Home namma chikmagalur chikamagalur ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
chikamagalurCrime NewsHomeLatest Newsnamma chikmagalur

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

Share
Share

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿ ನಿಲಯದ ತನ್ನ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥತಿಯಲ್ಲಿದ್ದ ಬಾಲಕನನ್ನು ಸಹಪಾಠಿಗಳು ರಕ್ಷಿಸಿದ್ದಾರೆ. ಕೂಡಲೇ ನಗರದ ಅರಳುಗುಪ್ಪೆ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ಕಳುಹಿಸಲಾಯಿತು. ‘ವಿದ್ಯಾರ್ಥಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಟಿ, ಎಂಆರ್‌ಐ ಸ್ಕ್ಯಾನ್ ಮಾಡಲಾಗಿದ್ದು, ಯಾವುದೇ ತೊಂದರೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಪ್ರಾಣಕ್ಕೆ ಅಪಾಯ ಇಲ್ಲ’ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಐಟಿಡಿಪಿ ಜಿಲ್ಲಾ ಅಧಿಕಾರಿ ರಮೇಶ್ ತಿಳಿಸಿದರು.

Hostel student attempts suicide

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...

₹10.13 ಲಕ್ಷ ಮೌಲ್ಯದ HDPE ಪೈಪ್ ಬಂಡಲ್‌ಗಳ ಕಳವು

ಚಿಕ್ಕಮಗಳೂರು: ಜಲ ಜೀವನ್ ಮಿಷನ್ ಕಾಮಗಾರಿಗಾಗಿ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ₹10.13 ಲಕ್ಷ ಮೌಲ್ಯದ 32 HDPE...