Home Latest News ಜೂ.9 ಕ್ಕೆ ನಗರದಲ್ಲಿ ಬೃಹತ್ ರೈತ ಸಮಾವೇಶ
Latest NewschikamagalurHomenamma chikmagalur

ಜೂ.9 ಕ್ಕೆ ನಗರದಲ್ಲಿ ಬೃಹತ್ ರೈತ ಸಮಾವೇಶ

Share
Share

ಚಿಕ್ಕಮಗಳೂರು:  ಚಿಕ್ಕಮಗಳೂರು: ರೈತ ಮತ್ತು ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಿ ಮಲೆನಾಡಿನ ಜನಜೀವನ ಉಳಿಸುವಂತೆ ಆಗ್ರಹಿಸಿ ಜೂ.೯ ರಂದು ನಗರದಲ್ಲಿ ಬೃಹತ್ ರೈತ ಸಮಾವೇಶ ಏರ್ಪಡಿಸಲಾಗಿದೆ ಎಂದು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ಅಧ್ಯಕ್ಷ ಎಸ್.ವಿಜಯ್‌ಕುಮಾರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಬೆಳೆಗಾರರ ಒಕ್ಕೂಟ, ಮಲೆನಾಡು ನಾಗರೀಕ ರೈತ ಹಿತರಕ್ಷಣಾ ಸಮಿತಿ ಶೃಂಗೇರಿ, ಜಿಲ್ಲೆಯ ಎಲ್ಲ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು, ದಲಿತ ಮತ್ತು ರೈತ ಸಂಘಟನೆಗಳು ಈ ಸಮಾವೇಶಕ್ಕೆ ಬೆಂಬಲ ನೀಡಿವೆ ಎಂದು ಹೇಳಿದರು.

ಜೂ.೯ ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ತಾಲೂಕು ಕಚೇರಿ ಆವರಣದಿಂದ ಎಂಜಿ ರಸ್ತೆ ಮೂಲಕ ಆಜಾದ್ ಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ರೈತರ ಸಮಸ್ಯೆಗಳನ್ನು ಆಲಿಸಿ ಅದನ್ನು ಸದನದಲ್ಲಿ ಚರ್ಚೆಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂಬ ಕಾರಣಕ್ಕೆ ಜಿಲ್ಲೆಯ ಜನಪ್ರತಿನಿಧಿಗಳಾದ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ. ರಾಜೇಗೌಡ, ಜಿ.ಎಚ್. ಶ್ರೀನಿವಾಸ್, ಕೆ.ಎಸ್.ಆನಂದ್, ನಯನಮೋಟಮ್ಮ, ಎಂಎಲ್‌ಸಿಗಳಾದ ಸಿ.ಟಿ.ರವಿ, ಎಸ್.ಎಲ್.ಬೋಜೇಗೌಡ ಅವರನ್ನು ಸಮಾವೇಶಕ್ಕೆ ಆಹ್ವಾನಿಸಿದ್ದೇವೆ ಎಂದರು.

ಬೇಡಿಕೆಗಳು : ನಮೂನೆ ೫೭ರಲ್ಲಿ ಪಡೆದಿರುವ ಅರ್ಜಿಗಳಿಗೆ ಸಾಗುವಳಿ ಚೀಟಿ ನೀಡಬೇಕು, ಡೀಮ್ಡ್ ಫಾರೆಸ್ಟ್ ಪರಿಷ್ಕೃತ ಪಟ್ಟಿ ತಯಾರಿಸುವಾಗ ಗ್ರಾಮ ಪಂಚಾಯಿತಿಗಳ ಮೂಲಕ ಪ್ರಚುರಪಡಿಸಬೇಕು. ಸೆಕ್ಷನ್ ೪(೧) ಪ್ರಸ್ತಾವನೆಯಲ್ಲಿರುವ ಎಲ್ಲ ರೈತರ ಜಮೀನು, ಮನೆ, ಗ್ರಾಮ, ಎಲ್ಲ ಜನವಸತಿ ಪ್ರದೇಶವನ್ನು ಮುಕ್ತಮಾಡಿ ಇತರೆ ಅಭಿವೃದ್ಧಿ ಕೆಲಸಗಳಿಗೆ ಜಾಗ ಮೀಸಲಿಡಬೇಕು. ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿದ ಸೆಕ್ಷನ್ ೪(೧) ಮೀಸಲು ಅರಣ್ಯ ಪ್ರಸ್ತಾವನೆ ಕೈಬಿಡಬೇಕು. ನಗರಸಭೆ ವ್ಯಾಪ್ತಿಯಿಂದ ೫ ಕಿ.ಮೀ ಮಾರ್ಗವನ್ನು ವಾಯುಮಾರ್ಗ ಎಂದು ಬಳಸದೆ ಭೂಮಾರ್ಗದ ನೇರ ಅಳತೆಯನ್ನು ಪರಿಗಣಿಸಬೇಕು. ಜಿಲ್ಲೆಯ ಇನಾಂ ಭೂಮಿ, ಸೊಪ್ಪಿನ ಬೆಟ್ಟ ಭೂಮಿಗಳ ರೈತರ ಸಮಸ್ಯೆ ಪರಿಹಾರ ಹಾಗೂ ಪ್ರಾಣಿ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅಂದಿನ ಸಮಾವೇಶದಲ್ಲಿ ಆಗ್ರಹಿಸಲಾಗುವುದು ಎಂದರು.
ಕೆಜಿಎಫ್ ಅಧ್ಯಕ್ಷ ಹಳೆಸೆ ಶಿವಣ್ಣ, ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಂ, ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ನಾಗೇಶ್, ರಂಜಿತ್, ರವಿಕುಮಾರ್ ಮತ್ತಿತರರಿದ್ದರು.

