Home Crime News ಪತ್ನಿಯನ್ನು ಗೃಹ ಬಂಧನದಲ್ಲಿಟ್ಟ ಕೀಚಕ ಪತಿ : ನಿರಂತರ ಹಲ್ಲೆ ಕಿರುಕುಳ
Crime News

ಪತ್ನಿಯನ್ನು ಗೃಹ ಬಂಧನದಲ್ಲಿಟ್ಟ ಕೀಚಕ ಪತಿ : ನಿರಂತರ ಹಲ್ಲೆ ಕಿರುಕುಳ

Share
Share

ಚಿಕ್ಕಮಗಳೂರು : ವೈದ್ಯನಾಗಿದ್ದು ಪತ್ನಿಗೆ ಮಾನಸಿಕ ಕಿರುಕುಳ ನೀಡಿ ಅನ್ನ-ನೀರು ನೀಡದೆ ವರ್ಷಗಟ್ಟಲೆ ಗೃಹ ಬಂಧನದಲ್ಲಿರಿಸಿದ ಮನ ಕಲಕುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ವೃತ್ತಿಯಲ್ಲಿ ವೈದ್ಯನಾಗಿದ್ದರು ಪತ್ನಿಯನ್ನು ಮಾನವೀಯತೆ ಮರೆತು ಹೊರ ಪ್ರಪಂಚಕ್ಕೆ ಹೋಗದಂತೆ ಗೃಹಬಂಧನದಲ್ಲಿ ಇರಿಸಿ ತನ್ನ ವೃತ್ತಿಗೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಂಡ ವೈದ್ಯ ರವಿಕುಮಾರ್ ವಿರುದ್ಧ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು ನಗರದ ದೋಣಿಕಣ ಸಮೀಪದ ಮನೆಯಲ್ಲಿ ವೈದ್ಯ ತನ್ನ ಪತ್ನಿ ವಿನುತಾರಾಣಿಯನ್ನು ಚಿತ್ರಹಿಂಸೆ ನೀಡಿ ಕಿರುಕುಳ ಕೊಡುತ್ತಿದ್ದಾರೆ. ಅದರಲ್ಲೂ ಹುಚ್ಚಿ ಎಂದು ಬಿಂಬಿಸಿ ಮಾನಸಿಕ ಜೊತೆಯಲ್ಲಿ ದೈಹಿಕ ಕಿರುಕುಳವನ್ನು ನೀಡಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೆ ಮಹಿಳೆಯ ಮಗನಿಗೂ ಕೂಡ ತಾಯಿಯ ಮೇಲೆ ಜಿಗುಪ್ಸೆ ಬರುವಂತೆ ಮಾಡಿ ತಾಯಿಯಿಂದ ಮಗನನ್ನು ದೂರ ಇರುವಂತೆ ಮಾಡಿರೋ ಆರೋಪವೂ ಕೇಳಿ ಬಂದಿದೆ. ಇಂದು ಬೆಳಗ್ಗೆ ವಿನುತಾ ರಾಣಿಯ ಸಹೋದರ ವಾಗೀಶ್ ಕುಮಾರ್, ಸ್ಥಳೀಯರು ಹಾಗೂ ಪೊಲೀಸರ ಸಹಾಯದಿಂದ ಮನೆಯ ಬಾಗಿಲು ಒಡೆದು ಗೃಹಬಂಧನದಲ್ಲಿದ್ದ ಮಹಿಳೆಯನ್ನು ಹೊರಗೆ ಕರೆತಂದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಮೊಬೈಲ್ ಕೂಡ ಬಳಸದಂತೆ, ಸಾರ್ವಜನಿಕರ ಸಂಪರ್ಕ ಸಂಪರ್ಕವೂ ಸಿಗದಂತೆ ಮನೆಯಲ್ಲಿಯೇ ಕೂಡಿಹಾಕಿ, ಸಂಬಂಧಿಕರ ಸಂಪರ್ಕವೂ ಸಿಗದಂತೆ ಮಾಡಿ ನೆರೆಹೊರೆಯವರು ಜೊತೆ ಬೆರೆಯದಂತೆ ಮಾಡಿರುವ ಆರೋಪವು ಕೇಳಿಬಂದಿದೆ.

ಗೃಹ ಬಂಧನದಲಿದ್ದ ಮಹಿಳೆ ಹೊರ ಬರುತ್ತಿದ್ದಂತೆ ಅಕ್ಕ ಪಕ್ಕದ ಮನೆಯ ನಿವಾಸಿಗಳು ಹಲವು ದಿನಗಳ ಬಳಿಕ ಆಕೆಯ ಪರಿಸ್ಥಿತಿಯನ್ನು ನೋಡಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ತೀವ್ರ ಬಳಲಿರುವ ದೇಹ ಹಾಗೂ ಊಟವಿಲ್ಲದೆ ಆರೋಗ್ಯ ಸಮಸ್ಯೆ ಉಂಟಾಗಿರುವ ಮಹಿಳೆಯ ಪರಿಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಪರಿಸ್ಥಿತಿಯನ್ನು ಗಮನಿಸಿ ಚಿಕ್ಕಮಗಳೂರು ಮೂಲದ ಉತ್ತರಖಾಂಡ್ ನಲ್ಲಿ ಐಎಎಸ್ ತರಬೇತಿ ಪಡೆಯುತ್ತಿರುವ ಮಿಥುನ್ ಇದನ್ನು ಗಮನಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ವಿವರವಾಗಿ ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಡಿಎಚ್ಒ ಹಾಗೂ ಮಹಿಳಾ ಠಾಣೆಗೆ ಸೂಚನೆ ನೀಡಿ ವಿನುತಾರಾಣಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುವಂತೆ ಸೂಚನೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...