Home Crime News ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು
Crime NewsHomeKadurLatest Newsnamma chikmagalur

ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು

Share
Share

ಬೀರೂರು: ಮನೆಯ ಮಾಲೀಕರು ಊರಿಗೆ ತೆರಳಿದ್ದ ವೇಳೆ ಕಳ್ಳರು ಮನೆಯ ಬಾಗಿಲು ಮುರಿದು ಒಳನುಗ್ಗಿ ₹1.45 ಲಕ್ಷ ಮೌಲ್ಯದ ಚಿನ್ನಾ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ಬೀರೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಟ್ಟಣದ ರಾಜಾಜಿನಗರ ಬಡಾವಣೆ ವಾಸಿ ಎಸ್ಟೆಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಕುಮಾರ್ ಅವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆ.

ಕುಮಾರ್‌ಅವರು ಕಳೆದವಾರ ರಜೆ ಪ್ರಯುಕ್ತ ಸ್ವಗ್ರಾಮವಾದ ಹೊಸದುರ್ಗ ತಾಲೂಕಿನ ದುಗ್ಗಾವರಕ್ಕೆ ತೆರಳಿದ್ದರು. ಸೋಮವಾರ ಬೆಳಗಿನ ಜಾವ ಸಹೋದ್ಯೋಗಿ ರಾಜೇಶ್ ದೂರವಾಣಿ ಮೂಲಕ ಮನೆಯ ಬಾಗಿಲು ಮುರಿದಿರುವ ಮಾಹಿತಿ ನೀಡಿದರು.

ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿ ಬೆದ್ರೂಮ್ ವಾರ್ಡ್ ರೋಟ್ನಲ್ಲಿ ಇರಿಸಿದ್ದ ಒಂದು ಜತೆ ಬಂಗಾರದ ಓಲೆ. ಜುಮುಕಿ, ಮೂರು ಜತೆ ಬಂಗಾರದ ಓಲೆ. ಒಂದು ಬೆಳ್ಳಿಯ ಚೊಂಬು ಹಾಗೂ ನಾಲ್ಕು ಬೆಳ್ಳಿಯ ದೀಪಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಈ ಸಂಬಂಧ ಕುಮಾರ್‌ ಅವರು ಬೀರೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

House door broken into and jewellery stolen

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...