Home Latest News ಸಿ.ಟಿ.ರವಿ ಮನೆಗೆ ಮುತ್ತಿಗೆ ವೇಳೆ ಹೈಡ್ರಾಮ : ಕೈ ಕಾರ್ಯಕರ್ತನ ಮೇಲೆ ಹಲ್ಲೆ
Latest News

ಸಿ.ಟಿ.ರವಿ ಮನೆಗೆ ಮುತ್ತಿಗೆ ವೇಳೆ ಹೈಡ್ರಾಮ : ಕೈ ಕಾರ್ಯಕರ್ತನ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು : ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಸಿ.ಟಿ ರವಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ತೆರಳುವ ವೇಳೆ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಾರೀ ಹೈ ಡ್ರಾಮವೇ ನಡೆದಿದೆ. ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಘಟನೆ ತಲುಪಿದ್ದು ಕೆಆರ್ ಎಸ್ ಆಸ್ಪತ್ರೆ ಬಳಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ನಗರಸಭೆ ಪ್ರತಿಪಕ್ಷ ನಾಯಕ ಮುನೀರ್ ಅಹ್ಮದ್ ಗೆ ಕಾಲಿನಿಂದ ಒದ್ದು ಹಲ್ಲೆಗೆ ಯತ್ನಿಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಬಸವನಹಳ್ಳಿ ಮುಖ್ಯ ರಸ್ತೆಯ ಅರಳಿಮರದಿಂದ ಬಳಿಯಿಂದ ಸಿ.ಟಿ ರವಿ ಮನೆಯತ್ತ ಘೋಷಣೆ ಕೂಗುತ್ತಾ ತೆರಳುತ್ತಾರೆ ಈ ವೇಳೆ ಉಮೇಶ್ ಕ್ಯಾಂಟೀನ್ ಬಳಿ ಪರಸ್ಪರ ಎದುರಾಗಿ ಎರಡೂ ಕಡೆಯವರು ಘೋಷಣೆ ಕೂಗುತ್ತಾರೆ. ಪೊಲೀಸರು ಕಾರ್ಯಕರ್ತರನ್ನು ತಡೆಯಲು ತೀವ್ರ ಹರಸಾಹಸ ಪಡುತ್ತಾರೆ.

ಕೊನೆಗೆ ಕಾಂಗ್ರೆಸ್ ಕಾರ್ಯಕರ್ತರನ್ನ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆ, ಸ್ಥಳಕ್ಕೆ ಆಗಮಿಸಿದ ಎಸ್ಪಿ ವಿಕ್ರಮ್ ಅಮಟೆ ಎರಡೂ ಪಕ್ಷಗಳ ಮುಖಂಡನ್ನು ಸಮಾಧಾನ ಪಡಿಸುತ್ತಾರೆ, ನಂತರ ಸಿ.ಟಿ ರವಿ ಮನೆ ಬಳಿ ಗಂಟೆಗಳ ಕಾಲ ಮೊಕ್ಕಾಂ ಹೂಡುತ್ತಾರೆ. ಸದ್ಯ ರವಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಈ ನಡುವೆ ನಗರದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ. ಕೆಎಸ್ಆರ್ ಪಿ ತುಕುಡಿಯನ್ನು ನಿಯೋಜಿಸಲಾಗಿದೆ ಮತ್ತೆ ಪರ ವಿರೋಧ ಪ್ರತಿಭಟನೆ ಗಳು ನಡೆಯುವ ಸಾಧ್ಯತೆ ಇರುವ ಇದ್ದು ಹದ್ದಿನ ಕಣ್ಣನ್ನು ಪೊಲೀಸರು ಇಟ್ಟಿದ್ದು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...