Huge farmers’ convention in the city on June 9th

Share

Leave a comment

Leave a Reply

Your email address will not be published. Required fields are marked *

Don't Miss

ಬಾಲ್ಯ ವಿವಾಹ ನಡೆದರೆ ಪೋಕ್ಸೋ ಪ್ರಕರಣ ದಾಖಲಿಸಲು ಸೂಚನೆ

ಚಿಕ್ಕಮಗಳೂರು: ಬಾಲ್ಯ ವಿವಾಹಕ್ಕೆ ನಿಷೇಧವಿದ್ದರೂ, ರಹಸ್ಯವಾಗಿ ಅಪ್ರಾಪ್ತರ ಮದುವೆ ನಡೆದರೆ ಪೋಕ್ಸೋ ಕಾಯಿದೆಯಡಿಯಲ್ಲೂ ಪ್ರಕರಣ ದಾಖಲಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್ ರೇಶ್ಮಾ ಸೂಚಿಸಿದ್ದಾರೆ. ಅವರು ಮಂಗಳವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು...

ಜೀವರಾಜ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ ದಾಖಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬಿಜೆಪಿ ಶಾಸಕ ಡಿ.ಎನ್. ಜೀವರಾಜ್...

Related Articles

ಹೃದಯಾಘಾತದಿಂದ ಶೃಂಗೇರಿಯ ಪಿ.ಸಿ. ಸತೀಶ್ ನಿಧನ

ಚಿಕ್ಕಮಗಳೂರು: ಶೃಂಗೇರಿ ಇಆರ್‌ಎಸ್‌ಎಸ್ (ERSS) ರೆಸ್ಪಾಂಡರ್ ಪಿ.ಸಿ. 612 ಸತೀಶ್ ಅವರು ಇಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಜರಾಗಲು...

ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ನೂತನ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆ

ಚಿಕ್ಕಮಗಳೂರು : ನಗರದ ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆಗಾಗಿ ಭಾನುವಾರ...

ಜೀನವಸಂಧ್ಯಾದ ನವೀಕೃತ ಪಾಕಶಾಲೆ ಲೋಕಾರ್ಪಣೆ

ಚಿಕ್ಕಮಗಳೂರು: ಜೀನವಸಂಧ್ಯಾದಲ್ಲಿ ೩೫ಲಕ್ಷರೂ. ಅಂದಾಜುವೆಚ್ಚದ ನವೀಕೃತ ಪಾಕಶಾಲೆ ಮತ್ತು ಸಿಬ್ಬಂದಿ ವಸತಿಗೃಹವನ್ನು ರೋಟರಿಜಿಲ್ಲಾ ಮಾಜಿಗೌರ್‍ನರ್ ಎಂ.ಸಿ.ಶೇಖರ್...

ಮಲೆನಾಡು ಭಾಗದಲ್ಲಿ ವರುಣನ ಅಬ್ಬರ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ವರುಣನ ಅಬ್ಬರ ಜೋರಾಗಿದ್ದು ಜಿಲ್ಲೆಯ ಹಲವೆಡೆ ಧಾರಾಕಾರ...