Home Crime News ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
Crime NewsHomeLatest Newsnamma chikmagalurTarikere

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Share
Share

ತರೀಕೆರೆ: ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾವಿಕೆರೆಯಲ್ಲಿ ನಂಬಿಕೆಗೆ ದ್ರೋಹ ಬಗೆದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಸ್ವಂತ ತಮ್ಮನ ಮಗನೇ ಚಿಕ್ಕಪ್ಪನ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾನೆ.

ಬಾವಿಕೆರೆ ನಿವಾಸಿ ಅಯೋಬ್ ಖಾನ್ ಎಂಬುವವರ ಮನೆಯಲ್ಲೇ ಈ ಕಳ್ಳತನ ನಡೆದಿದೆ. ಅವರು ತಮ್ಮ ಮನೆಯ ಮೇಲ್ಬಾಗದ ಕೋಣೆಯಲ್ಲಿದ್ದ ತಮ್ಮನ ಮಗ ಸಾಹುಲ್ ಹಮೀದ್ (19), ಮುಂಭಾಗದ ಗೇಟ್ ಚಿಲಕವನ್ನು ಸದ್ದಿಲ್ಲದೆ ತೆರೆದು ಒಳ ನುಗ್ಗಿದ್ದಾನೆ.

ನೇರವಾಗಿ ಕೋಣೆಯೊಳಗೆ ನುಗ್ಗಿದ ಆತ, ಗಾಡೇಜ್ ಬೀರುವಿನ ಬಾಗಿಲು ಹಾಗೂ ಲಾಕರ್ ಅನ್ನು ಬಲವಂತವಾಗಿ ಒಡೆದು, ಅದರಲ್ಲಿದ್ದ ಸುಮಾರು 1,45,000 ರೂ. ಅಂದಾಜು ಮೌಲ್ಯದ 20 ಗ್ರಾಂ ತೂಕದ ಒಂದು ಜೊತೆ ಹಳೆಯ ಬಂಗಾರದ ಬಳೆಗಳನ್ನು ಚೀಲದಲ್ಲಿ ತುಂಬಿಕೊಂಡು ಓಡಲಾರಂಭಿಸಿದ್ದಾನೆ.

ಈ ವೇಳೆ ಗೇಟ್ ಶಬ್ದ ಕೇಳಿ ಅಯೋಬ್ ಖಾನ್ ಕೆಳಗಿಳಿದು ಬಂದು ನೋಡಿದಾಗ ಸಾಹುಲ್ ಹಮೀದ್ ಒಡವೆ ಚೀಲದೊಂದಿಗೆ ಸಿಕ್ಕಿಬಿದ್ದಿದ್ದಾನೆ. ಅಯೋಬ್ ಖಾನ್ ಆತನನ್ನು ನಿಲ್ಲುವಂತೆ ಕೂಗಿಕೊಂಡರೂ ಆತ ಯಾವುದಕ್ಕೂ ಕಿವಿಕೊಡದೆ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಕೃತ್ಯ ಎಸಗಿದವನು ಸ್ವಂತ ತಮ್ಮನ ಮಗನೇ ಆಗಿದ್ದರಿಂದ, ಆಭರಣಗಳನ್ನು ತಂದು ಒಪ್ಪಿಸಬಹುದು ಎಂದು ಅಯೋಬ್ ಖಾನ್ ಅವರು ಕುಟುಂಬದ ಗೌರವಕ್ಕೆ ಹೆದರಿ ಹಲವು ದಿನಗಳ ಕಾಲ ದೂರು ನೀಡದೆ ಕಾಯ್ದಿದ್ದಾರೆ. ಆದರೆ, ಸಾಹುಲ್ ಹಮೀದ್ ಮಾತ್ರ ಬಳೆಗಳನ್ನು ವಾಪಸ್ ನೀಡದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾನೆ.

ಕೊನೆಗೆ ಅಯೋಬ್ ಖಾನ್ ಅವರು ಲಕ್ಕವಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

House broken into jewellery worth lakhs stolen

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...