Home Latest News ವಿಕ್ರಮ್ ಗೌಡ ಮೇಲೆ ಎಷ್ಟು ಕೇಸ್ ಗಳಿವೆ : ಈತ ನಕ್ಸಲ್ ಆಗಿದ್ದೇಗೆ
Latest News

ವಿಕ್ರಮ್ ಗೌಡ ಮೇಲೆ ಎಷ್ಟು ಕೇಸ್ ಗಳಿವೆ : ಈತ ನಕ್ಸಲ್ ಆಗಿದ್ದೇಗೆ

Share
Share

ಚಿಕ್ಕಮಗಳೂರು : ಎನ್ ಕೌಂಟರ್ ಗೆ ಬಲಿಯಾದ ನಕ್ಸಲ್ ವಿಕ್ರಂಗೌಡ ಮೇಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 13 ಕೇಸ್ ಗಳು ಇವೆ. ಕೊಲೆ, ಕೊಲೆ ಯತ್ನ, ಡಕಾಯಿತಿ, ಜನರನ್ನು ಬೆದರಿಸಿರೋದು, ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿರೋದು, ಆಯುಧ ಹಿಡಿದು ಓಡಾಡಿರುವುದು ಸೇರಿ 13 ಪ್ರಕರಣಗಳಲ್ಲಿ ವಿಕ್ರಮ್ ಪೊಲೀಸರಿಗೆ ಬೇಕಾಗಿದ್ದ 2007 ರಲ್ಲಿ ಪೊಲೀಸ್ ಮಾಹಿತಿದಾರ ಎಂದು ವೆಂಕಟೇಶ್ ಎಂಬುವನ ಕೊಲೆ ಈತನ ಮೇಲಿದ್ದ ಪ್ರಮುಖ ಪ್ರಕರಣ ಆಗಿದೆ. ಇಷ್ಟು ಪ್ರಕರಣಗಳಲ್ಲಿ ಕಾಫಿನಾಡ ಪೊಲೀಸರಿಗೂ ಬೇಕಾಗಿದ್ದ ವಿಕ್ರಂಗೌಡ ಸದ್ಯ ಹತನಾಗಿದ್ದಾನೆ

ನಕ್ಸಲ್ ನಾಯಕರಲ್ಲಿ ಒಬ್ಬನಾಗಿದ್ದ ವಿಕ್ರಂಗೌಡ ಸರ್ಕಾರದ‌ ಜನವಿರೋಧಿ ನೀತಿಗಳಿಂದ ನಕ್ಸಲ್ ಚಳುವಳಿಗೆ ಧುಮುಕಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಲ್ಲಿ ಮುಂಚೂಣಿ ಮುಖಂಡನಾಗಿದ್ದ ಈತ ಕಸ್ತೂರಿ ರಂಗನ್ ವರದಿ, ಅರಣ್ಯ ಒತ್ತುವರಿ ತೆರವಿಗೆ ಕೂಡಾ ತೀವ್ರ ವಿರೋಧ ವ್ಯಕ್ತಪಡಿಸಿದ್ದನು.‌ ಮೂಲತಃ ಕರಾವಳಿಯ ಹೆಬ್ರಿ ತಾಲೂಕಿನಿಂದ ಕಾರ್ಮಿಕ ನಾಯಕನಾಗಿದ್ದ ವಿಕ್ರಂ ನಂತರ ಭೂಗತನಾಗಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದು ಪ್ರಮುಖ ನಾಯಕ ಎನಿಸಿಕೊಂಡಿದ್ದ ಕಳೆದ 20 ವರ್ಷಗಳಿಂದ ನಕ್ಸಲನಾಗಿ ಗುರುತಿಸಿಕೊಂಡಿದ್ದ ವಿಕ್ರಂಗೌಡ ಹಲವು ಪೊಲೀಸ್ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಆಗಾಗ್ಗೆ ಕಾಣಿಸಿಕೊಂಡಿದ್ದ ನಂತರ ಮಲೆನಾಡಿಲ್ಲಿ ಹೋರಾಟಕ್ಕೆ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ಸೇರಿಕೊಂಡು ಅಲ್ಲಿ ಸಕ್ರಿಯವಾಗಿದ್ದ ಅಲ್ಲದೇ ಕರ್ನಾಟಕದ ನಕ್ಸಲರಾದ ಮುಂಡಗಾರು ಲತಾ , ವನಜಾಕ್ಷಿ ಜಯಣ್ಣ ಸೇರಿದಂತೆ ಹಲವರು ಕಳೆದ ತಿಂಗಳ ಹಿಂದಷ್ಟೇ ಅಲ್ಲಿಂದ ಕಾಲ್ಕಿತ್ತು ಕರ್ನಾಟಕಕ್ಕೆ ವಾಪಸ್ಸಾಗಿದ್ದರು

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....