Home Latest News ನಕ್ಸಲರು ಮತ್ತೆ ಬಂದಿದ್ದು ಎಲ್ಲಿಂದ : ಎಲ್ಲಿದ್ರು ಇಷ್ಟು ದಿನ
Latest News

ನಕ್ಸಲರು ಮತ್ತೆ ಬಂದಿದ್ದು ಎಲ್ಲಿಂದ : ಎಲ್ಲಿದ್ರು ಇಷ್ಟು ದಿನ

Share
Share

ಚಿಕ್ಕಮಗಳೂರು :

ಮಲೆನಾಡಿನಲ್ಲಿ ಮರೆಯಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭ ಆಗಿರುವ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿವೆ. ದಶಕಗಳ ನಂತರ ಇದೀಗ ಮತ್ತೆ ರಾತ್ರೋರಾತ್ರಿ ಪ್ರತ್ಯಕ್ಷ ಆಗಲು ಕಾರಣವೇನು ಎಂದು ಊಹೆಗಳು ಹೆಚ್ಚಾಗುತ್ತಿವೆ. ಅದರಲ್ಲೂ ಪ್ರಮುಖ ನಕ್ಸಲ್ ನಾಯಕಿ ಮುಂಡಗಾರು ಲತಾ ಹಾಗೂ ಜಯಣ್ಣ ಕಾಣಿಸಿಕೊಂಡಿರುವುದು ಮತ್ತೆ ಮಲೆನಾಡಿನಲ್ಲಿ ನಕ್ಸಲ್ ಚಟುವಟಿಕೆ ಗರಿಗೆದರುವುದೇ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ.

ಕೇರಳ ರಾಜ್ಯದ ಅಡಗುತಾಣಗಳಲ್ಲಿದ್ದ ನಕ್ಸಲರಿಗೆ ಅಲ್ಲಿರುವುದು ಸೇಫಲ್ಲ ಎಂಬ ಕಾರಣಕ್ಕೆ ಮಲೆನಾಡು ಮತ್ತು ಪಶ್ಚಿಮಘಟ್ಟ ಪ್ರದೇಶ ಅಡಗುತಾಣ ಮಾಡಿಕೊಂಡಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ.

ಜಿಲ್ಲೆಯಲ್ಲಿ 2000ನೇ ಇಸವಿ ವೇಳೆಗೆ ಜಿಲ್ಲೆಯಲ್ಲಿ ತೀವ್ರಗೊಂಡಿದ್ದ ನಕ್ಸಲ್ ಚಟುವಟಿಕೆ ನಾಯಕ ಸಾಕೇತ್ ರಾಜನ್ ಮರಣ ನಂತರ 2005ರಲ್ಲಿ ಅಂದಿನ ಸರ್ಕಾರ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಬಳಿಕ ಕೆಲ ನಕ್ಸಲರು ಶರಣಾಗತರಾಗಿ ನಾಗರಿಕ ಸಮಾಜಕ್ಕೆ ಮರಳಿದರೇ, ಕೆಲವರು ಇಲ್ಲಿರುವುದು ಸೇಫಲ್ಲವೆಂದು ಕೇರಳ ರಾಜ್ಯದ ಕಡೆಗೆ ಮುಖಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಕೇರಳ ರಾಜ್ಯ ಕೈಗೊಂಡ ದಿಟ್ಟ ಕ್ರಮಗಳಿಂದ ಅನೇಕ ನಕ್ಸಲರು ಬಂಧಿಗಳಾಗಿದ್ದು, ಕೆಲವರು ಮೃತಪಟ್ಟಿರುವ ಘಟನೆ ಬಳಿಕ ಕೇರಳ ರಾಜ್ಯವೂ ಸೇಫಲ್ಲವೆಂಬ ಕಾರಣಕ್ಕೆ ಕರ್ನಾಟಕ ರಾಜ್ಯದ ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶದ ಕಡೆ ಮುಖ ಮಾಡಿದ್ದಾರೆ ಎನ್ನುವ ಚರ್ಚೆಗಳು ಪ್ರಾರಂಭವಾಗಿವೆ.
ಇಷ್ಟು ಮಾತ್ರವಲ್ಲದೆ ಮಲೆನಾಡು ಭಾಗದಲ್ಲಿ ಸರ್ಕಾರ ವಿಧಿಸುತ್ತಿರುವ ಅರಣ್ಯ ಕಾಯ್ದೆಗಳು ನಕ್ಸಲ್ ಚಟುವಟಿಕೆ ಪ್ರೇರೆಪಿಸಿದೆ.

ಸರ್ಕಾರಕ್ಕೊಂದು ಎಚ್ಚರಿಕೆ ಸಂದೇಶವೇ, ಕ್ಷೀಣಿಸಿ ಹೋಗಿದ್ದ ನಕ್ಸಲ್ ಚಟುವಟಿಕೆ ಪುರ್ನಾರಂಭಿಸಿ ತಮ್ಮ ಇರುವಿಕೆಯನ್ನು ಸಾಬೀತುಪಡಿಸಿಕೊಳ್ಳುವ ದೃಷ್ಟಿಯಿಂದ ಹಾಗೂ ಹೋರಾಟದಲ್ಲಿ ತೊಡಗಿಕೊಂಡಿರುವ ನಕ್ಸಲರ ವಯಸ್ಸು ಕುಂದುತ್ತಿರುವ ಹಿನ್ನೆಲೆ ಯಲ್ಲಿ ಇಲ್ಲಿ ಅಡಗುತಾಣ ಮಾಡಿಕೊಂಡು ಸಮಯ ಸಂದರ್ಭ ನೋಡಿ ಶರಣಾಗತಿಗಾಗಿ ಮಲೆನಾಡನ್ನು ಅಡಗುತಾಣವಾಗಿ ಮಾಡಿಕೊಂಡಿರಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ಚರ್ಚೆಗಳಿಗೂ ಜಯಪುರ ಸಮೀಪ ಕಡೇಗುಂದಿಯಲ್ಲಿ ಕಾಣಿಸಿಕೊಂಡಿರುವ ಮುಂಡಗಾರು ಲತಾ, ಜಯಣ್ಣ ಅಂಡ್ ಟೀಮ್ ಸೆರೆಯಾದ ಬಳಿಕವೇ ಉತ್ತರ ಸಿಗಲಿದೆ. ಸದ್ಯಕ್ಕಂತೂ ಇಂತ ಹ ಚರ್ಚೆಗಳು ಮಲೆನಾಡಿನಾದ್ಯಂತ ಹರಿದಾಡುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...