಂದ ೨೮ ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದರು.

ಸ್ವಯಂ ಘೋಷಣೆಯಲ್ಲಿ ಗಣತಿದಾರರು ಮನೆಗೆ ಬಂದಾಗ ಇಲ್ಲದಿರುವವರು ಆನ್‌ಲೈನ್ ಮೂಲಕ ವೆಬ್‌ಸೈಟ್ ಪೋರ್ಟಲ್‌ನಲ್ಲಿ ಘೋಷಣೆ ಮಾಡಿಕೊಳ್ಳಲು ಅವಕಾಶ ಇದೆ ಎಂದು ಹೇಳಿದರು.

ಒಟ್ಟು ೪೩೧ ಗಣತಿದಾರರು ಈ ಜಾತಿ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಈಗಾಗಲೇ ಸಾಕಷ್ಟು ಮನೆಗಳಿಗೆ ಭೇಟಿನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಕ್ಕಪಕ್ಕದ ಮನೆಗಳಲ್ಲಿರುವವರ ಗಣತಿ ಕೈತಪ್ಪಿದ್ದರೆ ಮಾಹಿತಿಯನ್ನು ನೀಡುವ ಮೂಲಕ ಸಹಕರಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಭಾಗವಹಿಸಿದ ಸಂಘಟನೆಗಳ ಮುಖಂಡರು ಬೇಡ, ಜಂಗಮ ಜನಾಂಗದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಮೀಕ್ಷೆ ತಪ್ಪಾಗಿದ್ದಲ್ಲಿ ಸರಿಪಡಿಸಲು ಏನು ಕ್ರಮ ಎಂದು ಪ್ರಶ್ನಿಸಿದರು. ಈ ಎರಡು ಸಮಸ್ಯೆಗಳನ್ನು ಆಯೋಗದ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.

ಸಭೆಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಹೆಚ್.ಡಿ. ರೇವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಮತ್ತು ದಲಿತಪರ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Help to enter sub-caste in caste survey

Share

Leave a comment

Leave a Reply

Your email address will not be published. Required fields are marked *

Don't Miss

ತಾಯ್ನಾಡಿನ ಋಣ ತೀರಿಸಲು ಸೈನಿಕ ವೃತ್ತಿ ಶ್ರೇಷ್ಟ

ಚಿಕ್ಕಮಗಳೂರು:  ಭೂಮಿಯಲ್ಲಿ ಜನಿಸಿದ ಮನುಜ ಕೊನೆಗೊಂದು ದಿನ ದೇಹವನ್ನು ತ್ಯಜಿಸಲೇಬೇಕು. ಈ ಮಧ್ಯೆದಲ್ಲಿ ತಾಯ್ನಾಡಿನ ಋಣ ತೀರಿಸಲು ಹಾಗೂ ಭಾರತವನ್ನು ಗಟ್ಟಿಗೊಳಿಸಲು ಸೈ ನಿಕ ವೃತ್ತಿ ಅತ್ಯಂತ ಶ್ರೇಷ್ಟವಾಗಿದೆ ಎಂದು ಜಿಲ್ಲಾ...

ಧಾರಾಕಾರ ಮಳೆಗೆ ಶೃಂಗೇರಿಯಲ್ಲಿ ತುಂಗಾನದಿಯಲ್ಲಿ ಪ್ರವಾಹ

ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಶನಿವಾರ ತುಂಗಾನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿಯಲ್ಲಿ 70 ಮಿ.ಮೀ, ಕಿಗ್ಗಾದಲ್ಲಿ 152.4 ಮಿ.ಮೀ, ಕೆರೆಕಟ್ಟೆಯಲ್ಲಿ 211 ಮಿ.ಮೀ ಮಳೆಯಾಗಿದ್ದು, ಒಟ್ಟು 2,825 ಮಿ.ಮೀ...

Related Articles

ಮೇಲ್ವರ್ಗದರು ಮಾಡಿದ ಒತ್ತುವರಿ ತೆರವಿಗೆ ಗ್ರಾಮಸ್ಥರ ಆಗ್ರಹ

ಚಿಕ್ಕಮಗಳೂರು: ಹಾಂದಿ ಗ್ರಾಮದಲ್ಲಿ ಊರಿನವರು ವಾಸಿಸಲು ನಿವೇಶನಕ್ಕೆ ಉಚಿತವಾಗಿ ಜಾಗ ನೀಡಿದ ಕುಟುಂಬ ಸಮಸ್ಯೆ ಎದುರಿಸುವಂತಾಗಿದ್ದು,...

ಡಕಾಯಿತಿ ಪ್ರಕರಣ ಆರೋಪಿಗಳ ಬಂಧನ-2.55 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ಚಿಕ್ಕಮಗಳೂರು: ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅಂದಾಜು ೨.೫೫ ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು...

ಗಿರಿ ಭಾಗದ ತಾಣಗಳಿಗೆ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯ ಅವೈಜ್ಞಾನಿಕ

ಚಿಕ್ಕಮಗಳೂರು: ಗಿರಿ ಭಾಗದ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯಗೊಳಿಸಿರುವ ಜಿಲ್ಲಾಡಳಿತದ ಕ್ರಮ ಅವೈಜ್ಞಾನಿಕವಾಗಿದ್ದು,...

ಬೀದಿ ನಾಯಿಗಳಿಗೆ ನಿಯಂತ್ರಣಕ್ಕೆ ಅಗತ್ಯ ಕ್ರಮ

ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ...