Home Political News ಚಿಕ್ಕಮಗಳೂರು ನಗರಸಭೆಯಲ್ಲಿ ಕೋಲಾಹಲ ಎಬ್ಬಿಸಿದ ತುರ್ತುಸಭೆ
Political News

ಚಿಕ್ಕಮಗಳೂರು ನಗರಸಭೆಯಲ್ಲಿ ಕೋಲಾಹಲ ಎಬ್ಬಿಸಿದ ತುರ್ತುಸಭೆ

Share
Share

ಚಿಕ್ಕಮಗಳೂರು :ನಗರಸಭೆಯಲ್ಲಿ ಇಂದು ಆಡಳಿತರೂಡ ಬಿಜೆಪಿ ಅಧ್ಯಕ್ಷೆ ಸುಜಾತ ಶಿವಕುಮಾರ್ ವಿರುದ್ಧ ಕಾಂಗ್ರೆಸ್ ಸದಸ್ಯರು ಮುಗಿ ಬಿದ್ದಿದ್ದರು. ತುರ್ತು ಸಾಮಾನ್ಯ ಸಭೆಯನ್ನು ಬಿಲ್ ಪಾಸ್ ಮಾಡಿಕೊಳ್ಳಲು ಕರೆಯಲಾಗಿದೆ ಎಂದು ಪ್ರತಿ ಪಕ್ಷಗಳು ಕೋಲಾಹಲ ಎಬ್ಬಿಸಿದ್ದರು. ಸಭೆ ಆರಂಭ ವಿಳಂಬಕ್ಕೆ ಗರಂ ಆಗಿದ್ದ ಕೈ ಸದಸ್ಯರು ಲೂಟಿ ಲೂಟಿ ಎಂದು ಘೋಷಣೆ ಕೂಗಿದರು. ನಗರದಲ್ಲಿ ಗುಂಡಿ ಮುಚ್ಚಲು 50 ಲಕ್ಷ ಟೆಂಡರ್ ಕರೆದಿದ್ದು ಇದರಲ್ಲಿ ಭಾರೀ ಅವ್ಯವಹಾರ ನಡೆದಿದೆ. ಅಲ್ಲದೇ ನಗರದಲ್ಲಿ ಕಳಪೆ ತೇಪೆ ಕಾಮಗಾರಿ ನಡೆಯುತ್ತಿದೆ ಲಕ್ಷಾಂತರ ಹಣ ಲೂಟಿ ಮಾಡಲಾಗಿದೆ ಎಂದು ನಗರಸಭೆಯ ವಿರೋಧ ಪಕ್ಷದ ನಾಯಕ ಮುನೀರ್ ಅಹ್ಮದ್ ಅರೋಪಿಸಿದರು. ಈ ವೇಳೆ ಬಿಜೆಪಿ ಸದಸ್ಯ ಮಧುರಾಜ್ ಅರಸ್ ಮತ್ತು ಮುನೀರ್ ನಡುವೆ ಮಾತಿನಚಕಮಕಿ ನಡೆಯಿತು. ಏರು ದ್ವನಿಯಲ್ಲಿ ಪರಸ್ಪರ ಇಬ್ಬರೂ ವಾಗ್ವದ ನಡೆಸಿದ್ರು. ಕಾಂಗ್ರೆಸ್ ನ ಎಲ್ಲಾ ಸದಸ್ಯರು ಎದ್ದು ನಿಂತು ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಅಧ್ಯಕ್ಷೆ ಸುಜಾತ ನಡೆ ಖಂಡಿಸಿ ತುರ್ತು ಸಭೆಯನ್ನ ರದ್ದು ಮಾಡಿ ಎಂದು ಕಾಂಗ್ರೆಸ್ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಅಲ್ಲಿಯೇ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿ ಸಭಾಂಗಣದಿಂದ ಹೊರನಡೆದರು.

ನಂತರ ನಗರಸಭೆಯ ಮುಂಭಾಗ ಅಜೆಂಡಾ ಪ್ರತಿಯನ್ನ ಹರಿದು ಅಧ್ಯಕ್ಷರ ವಿರುದ್ದ ಘೋಷಣೆ ಕೂಗಿದರು. ಆಡಳಿತ ನಡೆಸುತ್ತಿರುವ ಬಿಜೆಪಿ ಸದಸ್ಯರು ಸಭೆಗೆ ಕೇವಲ 13 ಜನರು ಮಾತ್ರ ಹಾಜರಾಗಿದ್ದು ಬಹುಮತ ಇರದೇ ಬಿಲ್ ಪಾಸ್ ಮಾಡಿದ್ದಾರೆ, ಇದನ್ನ ತಡೆಹಿಡಿಯಲು ಜಿಲ್ಲಾಧಿಕಾರಿಗೆ ದೂರು ನೀಡುತ್ತೇವೆ ಎಂದು ಮುನೀರ್ ಮಾಧ್ಯಮಗಳಿಗೆ ತಿಳಿಸಿದರು. ಇದೇ ವೇಳೆ ಇದಕ್ಕೆ ಉತ್ತರಿಸಿದ ನಗರಸಭಾದ್ಯಕ್ಷೆ ಸುಜಾತ ಶಿವಕುಮಾರ್ ಈ ಹಿಂದಿನ ಸಭೆಯ ನಡುವಳಿಯಂತೆ ಇಂದು ಸಭೆ ನಡೆದಿದೆ. ನಗರದಲ್ಲಿ ಗುಂಡಿ ಮುಚ್ಚುವ ಐವತ್ತು ಲಕ್ಷ ಕಾಮಗಾರಿ ಹೊರತು ಪಡಿಸಿ ಉಳಿದ ಎಲ್ಲ ವಿಷಯಗಳಿಗೆ ಅನುಮೋದನೆ ದೊರೆತಿದೆ ಎಂದರು. ಅದರೇ ಬಹುಮತ ಇಲ್ಲವಲ್ಲ ಎಂಬ ಪ್ರಶ್ನೆಗೆ ತಬ್ಬಿಬ್ಬಾಗಿ ನಾನು ಸದಸ್ಯರ ಸಂಖ್ಯೆ ಎಣಿಕೆ ಮಾಡಿಲ್ಲ. ಹಾಜರಾತಿ ಪುಸ್ತಕ ನೋಡಿ ನಂತರ ಹೇಳುತ್ತೇನೆ ಎಂಬ ಜಾರಿಕೆ ಉತ್ತರ ನೀಡಿದರು

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...